ಸಾಮಾಜಿಕ ನ್ಯಾಯಕೊಟ್ಟ ಅರಸು ವ್ಯಕ್ತಿತ್ವ ಸ್ಮರಣೀಯ


Team Udayavani, Aug 21, 2017, 10:43 AM IST

gul 5.jpg

ಆಳಂದ: ಸಾಮಾಜಿಕ ನ್ಯಾಯ ಒದಗಿಸಿಕೊಟ್ಟ ಮಾಜಿ ಮುಖ್ಯಮಂತ್ರಿ ದಿ| ಡಿ. ದೇವರಾಜ ಅರಸು ಅವರದ್ದು
ಅವಿಸ್ಮರಣೀಯ ವ್ಯಕ್ತಿತ್ವ ಎಂದು ಶಾಸಕ ಬಿ.ಆರ್‌. ಪಾಟೀಲ ಹೇಳಿದರು. ಪಟ್ಟಣದ ತಹಶೀಲ್ದಾರ ಕಚೇರಿ ಆವರಣದಲ್ಲಿ ತಾಲೂಕು ಆಡಳಿತ ಹಮ್ಮಿಕೊಂಡಿದ್ದ ಡಿ. ದೇವರಾಜ ಅರಸು ಅವರ 102ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅರಸು ಅವರು ನೀಡಿದ ಮೀಸಲಾತಿ ಸೌಲಭ್ಯ ಪಡೆದ ಸಮುದಾಯಗಳು ಎಂದಿಗೂ ಮರೆಯದಂತ್ತಿದೆ. ಅರಸು ಸಾಮಾಜಿಕ ನ್ಯಾಯದ ಹಿನ್ನೆಲೆಯಲ್ಲಿ ಬಹುದೊಡ್ಡ ಕ್ರಾಂತಿ ಮಾಡಿದ್ದಾರೆ. ಮೀಸಲಾತಿ ಮೂಲಕ ಹಿಂದುಳಿದ, ಶೋಷಿತ ವರ್ಗಕ್ಕೆ ನೀಡಿದ ಕೊಡುಗೆ ಲಾಭ ಪಡೆದವರು ದೊಡ್ಡ ಸಂಖ್ಯೆಯಲ್ಲಿ ಸೇರಿ ಸ್ಮರಣೆ ಮಾಡಬೇಕು. ಆದರೆ ಕೊಡುಗೆ ನೀಡಿದ ವ್ಯಕ್ತಿಗಳನ್ನೇ ಜನರು ಮರೆಯುತ್ತಿರುವುದು ಸರಿಯಲ್ಲ ಎಂದು ಹೇಳಿದರು. ಜನಪರ ಕೆಲಸ ಮಾಡಿದ ಅರಸು ಸೇರಿ ಬಸವಣ್ಣ, ವಿ.ಪಿ.ಸಿಂಗ್‌, ಮಹಾತ್ಮಗಾಂಧೀಜಿ ಅನುಭವ ನೋಡಿದ್ದೇವೆ. ಗಾಂಧಿಧೀಜಿ ಯಾವ ಹುದ್ದೆಯಲ್ಲೂ ಇರಲಿಲ್ಲ. ಅವರ ಕಾರ್ಯದ ಬೆನ್ನಿಗೆ ನಿಲ್ಲಲ್ಲಿಲ್ಲ. ಅದೇ ಪರಿಸ್ಥಿತಿ ಅರಸರಿಗೂ ಆಗಿದೆ. 80ರ ದಶಕದಲ್ಲಿ ಅರಸು ಅವರಿಂದ ಲಾಭ ಪಡೆದವರು ಸಹ ಅವರ ಬೆಂಬಲಕ್ಕೆ ಅಂದು ನಿಂತುಕೊಳ್ಳಲಿಲ್ಲ ಎಂದು ಹೇಳಿದರು. ಅರಸು ಸರಳ ಸಜ್ಜನಿಕೆ ವ್ಯಕ್ತಿಯಾಗಿದ್ದಾರೆ. ಹಿಂದೆ ಕಲಬುರಗಿಗೆ ಬಂದಾಗ ಅವರ ಬೆಂಬಲಕ್ಕೆ ಯಾರು ನಿಲ್ಲಲಿಲ್ಲ. ಒಬ್ಬರೆ ಕಾರಿನಲ್ಲಿ ಹೋದರು ಮಾತನಾಡಿಸಲಿಲ್ಲ. ಇಂಥ ಸ್ಥಿತಿ ಪರಿರ್ವನೆ ಮಾಡಿದವರೆಲ್ಲರಿಗೂ ಬಂದಿದೆ. ಹುಸಿ ಭರವಸೆ ಮತ್ತು ರಾಜಿಸಂಧಾನ ವೊಂದಿದ್ದರೆ ರಾಜಕೀಯದಲ್ಲಿ ಏನೆಲ್ಲ ಆಗುತ್ತದೆ
ಎಂದು ಹೇಳಿದರು. ತಹಶೀಲ್ದಾರ ಬಸವರಾಜ ಎಂ. ಬೆಣ್ಣೆಶಿರೂರ,‌ ಉಪನ್ಯಾಸಕ ರಮೇಶ ಮಾಡಿಯಾಳ
ಮಾತನಾಡಿದರು. ಪುರಸಭೆ ಮಾಜಿ ಅಧ್ಯಕ್ಷ ವಿಠ್ಠಲರಾವ ಪಾಟೀಲ, ಉಪಾಧ್ಯಕ್ಷ ಅಜಗರ ಅಲಿ ಹವಾಲ್ದಾರ, ಹಿಂದುಳಿದ ವರ್ಗದ ವಿಸ್ತೀಣಾ ಧಿಕಾರಿ ಅಂಬವ್ವ ಬಿ. ಪೂಜಾರಿ, ಗ್ರೇಡ್‌-2 ತಹಶೀಲ್ದಾರ ಬಿ.ಜಿ. ಕುದರಿ ಮತ್ತು ಎಇಇ ತಾನಾಜಿ
ವಾಡೇಕರ್‌, ಗ್ರಾಮೀಣ ಎಇಇ ಅಬ್ದುಲ ಸಲಾಂ ಪಿಎಸ್‌ಐ ಸುರೇಶ ಪ್ರಭು, ಪುರಸಭೆ ಸದಸ್ಯ ಕಭೀರಾ ಬೇಗಂ, ಸುಲೇಮಾನ್‌ ಮುಕುಟ್‌, ಸೂರ್ಯಕಾಂತ ಬೋಸ್ಲೆ, ಕಂದಾಯ ನಿರೀಕ್ಷಕ ಶರಣಬಸಪ್ಪ ಹಕ್ಕಿ, ರಮೇಶ ಮಾಳಿ ಪಾಲ್ಗೊಂಡಿದ್ದರು. ಕಲ್ಯಾಣಿ ಬಿಜ್ಜರ್ಗಿ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.