ಉತ್ಸವದಲ್ಲಿ ಕಾಣಲಿಲ್ಲ ರಾಷ್ಟ್ರಕೂಟರ ಭಾವಚಿತ್ರ


Team Udayavani, Mar 5, 2018, 11:05 AM IST

GUL-4.jpg

ಸೇಡಂ: ಉತ್ಸವ ಅಂದರೆ ಆ ಸ್ಥಳದ ಇತಿಹಾಸ, ವ್ಯಕ್ತಿಚಿತ್ರ, ಸಂಸ್ಕೃತಿ, ಸಂಪ್ರದಾಯಗಳನ್ನು ಅನಾವರಣಗೊಳಿಸುವುದು. ಆದರೆ ರಾಷ್ಟ್ರಕೂಟರ ಸಣ್ಣ ಭಾವಚಿತ್ರವಿಲ್ಲದೆಯೇ ಇಡೀ ಉತ್ಸವ ನಡೆದಿದೆ. ಇಂತದ್ದೊಂದು ಅಪರೂಪದ, ವಿಲಕ್ಷಣ ಘಟನೆ ತಾಲೂಕಿನ ಮಳಖೇಡ ಗ್ರಾಮದಲ್ಲಿ ಜಿಲ್ಲಾಡಳಿತ ಎರಡು ದಿನಗಳ ಕಾಲ ಹಮ್ಮಿಕೊಂಡ ರಾಷ್ಟ್ರಕೂಟರ ಉತ್ಸವದಲ್ಲಿ ಕಂಡು ಬಂದಿದೆ. ಉತ್ಸವ ಯಾರ ಹೆಸರಿನ ಮೇಲೆ ನಡೆಯುತ್ತಿವೆಯೋ ಅವರಪರಿಚಯ ಬಂದಂತಹ ಪ್ರೇಕ್ಷಕರಿಗೆ, ಯಾತ್ರಾರ್ಥಿಗಳಿಗೆ ಮತ್ತು ವಿದ್ಯಾರ್ಥಿಗಳಿಗೆ  ಆಗಬೇಕು. ಆದರೆ ಇಡೀ ಸಮಾರಂಭದ ಯಾವ ಮೂಲೆಯಲ್ಲಿಯೂ ನೃಪತುಂಗ ಚಕ್ರವರ್ತಿ ಕುರುಹು ಸಿಗಲಿಲ್ಲ.

ಬಹುನಿರೀಕ್ಷಿತ ರಾಷ್ಟ್ರಕೂಟರ ಉತ್ಸವ ಕೆಲ ಅನಾನುಕೂಲತೆಗಳಿಂದ ಮುಂದುವರಿಯಿತು. ಸಂಸದ ಮಲ್ಲಿಕಾರ್ಜುನ ಖರ್ಗೆ ಸೇರಿ ಬಹುತೇಕ ಗಣ್ಯರ ಅನುಪಸ್ಥಿತಿ ಮತ್ತು ನಿರೀಕ್ಷಿತ ಮಟ್ಟದಲ್ಲಿ ಜನ ಸೇರದೇ ಇರುವುದು ಎದ್ದು ಕಾಣುತ್ತಿತ್ತು. ಈ ಮಧ್ಯೆ ಬಹುತೇಕ ಸ್ಥಳೀಯ ಸಾಹಿತಿ ಮತ್ತು ಕನ್ನಡಪರ ಸಂಘಟನೆಗಳ ಪ್ರಮುಖರನ್ನು ಕಡೆಗಣಿಸಿರುವುದು ಅನೇಕರ ಅಸಮಾಧಾನಕ್ಕೆ ಎಡೆಮಾಡಿಕೊಟ್ಟಿತು. 

ಹಂಪಿ ಉತ್ಸವದ ಮಾದರಿಯಲ್ಲಿ ರಾಷ್ಟ್ರಕೂಟರ ಉತ್ಸವ ಆಚರಿಸಲಾಗುವುದು ಎಂಬ ಮಾತು ಕೇಳಿ ಬಂದಿತ್ತು. ಆದರೆ ಕೋಟೆ ಕೇವಲ ಕಲ್ಲುಗಳಿಗೆ ಮಾತ್ರ ಸೀಮಿತವಾಗಿತ್ತು. ಯಾವ ರೀತಿಯ ಅಲಂಕಾರವೂ ಅಲ್ಲಿ ಕಂಡು ಬರಲಿಲ್ಲ. ಕವಿರಾಜಮಾರ್ಗ ಕೃತಿ ಶಿಲಾಕೃತಿ ಮಾತ್ರ ಹೊಸದು ಎನಿಸಿತ್ತು.

ವಿಶೇಷ ಮತ್ತು ಸಾಮಾನ್ಯ ಎಂಬ ಎರಡು ವಿಭಾಗಗಳಾಗಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಸಾಮಾನ್ಯ ಜನರಿಗಾಗಿ ನೀಡಿದ ಊಟದಲ್ಲಿ ಅನ್ನ ಮತ್ತು ತರಕಾರಿನೂ ಸರಿಯಾಗಿ ಬೇಯಿಸದಿರುವುದು ಕಂಡು ಬಂತು. ಇದರಿಂದ ನೀರು ಅನ್ನ ಮತ್ತು ಹಸಿ ತರಕಾರಿ ತಿಂದ ಅನುಭವವಾಯಿತು.. ಊಟದ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ಕುಡಿಯುವ ನೀರಿಗೆ ಹರಸಾಹಸ ಪಟ್ಟು ದಾಹ ನೀಗಿಸಿಕೊಳ್ಳುವಂತಾಯಿತು ಎಂದು ಕಾರ್ಯಕ್ರಮಕ್ಕೆ ಆಗಮಿಸಿದ್ದ ಜನರು ಅಳಲು ತೋಡಿಕೊಂಡರು. ಕೇವಲ ತಮ್ಮ ಪ್ರತಿಷ್ಠೆಯನ್ನು ರಾಜ್ಯಮಟ್ಟದಲ್ಲಿ ಬಿಂಬಿಸಿಕೊಳ್ಳಲು ರಾಷ್ಟ್ರಕೂಟರ ಉತ್ಸವ ಆಚರಿಸಲಾಗುತ್ತಿದೆ. ರಾಷ್ಟ್ರಕೂಟರ ನೆಲೆ ಉಳಿಸಲು ಹೋರಾಟ ನಡೆಸಿದ ಅನೇಕ ಹೋರಾಟಗಾರರನ್ನು ಕಡೆಗಣಿಸಲಾಗಿದೆ ಎಂದು ಮಳಖೇಡ ನಮೋ ಬುದ್ಧ ಸೇವಾ ಕೇಂದ್ರದ ಅಧ್ಯಕ್ಷ ರಾಜಕುಮಾರ ಕಟ್ಟಿ ಆರೋಪಿಸಿದರು.

ಶಿವಕುಮಾರ ಬಿ. ನಿಡಗುಂದಾ

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.