![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಮಹಾವೀರರ ತತ್ವ ಅಳವಡಿಸಿಕೊಳ್ಳಿ
Team Udayavani, Apr 10, 2017, 3:34 PM IST
![gul5.jpg](https://www.udayavani.com/wp-content/uploads/2017/04/10/gul5.jpg)
ಜೇವರ್ಗಿ: ಪ್ರತಿಯೊಬ್ಬರು ಭಗವಾನ ಮಹಾವೀರರ ಅಹಿಂಸಾ ತತ್ವಗಳನ್ನು ಬದುಕಿನಲ್ಲಿ ಆಳವಡಿಸಿಕೊಂಡು ಸತ್ಯವನ್ನು ನುಡಿಯುತ್ತ ಸನ್ಮಾರ್ಗದಲ್ಲಿ ನಡೆಯಬೇಕು ಎಂದು ಜೆಡಿಎಸ್ ಮುಖಂಡ ಚನ್ನಮಲ್ಲಯ್ಯ ಹಿರೇಮಠ ಹೇಳಿದರು. ಪಟ್ಟಣದ ತಹಶೀಲ್ದಾರ ಕಚೇರಿ ಆವರಣದಲ್ಲಿ ತಾಲೂಕು ಆಡಳಿತದ ವತಿಯಿಂದ ರವಿವಾರ ಆಯೋಜಿಸಲಾಗಿದ್ದ ಮಹಾವೀರ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಜೀವನದ ವೈರಾಗ್ಯ, ಜೀವನದ ಸಂದೇಶಗಳನ್ನು ತಿಳಿಸಿದ ಮಹಾವೀರರ ತತ್ವಗಳು ಸರ್ವಕಾಲಿಕವಾಗಿವೆ. ಕ್ರಿ.ಪೂ. 6ನೇ ಶತಮಾನದಲ್ಲಿ ಜನಿಸಿದ ಮಹಾವೀರ ಜೀವನದಲ್ಲಿ ಎಲ್ಲ ಐಶ್ವರ್ಯ ಪಡೆದುಕೊಂಡಿದ್ದ. ಹೆಂಡತಿ, ಮಕ್ಕಳು ಇದ್ದರೂ ಜೀವನದ ಜಂಜಾಟ ತೊರೆದು ಜಗತ್ತಿಗೆ ಉತ್ತಮ ಸಂದೇಶ ನೀಡಿದರು.
ಅಲ್ಲದೆ ಜೇವರ್ಗಿ ಪಟ್ಟಣ, ತಾಲೂಕಿನ ಇಜೇರಿ, ಹಂಗರಗಾ ಸೇರಿದಂತೆ ಅನೇಕ ಕಡೆ ಜೈನ ಧರ್ಮದ ಕುರುಹುಗಳಿವೆ. ಸಮಾಜದವರು ಮತ್ತು ಸರಕಾರಗಳು ಅಂತಹ ಸ್ಮಾರಕಗಳನ್ನು ರಕ್ಷಿಸುವ ಕೆಲಸ ಮಾಡಬೇಕು. 24ನೇ ತೀರ್ಥಂಕರನಾದ ಮಹಾವೀರ ಜಗತ್ತಿಗೆ ಅಹಿಂಸಾ ತತ್ವ ನೀಡಿ ಶಾಂತಿ ಸಂದೇಶ ನೀಡಿದ್ದಾರೆ.
ಅವರ ತತ್ವಗಳು ನಮಗೆ ದಾರಿ ದೀಪವಾಗಬೇಕು ಎಂದು ಹೇಳಿದರು. ತಹಶೀಲ್ದಾರ ಯಲ್ಲಪ್ಪ ಸುಬೇದಾರ, ಶಿರಸ್ತೇದಾರ ಗುರುರಾಜ ಸಂಗಾವಿ, ಆಹಾರ ನಿರೀಕ್ಷಕ ಡಿ.ಬಿ. ಪಾಟೀಲ, ಸಾಯಬಣ್ಣ, ಜೈನ್ ಸಮಾಜದ ತಾಲೂಕು ಅಧ್ಯಕ್ಷ ಅಂಬಣ್ಣ ಜೈನ,
ಅಶೋಕ ಪಾಟೀಲ ಕಲ್ಲಹಂಗರಗಾ, ದೇವಿಂದ್ರ ಜೈನ್, ಪ್ರದೀಪ ಪಂಡಿತ, ಧನರಾಜ ಸಾಹು ಇಜೇರಿ, ನಾರಾಯಣ ಇಜೇರಿ, ಬ್ರಹ್ಮಶುರ ಪಂಡಿತ, ಭರಮಣ್ಣ ಇಜೇರಿ, ಶಾಂತಿನಾಥ ಪಾಟೀಲ ಕಲ್ಲಹಂಗರಗಾ, ರಾಮಪ್ಪ, ಶಾಂತಪ್ಪ ಪಾಟೀಲ, ಉಸ್ಮಾನ ಸಿಪಾಯಿ ಇದ್ದರು.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![13-sedam](https://www.udayavani.com/wp-content/uploads/2024/07/13-sedam-150x90.jpg)
Sedam: ಕರ್ತವ್ಯ ನಿರತ ವೈದ್ಯರ ಮೇಲೆ ಹಲ್ಲೆ, ಆರೋಪಿಗಳ ಬಂಧನಕ್ಕೆ ಆಗ್ರಹ
![1-sci](https://www.udayavani.com/wp-content/uploads/2024/07/1-sci-150x91.jpg)
Agricultural scientist ತಳಿ ಸಂಶೋಧಕ ಡಾ. ಎಸ್.ಎ.ಪಾಟೀಲ್ ನಿಧನ
![ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು](https://www.udayavani.com/wp-content/uploads/2024/07/chikk1-150x83.jpg)
Kaduru; ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು
![Serial Thief: ಚಿತ್ತಾಪುರ ಪಟ್ಟಣದ ಐದು ಮನೆಗಳಲ್ಲಿ ಕಳ್ಳತನ; ಸಿಸಿಟಿವಿಯಲ್ಲಿ ದೃಶ್ಯ ಸೆರೆ](https://www.udayavani.com/wp-content/uploads/2024/07/chittapura-1-150x84.jpg)
Serial Thief: ಚಿತ್ತಾಪುರ ಪಟ್ಟಣದ ಐದು ಮನೆಗಳಲ್ಲಿ ಕಳ್ಳತನ, ಸಿಸಿಟಿವಿಯಲ್ಲಿ ದೃಶ್ಯ ಸೆರೆ
![Chittapura; ಹಾಡಹಗಲೇ ಕಳ್ಳತನ ಮಾಡಿದ ಆರೋಪಿಯ ಸೆರೆ, ಸೊತ್ತು ವಶ](https://www.udayavani.com/wp-content/uploads/2024/07/chittapura-150x94.jpg)
Chittapura; ಹಾಡಹಗಲೇ ಕಳ್ಳತನ ಮಾಡಿದ ಆರೋಪಿಯ ಸೆರೆ, ಸೊತ್ತು ವಶ
MUST WATCH
ಹೊಸ ಸೇರ್ಪಡೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.