ಸಂಘಟಿತ ಹೋರಾಟ ಶ್ರಮಿಕರ ಹಕ್ಕು
Team Udayavani, Oct 24, 2021, 10:57 AM IST
ವಾಡಿ: ಕಾನೂನು ಬದ್ಧ ಹಕ್ಕುಗಳಿಂದ ವಂಚಿತರಾದ ಕಾರ್ಮಿಕರು ಸಂಘ ಕಟ್ಟಿಕೊಂಡು ಕಾರ್ಖಾನೆ ಮಾಲೀಕರ ವಿರುದ್ಧ ಹೋರಾಟ ನಡೆಸಬಹುದು. ಸಮಾನ ಕೆಲಸಕ್ಕೆ ಸಮಾನ ವೇತನ ಕೇಳುವುದು ಶ್ರಮಿಕರ ಹಕ್ಕಾಗಿದೆ ಎಂದು ಕಲಬುರಗಿ ನಾಲ್ಕನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾದೀಶ ನಂದಕುಮಾರ.ಬಿ. ಹೇಳಿದರು.
ತಾಲೂಕು ಕಾನೂನು ಸೇವಾ ಸಮಿತಿ ಚಿತ್ತಾಪುರ, ತಾಲೂಕು ವಕೀಲರ ಸಂಘ, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ ಸಹಯೋಗದಲ್ಲಿ ಶನಿವಾರ ಎಸಿಸಿ ನ್ಪೋರ್ಟ್ಸ್ ಕ್ಲಬ್ನಲ್ಲಿ ಏರ್ಪಡಿಸಲಾಗಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕಂಪನಿ ಮಾಲೀಕರು ಕಾರ್ಮಿಕರನ್ನು ದುಡಿಸಿಕೊಂಡು ಬೇಕಾಬಿಟ್ಟಿ ಸಂಬಳ ನೀಡುವಂತಿಲ್ಲ. ಬದುಕು ಕಟ್ಟಿಕೊಳ್ಳಲು ಸಾಧ್ಯವಾಗುವಷ್ಟು ಸಂಬಳ ನೀಡಬೇಕು. ಮಹಿಳಾ ಕಾರ್ಮಿಕರಿಗೆ ಹೆರಿಗೆ ರಜೆ ಸಹಿತ ಸಂಬಳ ನೀಡಬೇಕು. ಆರೋಗ್ಯ ಸುರಕ್ಷತೆಗಾಗಿ ಆಸ್ಪತ್ರೆ ಮತ್ತು ಕೆಲಸದ ಸ್ಥಳದಲ್ಲಿ ಮೂಲಭೂತ ಸೌಕರ್ಯಗಳನ್ನು ಕಡ್ಡಾಯವಾಗಿ ಒದಿಗಸಬೇಕು ಎಂದರು.
ಇದನ್ನೂ ಓದಿ: ನಾಳೆಯಿಂದ 1-5ನೇ ತರಗತಿ ಶಾಲೆಗಳು ಆರಂಭ : ಸರ್ಕಾರದ ಗೈಡ್ ಲೈನ್ಸ್ ಅನುಸಾರ ತರಗತಿ ಶುರು
ಗ್ರಾಮೀಣ ಜನರನ್ನು ಕಾಡುತ್ತಿರುವ ಅನಕ್ಷರತೆ ಹೊಡೆದೋಡಿಸಲು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಶಿಕ್ಷಣ ಪಡೆಯುವುದು ಎಂದರೆ ಕೇವಲ ಸಹಿ ಮಾಡುವುದನ್ನು ಕಲಿತರಷ್ಟೇ ಸಾಲದು. ಯಾವ ದಾಖಲೆಗಳ ಮೇಲೆ ಸಹಿ ಮಾಡುತ್ತಿದ್ದೇನೆ ಎಂಬುದನ್ನು ಅರಿಯುವಂತಾಗಬೇಕು ಎಂದರು.
ವಕೀಲ ಮಲ್ಲಿಕಾರ್ಜುನ ಹೊನಗುಂಟಿ ಮಾತನಾಡಿ, ನಗರದಲ್ಲಿ ರಸ್ತೆಗಳು ಸರಿಯಿಲ್ಲ. ರಸ್ತೆ ದಿಣ್ಣೆಗಳು ವೈಜ್ಞಾನಿಕವಾಗಿಲ್ಲ. ರಸ್ತೆಗಳಿಗೆ ಸುರಕ್ಷತಾ ಫಲಕ ಅಳವಡಿಸಿಲ್ಲ. ಬೈಕ್ಗಳ ಮೇಲೆ ಮೂರ್ನಾಲ್ಕು ಜನರು ಕುಳಿತು ಹೋಗುತ್ತಿದ್ದರೂ ಯಾರೂ ಕೇಳುವವರಿಲ್ಲ. ಅಸಮಾಧಾನ ವ್ಯಕ್ತಪಡಿಸಿದರು.
ಸಹಾಯಕ ಸರ್ಕಾರಿ ಅಭಿಯೋಜಕಿ ಅಂಜನಾದೇವಿ ಆರ್., ವಕೀಲರಾದ ಸಂಗೀತಾ ಭದ್ರಶೆಟ್ಟಿ ಮಾತನಾಡಿದರು. ತಾಲೂಕು ನ್ಯಾಯವಾದಿಗಳ ಸಂಘದ ಅಧ್ಯಕ್ಷ ಗಂಗಾಧರ ಸಾಲಿಮಠ, ಮಾಜಿ ಅಧ್ಯಕ್ಷ ಗಿರಿಧರ ವೈಷ್ಣವ, ಎಸಿಸಿ ಕಂಪನಿ ನಿರ್ದೇಶಕ ಸೀತಾರಾಮುಲು, ಎಚ್ಆರ್ ವಿಭಾಗದ ಮುಖ್ಯ ವ್ಯವಸ್ಥಾಪಕ ನಾಗೇಶ್ವರರಾವ್ ಟೆನ್ನಟ, ಸಿಪಿಐ ಕೃಷ್ಣಪ್ಪ ಕಲ್ಲೆದೇವರು, ಪಿಎಸ್ಐ ವಿಜಯಕುಮಾರ ಭಾವಗಿ, ಕ್ರೈಂ ಪಿಎಸ್ಐ ತಿರುಮಲೇಶ, ಕಾರ್ಮಿಕ ಸಂಘದ ಉಪಾಧ್ಯಕ್ಷ ರಮೇಶ ಕಾರಬಾರಿ, ತುಕಾರಾಮ ರಾಠೊಡ, ಸಫಿಸಾಹೇಬ್ ಬನಾಡ, ಪೆದ್ದಣ್ಣ ಬಿಡಾಳ, ರಮೇಶ ಮುದುಕುಡಿ, ಲಕ್ಷ್ಮೀಕಾಂತ ಬಿರಾದಾರ, ಕಾಶೀನಾಥ ಹಿಂದಿನಕೇರಿ, ಪ್ರೀತಿ ಜೈನ್, ಕವಿತಾ ಜೋಶಿ ಪಾಲ್ಗೊಂಡಿದ್ದರು. ಶ್ರೀಕಾಂತ ಕುಲಕರ್ಣಿ ನಿರೂಪಿಸಿದರು, ಎಸಿಸಿ ಎಚ್ಆರ್ ಸಹಾಯಕ ವ್ಯವಸ್ಥಾಪಕ ಯತೀಶ ರಾಜಶೇಖರ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ