ಮಕ್ಕಳ ಪಾಲನೆಯಲ್ಲಿ ತಾಯಂದಿರ ಪಾತ್ರ ಹೆಚ್ಚು
Team Udayavani, Mar 8, 2018, 12:43 PM IST
ಚಿತ್ತಾಪುರ: ತಾಲೂಕಿನ ಅಳ್ಳೋಳ್ಳಿ ಗ್ರಾಮದ ಜ್ಞಾನ ಜ್ಯೋತಿ ಶಾಲೆ ಆವರಣದಲ್ಲಿ ವಿಶ್ವ ಜನಸೇವಾ ಸಂಸ್ಥೆ ವತಿಯಿಂದ ಮಾತೃ ಮಿಲನ್ ಹಾಗೂ ಚಿಣ್ಣರಿಗೆ ಕೈ ತುತ್ತಿನ ಊಟ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಗುಲಬರ್ಗಾ ವಿಶ್ವ ವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ ಡಾ| ವೀರಣ್ಣ ದಂಡೆ, ಮಕ್ಕಳ ಪಾಲನೆ ಪೋಷಣೆಯಲ್ಲಿ ತಾಯಂದಿರ ಪಾತ್ರ ಮಹತ್ವದ್ದಾಗಿದೆ. ತಾಯಂದಿರು ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಬೇಕು ಎಂದು ಕರೆ ನೀಡಿದರು.
ಜಾನಪದ ಅಕಾಡೆಮಿ ಸದಸ್ಯ ಪ್ರಕಾಶ ಕನ್ನಳ್ಳಿ ಮಾತನಾಡಿ, ಮಕ್ಕಳಲ್ಲಿ ಹುದಗಿದ ಪ್ರತಿಭೆ ಗುರುತಿಸಲು ಪ್ರದರ್ಶನ
ಅಗತ್ಯವಾಗಿದೆ ಎಂದು ಹೇಳಿದರು. ಗುಲಬರ್ಗಾ ವಿಶ್ವ ವಿದ್ಯಾಲಯ ಕನ್ನಡ ಅಧ್ಯಯನ ವಿಭಾಗದ ಪ್ರಾಧ್ಯಾಪಕಿ ಜಯಶ್ರೀ ದಂಡೆ ಮಾತನಾಡಿ, ತಾಯಂದಿರು ತಮ್ಮ ಮಕ್ಕಳಿಗೆ ಜೀಜಾಬಾಯಿಯಂತೆ ಆದರ್ಶ ಗುಣಗಳನ್ನು ಬೆಳಸಬೇಕು ಎಂದು ಸಲಹೆ ನೀಡಿದರು.
ಮಾತೃ ಮಿಲನ ಕುರಿತು ಪೂಜಾ ಭಂಕಲಗಿ ಉಪನ್ಯಾಸ ನೀಡಿದರು. ಸಂಸ್ಥೆ ಉಪಾಧ್ಯಕ್ಷೆ ಸಿದ್ದಮ್ಮ ಸ್ಥಾವರಮಠ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ತಾಯಿಂದರು ಮಕ್ಕಳಿಗೆ ಕೈ ತುತ್ತು ಊಟ ಮಾಡಿಸಿ ಸಂಭ್ರಮಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನಾ ಧಿಕಾರಿ ಬಾಸ್ಕರ್ ಪಟಗಾರ ಅವರನ್ನು ಸನ್ಮಾನಿಸಲಾಯಿತು. ಸಂಸ್ಥೆ ಅಧ್ಯಕ್ಷ ನಾಗಯ್ಯ ಸ್ವಾಮಿ ಅಲ್ಲೂರ, ಸೇಡಂ ಸಾಹಿತಿ ಲಿಂಗಾರಡ್ಡಿ ಸೇರಿ, ಗ್ರಾಪಂ ಅಧ್ಯಕ್ಷ ಸಾಬಣ್ಣ ಸಂಕನೂರ, ಮುಖಂಡರಾದ ಬಸಣ್ಣ ಭಜಂತ್ರಿ, ಪಂಚಾಕ್ಷರಿ ಪೂಜಾರಿ, ನಾಗಮ್ಮ ಚಿತ್ತಾಪುರಕರ್ ಇದ್ದರು. ಶಾಲೆ ಮುಖ್ಯಶಿಕ್ಷಕ ಲಿಂಗಣ್ಣ ಮಲ್ಕನ್ ಸ್ವಾಗತಿಸಿದರು. ಸಂಗೀತಾ ಬೇಲಿ ನಿರೂಪಿಸಿದರು. ಮಹಾಲಕ್ಷ್ಮೀ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ