ಎನ್ಇಪಿ ಅನುಷ್ಠಾನದಲ್ಲಿ ಶಿಕ್ಷಕರ ಪಾತ್ರ ಪ್ರಮುಖ
Team Udayavani, Oct 28, 2021, 10:46 AM IST
ಕಲಬುರಗಿ: ಜ್ಞಾನದ ಜತೆ ಕೌಶಲ್ಯಗಳು, ಬದುಕು ಕಲಿಸಿಕೊಡುವ ನೂತನ ಶಿಕ್ಷಣ ನೀತಿ ಪರಿಣಾಮಕಾರಿಯಾಗಿ ರಾಷ್ಟ್ರದ್ಯಾಂತ ಜಾರಿಗೊಳ್ಳಬೇಕಾದರೆ ಶಿಕ್ಷಕರು ಹೊಸ ವಿಷಯಗಳನ್ನು ತಿಳಿದುಕೊಂಡು ಸೃಜನಶೀಲತೆಯೊಂದಿಗೆ ಗುಣಾತ್ಮಕ ಬೋಧನೆ ಮಾಡಬೇಕು ಎಂದು ಎಬಿಆರ್ಎಸ್ಎಂ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ನೂತನ ಶಿಕ್ಷಣ ನೀತಿಯ ಕಾರ್ಯಕಾರಿ ಸದಸ್ಯ ಶಿವಾನಂದ ಸಿಂಧನಕೇರಾ ಹೇಳಿದರು.
ನಗರದ ಆಳಂದ ರಸ್ತೆಯ ಇಂಡೋ-ಕಿಡ್ಜ್ ಶಾಲೆ ಸಭಾಂಗಣದಲ್ಲಿ ಜಿಲ್ಲಾ ಮಾಧ್ಯಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಏರ್ಪಡಿಸಿದ್ದ ಗೌರವ ಸತ್ಕಾರ ಸ್ವೀಕರಿಸಿ ಅವರು ಮಾತನಾಡಿದರು.
ಎನ್ಇಪಿ ವಿದ್ಯಾರ್ಥಿಗಳಿಗೆ ಸ್ವಾವಲಂಬನೆ ಜೀವನ ರೂಪಿಸುವ ಈ ನೀತಿಯಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾಗಿದೆ. ಅಖೀಲ ಭಾರತ ರಾಷ್ಟ್ರೀಯ ಶೈಕ್ಷಿಕ್ ಮಹಾಸಂಘವು ರಾಷ್ಟ್ರಮಟ್ಟದಲ್ಲಿ ಶೈಕ್ಷಣಿಕ ಅಭಿವೃದ್ಧಿಗಾಗಿ ನಿರಂತರವಾಗಿ ಶ್ರಮಿಸುತ್ತಿದೆ. ಮಾಧ್ಯಮಿಕ ಶಾಲಾ ಶಿಕ್ಷಕರ ಸಂಘವು ಗುಣಾತ್ಮಕ ಶಿಕ್ಷಣಕ್ಕಾಗಿ ಒತ್ತು ನೀಡಿ ಕೆಲಸ ಮಾಡುತ್ತಿದೆ. ತಮಗೆ ಎರಡನೇ ಬಾರಿ ರಾಷ್ಟ್ರಮಟ್ಟದಲ್ಲಿ ಸೇವೆ ಸಲ್ಲಿಸುವ ಅವಕಾಶ ದೊರಕಿದ್ದು, ಕಲ್ಯಾಣ ಕರ್ನಾಟಕ ಭಾಗಕ್ಕೆ ಹೆಮ್ಮೆಯ ಸಂಗತಿಯಾಗಿದೆ ಎಂದರು.
ಇದನ್ನೂ ಓದಿ: ಪೂರ್ವಿಕಾ ದೀಪಾವಳಿ ಮೆಗಾ ಡೀಲ್
ಕಲ್ಯಾಣ ಕರ್ನಾಟಕ ಭಾಗದ ಜನರು ಕೀಳರಿಮೆ ತೊರೆದು, ಇನ್ನೂ ಹೆಚ್ಚಿನ ರೀತಿಯಲ್ಲಿ ಶ್ರಮಿಸಬೇಕಾಗಿದೆ. ನಮ್ಮ ಸಾಧನೆಯೇ ಉತ್ತರವಾಗಬೇಕು. ಶರಣರ, ಸಂತರ ಪುಣ್ಯಭೂಮಿ ಇದಾಗಿದ್ದು, ಸಾಧನೆ ಮಾಡಲು ನಿಂತರೆ ಎಲ್ಲವೂ ಸಾಧ್ಯ ಎಂದು ಹೇಳಿದರು.
ಎಚ್.ಬಿ.ಪಾಟೀಲ, ಚಂದ್ರಶೇಖರ ಪಾಟೀಲ, ಕೆ.ಬಸವರಾಜ, ಚಂದ್ರಕಾಂತ ಬಿರಾದಾರ, ಸಂಜೀವಕುಮಾರ ಪಾಟೀಲ, ಶಿವಶರಣ ಉದನೂರ, ವಿಲಾಸರಾವ ಸಿನ್ನೂರಕರ್, ಶ್ರೀಪಾಲ ಭೋಗಾರ, ನಾನಾಗೌಡ ಪಾಟೀಲ, ಪ್ರಭುಲಿಂಗ ಮೂಲಗೆ, ಅಂಬಾರಾಯ ಬನ್ನೂರ್, ಶಿವಪುತ್ರಪ್ಪ ಬಿರಾದಾರ, ನಾಗರಾಜ ಆರ್., ವಿಠuಲ ಕುಂಬಾರ, ಅನಿಲ ಧೋತ್ರೆ ಮತ್ತಿತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ