ಮತ್ತೆ ಬರದ ಛಾಯೆ: ಬಿಸಿಲಿನ ತಾಪಕ್ಕೆ ಒಣಗುತ್ತಿದೆ ತೊಗರಿ ಬೆಳೆ


Team Udayavani, Nov 17, 2018, 11:13 AM IST

gul-3.jpg

ಶಹಾಬಾದ: ಹೋಬಳಿ ವಲಯದಲ್ಲಿರುವ ರೈತರು ಮಳೆರಾಯನ ಅವಕೃಪೆಗೆ ಒಳಗಾಗಿ ಸಂಪೂರ್ಣ ಕಂಗಾಲಾಗಿದ್ದಾರೆ. ಬೆಳೆದಂತಹ ಬೆಳೆ ತಮ್ಮ ಮುಂದೆ ಬಾಡುತ್ತಿರುವುದನ್ನು ನೋಡಿ ಕಣ್ಣೀರಿಡುತ್ತಿದ್ದಾರೆ. ಹೀಗಾಗಿ ಮತ್ತೂಮ್ಮೆ ಈ ಭಾಗದ ರೈತರು ಬರದ ಛಾಯೆಯಿಂದ ಚಿಂತಾಜನಕರಾಗಿದ್ದಾರೆ.

ಮುಂಗಾರು ಮಳೆ ಅಲ್ಪ ಸ್ವಲ್ಪ ಬಂದಿದ್ದರಿಂದ ಬೆಳೆ ಸಾಧಾರಣವಾಗಿತ್ತು. ಹಿಂಗಾರಿನಲ್ಲಿಯೂ ಮಳೆ ಬಂದರೆ ಬೆಳೆ ಚೇತರಿಸಿಕಳ್ಳುತ್ತದೆ ಎನ್ನುವ ನಿರೀಕ್ಷೆ ಇಟ್ಟುಕೊಂಡಿದ್ದ ರೈತರಿಗೆ ಕೊಡಲಿ ಪೆಟ್ಟು ಬಿದ್ದಂತಾಗಿದೆ. ಹಿಂಗಾರು ಮಳೆ ಕೈಕೊಟ್ಟಿದ್ದರಿಂದ ಈ ಭಾಗದ ಪ್ರಮುಖ ಬೆಳೆಯಾದ ತೊಗರಿ ಬಿಸಿಲಿನ ತಾಪಕ್ಕೆ ಒಣಗಲು ಆರಂಭಿಸಿದೆ. ಇದರಿಂದ ರೈತರು ಚಿಂತಾಕ್ರಾಂತರಾಗಿದ್ದಾರೆ. 

ಹೋಬಳಿಯಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮಳೆಯಾಗದೇ ಇರುವುದರಿಂದ ಬರದ ಭೀತಿಯ ವಾತಾವರಣ ಮುಂದುವರಿದಿದೆ. ಹೂ ಬಿಟ್ಟು ಬೆಳೆದು ನಿಂತ ತೊಗರಿ ಬೆಳೆ ತೇವಾಂಶದ ಕೊರತೆಯಿಂದ ಒಣಗುತ್ತಿದೆ. ಹಾಗೇ ಹೂಗಳು ಉದುರುತ್ತಿರುವುದರಿಂದ ತೊಗರಿ ಬೇಸಾಯಗಾರರು ಹಿದೆಂದಿಗಿಂತಲೂ ಕಷ್ಟದಲ್ಲಿದ್ದಾರಲ್ಲದೇ ಸಾಲದ ಹೊರೆಯಿಂದ ತತ್ತರಿಸಿ ಹೋಗಿದ್ದಾರೆ. 

ಹೋಬಳಿ ವಲಯದಲ್ಲಿ ಸುಮಾರು 18070 ಹೆಕ್ಟೇರ್‌ಗಿಂತಲೂ ಅಧಿಕ ಪ್ರದೇಶದಲ್ಲಿ ತೊಗರಿ ಬೆಳೆದಿದ್ದಾರೆ. ಬೆಳೆಗಾಗಿ ಈಗಾಗಲೇ ಸಾಲ ಮಾಡಿ ಸಾಕಷ್ಟು ಹಣ ವ್ಯಯ ಮಾಡಿದ್ದಾರೆ. ಅಲ್ಲದೇ ತೊಗರಿ ಕಾಯಿ ಕೊರಕ ಹಾವಳಿಯಿಂದ ತಪ್ಪಿಸಲು ಎರಡು ಬಾರಿ ಎಣ್ಣೆ ಸಿಂಪರಣೆ ಮಾಡಿದ್ದಾರೆ. 

ಆದರೆ ಮಳೆ ಕೊರತೆಯಿಂದ ಸಂಪೂರ್ಣ ಬೆಳೆ ನಾಶ ಆಗುತ್ತಿರುವುದರಿಂದ ರೈತರ ಭವಿಷ್ಯ ಮಂಕಾಗಿದೆ. ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಇಳುವರಿ ಬರದೇ ಇರುವುದರಿಂದ ಸಾಲ ಮಾಡಿದ ರೈತರು ಸಾಲದ ಬಾಧೆಯಿಂದ ಬಳಲುತ್ತಿದ್ದಾರೆ.
 
ಹಿಂಗಾರಿನಲ್ಲಿ ಸ್ವಲ್ಪ ಮಳೆಯಾದರೆ ಸಾಕು ಜೋಳ ಬಿತ್ತನೆ ಮಾಡಬೇಕೆಂದು ರೈತರು ಸಿದ್ಧತೆ ಮಾಡಿಕೊಂಡಿದ್ದರು. ಆದರೆ ಹಿಂಗಾರಿನಲ್ಲಿ ಮಳೆ ಬಾರದಿರುವುದರಿಂದ ಮಳೆಗಾಗಿ ಮುಗಿಲ ಕಡೆಗೆ ನೋಡುವ ಪರಿಸ್ಥಿತಿ ರೈತರಿಗೆ ಬಂದೊದಗಿದೆ.
 
ತಾಲೂಕಿನಲ್ಲಿ ಅಕ್ಟೋಬರ್‌ ತಿಂಗಳಲ್ಲಿ 58 ಮೀ. ಮೀ ವಾಡಿಕೆ ಮಳೆ ಆಗಬೇಕಿತ್ತು.ಆದರೆ ಕೇವಲ 4 ಮೀ.ಮೀ ಮಳೆಯಾಗಿದ್ದರಿಂದ, ಸರಿಸುಮಾರು ಶೇ. 93ರಷ್ಟು ಮಳೆ ಕೊರತೆಯಾಗಿದೆ. ಅಲ್ಲದೇ ಹಲವು ವರ್ಷಗಳಿಂದ ರೈತರು ಸಾಕಿದ ಎತ್ತು, ದನಕರುಗಳಿಗೆ ಮೇವಿನ ಕೊರತೆ ಉಂಟಾಗಲಿದೆ. ಈ ಪರಿಸ್ಥಿತಿಯಲ್ಲಿ ರೈತನಿಗೆ ಜಾನುವಾರುಗಳನ್ನು ಪೋಷಣೆ ಮಾಡುವುದು ಕಷ್ಟದ ಕೆಲಸವಾಗಿದೆ. 

ಆದ್ದರಿಂದ ರೈತನು ಅನಿವಾರ್ಯವಾಗಿ ತಾನು ಸಾಕಿದ ದನಕರುಗಳನ್ನು ಮಾರಾಟ ಮಾಡುವ ಅನಿವಾರ್ಯತೆ ಎದುರಾಗುತ್ತದೆ. ರೈತನ ಈ ಕಷ್ಟದ ಪರಿಸ್ಥಿತಿ ಅರಿತು ಸರಕಾರ ಅಗತ್ಯ ನೆರವು ನೀಡಿ, ಗೋ ಶಾಲೆ ಆರಂಭಿಸಿ ಮೇವು ಪೂರೈಕೆ ಮಾಡಿ ರೈತರು ಸಾಕಿಕೊಂಡಿದ್ದ ಜಾನುವಾರುಗಳನ್ನು ಉಳಿಯುವಂತೆ ಮಾಡಬೇಕಿದೆ. ಶೀಘ್ರವಾಗಿ ಸಂಪೂರ್ಣ ಸಾಲ ಮನ್ನಾ ಮಾಡಿ ರೈತನ ಬಾಳಿಗೆ ನೆರವು ನೀಡಬೇಕು. ಇಲ್ಲದಿದ್ದರೆ ದನಕರುಗಳು ಕಸಾಯಿಖಾನೆ ಪಾಲಾಗುವದು ಖಚಿತ. ಇದನ್ನು ತಪ್ಪಿಸಿ ಸರಕಾರ ರೈತ ಪರ ಕಾಳಜಿ ಮೆರೆಯಬೇಕಾಗಿದೆ ಎಂದು ರೈತ ಸದಾನಂದ ಕುಂಬಾರ ಒತ್ತಾಯಿಸಿದ್ದಾರೆ. 

ಮುಂಗಾರು ಮಳೆ ಸರಿಯಾಗಿ ಪ್ರಾರಂಭವಾಗಿ ಶುಭಾರಂಭ ನೀಡಿದ್ದರಿಂದ ಬಿತ್ತನೆ ಕಾರ್ಯ ಮಾಡಿದ್ದೆವು. ಈ ಬಾರಿ ಉತ್ತಮ ಇಳುವರಿ ಪಡೆಯಬಹುದೆಂಬ ಆಶಾಭಾವನೆ ಇತ್ತು. ಆದರೆ ಮಳೆ ಮುನಿಸಿಕೊಂಡಿದ್ದರಿಂದ ಸಾಲ ಮಾಡಿ ಬೆಳೆದ ಬೆಳೆ ಕಣ್ಮುಂದೆ ಬಾಡುತ್ತಿರುವುದನ್ನು ನೋಡಿ ಚಿಂತೆಯಾಗಿದೆ.
ಸಾಬಯ್ಯ ಗುತ್ತೇದಾರ, ಮುತ್ತಗಾ ರೈತ

ಮುಂಗಾರಿನಲ್ಲಿ ಸ್ವಲ್ಪ ಮಳೆಯಾಗಿದ್ದು ಬಿಟ್ಟರೆ ಹಿಂಗಾರಿನಲ್ಲಿ ಮಳೆಯಾಗದೇ ತೇವಾಂಶದ ಕೊರತೆಯಿಂದ ತೊಗರಿ ಬೆಳೆ ಒಣಗುತ್ತಿದೆ. ಕೂಡಲೇ ರಾಜ್ಯ ಸರ್ಕಾರ ಬರಪೀಡಿತ ಪ್ರದೇಶ ಎಂದು ಘೋಷಿಸಬೇಕು.
ಅರುಣ ಪಟ್ಟಣಕರ್‌, ಬಿಜೆಪಿ ಹಿರಿಯ ಮುಖಂಡ

„ಮಲ್ಲಿನಾಥ ಪಾಟೀಲ

ಟಾಪ್ ನ್ಯೂಸ್

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Police Raid: 346 ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.