ಪಾರಿಭಾಷಿಕ ಪದಕೋಶ ರಚನೆ ಕಾರ್ಯ ಪ್ರಗತಿಯಲ್ಲಿ
Team Udayavani, Jan 18, 2019, 7:23 AM IST
ಕಲಬುರಗಿ: ನಗರದ ಶರಣಬಸವೇಶ್ವರ ಸಂಸ್ಥಾನದ ಪೀಠಾಧಿಪತಿ ಹಾಗೂ ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿ ಪೂಜ್ಯ ಡಾ| ಶರಣಬಸವಪ್ಪ ಅಪ್ಪ ಅವರ ಬಹು ದಿನಗಳ ಕನಸಾದ ವೀರಶೈವ ಲಿಂಗಾಯತ ಪಾರಿಭಾಷಿಕ ಪದಕೋಶ ರಚನೆ ಕಾರ್ಯ ಪ್ರಗತಿಯಲ್ಲಿದೆ ಎಂದು ವೀರಶೈವ ಲಿಂಗಾಯತ ಪಾರಿಭಾಷಿಕ ಪದಕೋಶ ರಚನೆ ಪ್ರಧಾನ ಸಂಪಾದಕ ಡಾ| ಎಂ.ಎಸ್. ಪಾಟೀಲ ಹೇಳಿದರು.
ಶರಣಬಸವ ವಿವಿ ಕನ್ನಡ ವಿಭಾಗದಲ್ಲಿ ಹಮ್ಮಿಕೊಂಡಿದ್ದ ವೀರಶೈವ ಲಿಂಗಾಯತ ಪಾರಿಭಾಷಿಕ ಪದಕೋಶ ರಚನೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕರ್ನಾಟಕದ ಯಾವ ವಿಶ್ವವಿದ್ಯಾಲಯಗಳು, ಮಠಗಳು ಮಾಡದ ಕೆಲಸವನ್ನು ಪೂಜ್ಯ ಡಾ| ಶರಣಬಸವಪ್ಪ ಅಪ್ಪ ಮಾಡಲು ಮುಂದಾಗಿ, ವೀರಶೈವ ಲಿಂಗಾಯತ ಪಾರಿಭಾಷಿಕ ಪದಕೋಶ ರಚನೆಗಾಗಿ ತಮ್ಮ ವಿದ್ಯಾಸಂಸ್ಥೆಯ ಎಲ್ಲ ಅಧ್ಯಾಪಕರಿಗೆ ಸೂಚಿಸಿದ್ದಾರೆ. ಈ ನಿಟ್ಟಿನಲ್ಲಿ ಈಗಾಗಲೇ ಕೆಲಸಗಳು ನಡೆಯುತ್ತಿವೆ ಎಂದು ತಿಳಿಸಿದರು. ವೀರಶೈವ ಲಿಂಗಾಯತ ಪಾರಿಭಾಷಿಕ ಪದಕೋಶ ರಚನೆಯಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ವಿವಿಧ ಕಾಲೇಜುಗಳ ಅಧ್ಯಾಪಕರು, ಶರಣಬಸವ ವಿವಿ ಅಧ್ಯಾಪಕರು ಹಾಗೂ ಆಸಕ್ತ ಪ್ರಾಧ್ಯಾಪಕರು ಸೇರಿದಂತೆ ಸುಮಾರು 50 ಜನ ಈ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಪಾಲ್ಗೊಂಡ ಅಧ್ಯಾಪಕರು ಪದಕೋಶ ರಚನೆಯಲ್ಲಿ ಎದುರಾದ ಸಮಸ್ಯೆಗಳಿಗೆ ಸೂಕ್ತ ಮಾಹಿತಿ ಪಡೆದುಕೊಂಡರು. ವೀರಶೈವ ಲಿಂಗಾಯತ ಪಾರಿಭಾಷಿಕ ಪದಕೋಶ ರಚನೆಯು ಸಾಕಷ್ಟು ಶ್ರಮ ಬಯಸುವುದರಿಂದ ತಾಳ್ಮೆಯಿಂದ ಈ ಕೆಲಸ ಪೂರೈಸುವಂತೆ ಎಲ್ಲರೂ ಸೂಚಿಸಿದರು.
ಡಾ| ಎಸ್.ಜಿ. ಡೊಳ್ಳೆಗೌಡರ, ಡಾ| ಡಿ.ಟಿ. ಅಂಗಡಿ, ಡಾ| ಎನ್.ಎಸ್. ಪಾಟೀಲ, ಡಾ| ನೀಲಾಂಬಿಕಾ ಶೇರಿಕಾರ, ಡಾ| ಶಿವರಾಜಶಾಸ್ತ್ರೀ ಹೇರೂರ, ಡಾ| ಸುರೇಶ ನಂದಗಾಂವ, ಡಾ| ಸಾರಿಕಾದೇವಿ ಕಾಳಗಿ, ಡಾ| ಸುಮಂಗಲಾ ರೆಡ್ಡಿ, ಡಾ| ಪ್ರಭಾವತಿ ಚಿತಕೋಟಿ, ನಾನಾಸಾಹೇಬ್ ಹಚ್ಚಡದ ಹಾಗೂ ಇತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ
Kalaburagi:ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ
Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್