ಉಗ್ರರಿಗೆ ಕಂಡಲ್ಲಿ ಗುಂಡಿಕ್ಕಿ
Team Udayavani, Feb 17, 2019, 7:57 AM IST
ಶಹಾಬಾದ: ದೇಶ ವಿರೋಧ ಚಟುವಟಿಕೆ ನಡೆಸುವ ಉಗ್ರರ ಮೇಲೆ ಕಂಡಲ್ಲಿ ಗುಂಡಿಕ್ಕುವ ಆದೇಶ ಹೊರಡಿಸಬೇಕು ಎಂದು ಶರಣಬಸವೇಶ್ವರ ಜ್ಞಾನ ವಿಕಾಸ ಪೀಠ ಸಂಸ್ಥೆ ಕಾರ್ಯದರ್ಶಿ ಭೀಮಾಶಂಕರ ಮುತ್ತಟ್ಟಿ ಆಗ್ರಹಿಸಿದರು.
ಜಮ್ಮು ಕಾಶ್ಮೀರಲ್ಲಿ ಉಗ್ರರು ನಡೆಸಿದ ದಾಳಿ ಖಂಡಿಸಿ ಶರಣಬಸವೇಶ್ವರ ಜ್ಞಾನ ವಿಕಾಸ ಪೀಠ ಸಂಸ್ಥೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಹಲವಾರು ವರ್ಷಗಳಿಂದಲೂ ಪಾಕಿಸ್ತಾನದ ಉಗ್ರ ಸಂಘಟನೆಗಳು ದೇಶದ ಸೈನಿಕರ ಮೇಲೆ ಅಟ್ಟಹಾಸ ಮೆರೆಯುತ್ತಿವೆ. ಇದರ ಪರಿಣಾಮ ಸೈನಿಕರು ಜೀವ ಕಳೆದುಕೊಳ್ಳುತ್ತಿದ್ದಾರೆ. ಇವರನ್ನೇ ನಂಬಿ ಜೀವನ ಸಾಗಿಸುತ್ತಿರುವ ಕುಟುಂಬಗಳು ಕಣ್ಣೀರಿನಲ್ಲಿ ಕೈ ತೊಳೆಯುವಂತಾಗಿದೆ. ಪ್ರಪಂಚದ ಎಲ್ಲ ದೇಶಗಳನ್ನು ಭಯೋತ್ಪಾದನೆ ಭೂತ ಬೆನ್ನತ್ತಿ ಕಾಡುತ್ತಿದ್ದರೂ ಹತ್ತಿಕ್ಕುವ ಕೆಲಸಗಳು ಆಗುತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು.
ಪದವಿ ಕಾಲೇಜಿನ ಪ್ರಾಚಾರ್ಯ ಚಂದ್ರಶೇಖರ, ಶಕುಂತಲಾ ಹೋಳಿ, ಬಿ.ಎಚ್. ಹೊಸಕೇರಿ, ಪ್ರೌಢಶಾಲೆ ಮುಖ್ಯಶಿಕ್ಷಕಿ ಸಾವಿತ್ರಿ ಕಾಡಲೂರ, ಪ್ರಾಥಮಿಕ ಮುಖ್ಯಶಿಕ್ಷಕಿ ಮೀನಾಕ್ಷಿ, ಶಿಕ್ಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದರು.
ಎಸ್.ಜಿ.ವರ್ಮಾ ಶಾಲೆ: ಶಿಕ್ಷಕ ಶರಣು ತುಂಗಳ ಮಾತನಾಡಿ, ಕಾಶ್ಮೀರದ ಫುಲ್ವಾಮಾದಲ್ಲಿ ನಡೆದ ದಾಳಿಯನ್ನು ಖಂಡಿಸಿ, ಉಗ್ರರಿಗೆ ಪಾಠ ಕಲಿಸಬೇಕು ಎಂದು ಹೇಳಿದರು.
ಮುಖ್ಯಶಿಕ್ಷಕಿ ದಮಯಂತಿ ಸೂರ್ಯವಂಶಿ, ಶಿಕ್ಷಕರಾದ ಚನ್ನಬಸಪ್ಪ ಕೊಲ್ಲೂರ, ಮಹೇಶ್ವರಿ ಗುಳಿಗಿ, ವಿಜಯಲಕ್ಷ್ಮೀ ವೆಂಕಟೇಶ, ರಾಜೇಶ್ವರಿ ಎಂ., ಗೀತಾ ಪುಂಡಲಿಕ್, ಸಲಿನ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್ಡಿಐಎ ಧ್ಯೇಯ: ಜೆ.ಪಿ. ನಡ್ಡಾ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ