ಸಾರಿಗೆ ಸಂಸ್ಥೆ ಉಳಿವಿಗೆ ಸಹಕಾರ ಅಗತ್ಯ
Team Udayavani, Mar 5, 2018, 11:00 AM IST
ಅಫಜಲಪುರ: ಸರ್ಕಾರಿ ಸಾರಿಗೆ ಸಂಸ್ಥೆ ಉಳಿಯಬೇಕಾದರೆ ಜನರ ಸಹಕಾರ ಅಗತ್ಯವಾಗಿದೆ ಎಂದು ಶಾಸಕ ಮಾಲೀಕಯ್ಯ ಗುತ್ತೇದಾರ ಹೇಳಿದರು. ತಾಲೂಕಿನ ಪ್ರಮುಖ ಕೇಂದ್ರವಾದ ಚವಡಾಪುರದಲ್ಲಿ ವಿಶೇಷ ಅಭಿವೃದ್ಧಿ ಯೋಜನೆ ಅಡಿ 1.70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ ನೂತನ ಬಸ್ ನಿಲ್ದಾಣ ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಅಫಜಲಪುರ ಬಸ್ ಘಟಕ ಅತಿ ಹೆಚ್ಚು ಆದಾಯ ತಂದು ಕೊಡುತ್ತಿದೆ. ವಾರ್ಷಿಕ ಅಂದಾಜು 2 ಕೋಟಿ ರೂ. ಆದಾಯ ಬರುತ್ತಿದೆ. ಹೀಗಾಗಿ ಕಲಬುರಗಿ ಜಿಲ್ಲೆಯಲ್ಲಿ ಅಫಜಲಪುರ ಬಸ್ ಘಟಕಕ್ಕೆ ವಿಶೇಷ ಮಾನ್ಯತೆ ಇದೆ. ಬರುವ ದಿನಗಳಲ್ಲಿ ತಾಲೂಕಿನ ಪ್ರಮುಖ ಕೇಂದ್ರಗಳಾದ ಮಾಶಾಳ ಮತ್ತು ಕರ್ಜಗಿ ಬಸ್ ನಿಲ್ದಾಣ ಮೇಲ್ದರ್ಜೆಗೇರಿಸಲಾಗುವುದು. ಸಾರಿಗೆ ಸಂಸ್ಥೆ ನಷ್ಟದಲ್ಲಿದೆ. ಹೀಗಾಗಿ ಸರ್ಕಾರಿ ಸಾರಿಗೆ ವ್ಯವಸ್ಥೆಯನ್ನು ಖಾಸಗೀಕರಣಗೊಳಿಸುವ ಬಗ್ಗೆ ಚಿಂತಿಸಲಾಗಿತ್ತು ಎಂದ ಅವರು, ಪ್ರಯಾಣಿಕರು ನೂತನ ಬಸ್ ನಿಲ್ದಾಣ ಸರ್ಕಾರದ್ದು ಎಂದು ಭಾವಿಸಬಾರದು. ಜನರ ತೆರಿಗೆ ಹಣದಿಂದ ನಿಲ್ದಾಣ ನಿರ್ಮಿಸಲಾಗಿದೆ. ಹಿಗಾಗಿ ಎಲ್ಲರೂ ಸ್ವತ್ಛತೆ ಕಾಪಾಡಬೇಕು. ಅಫಜಲಪುರ ಬಸ್ ಘಟಕಕ್ಕೆ 5 ಹೊಸ ಬಸ್ ನೀಡಲಾಗಿದೆ ಎಂದು ಹೇಳಿದರು.
ಅಫಜಲಪುರ ತಾಲೂಕು ಬಹಳ ದೊಡ್ಡ ತಾಲೂಕು ಆಗಿದೆ. ನಮ್ಮ ತಾಲೂಕಿನಲ್ಲಿ ಹೊಸ ತಾಲೂಕು ಆಗುವಲ್ಲಿ ಚವಡಾಪುರ ಕೂಡ ಒಂದಾಗಿದೆ. ಬರುವ ದಿನಗಳಲ್ಲಿ ಚವಡಾಪುರ ತಾಲೂಕು ಕೇಂದ್ರವಾಗಿಸಲಾಗುತ್ತದೆ ಎಂದು ಹೇಳಿದರು. ವಿಭಾಗಿಯ ನಿಯಂತ್ರಣಾಧಿಕಾರಿ ಎ.ಎಚ್. ನಾಗೇಶ ಮಾತನಾಡಿ, ಅಫಜಲಪುರ ಘಟಕದಿಂದ ನಿತ್ಯ 216 ಬಸ್ ಗಳು ಸಂಚರಿಸುತ್ತಿವೆ. ಸರಾಸರಿ 60 ಸಾವಿರ ಜನರು ಪ್ರಯಾಣಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು.
ಗ್ರಾಪಂ ಅಧ್ಯಕ್ಷೆ ಪಾರ್ವತಿ ರಾಠೊಡ, ತಾಪಂ ಅಧ್ಯಕ್ಷೆ ರುಕ್ಮಿಣಿ ಜಮಾದಾರ, ಜಿಪಂ ಉಪಾದ್ಯಕ್ಷೆ ಶೋಭಾ ಶಿರಸಗಿ, ಎಪಿಎಂಸಿ ಅಧ್ಯಕ್ಷ ಶಂಕರಲಿಂಗ ಮೇತ್ರಿ, ಪ್ರಮುಖರಾದ ಮಹಾದೇವ ಗುತ್ತೇದಾರ, ಮಲ್ಲಿನಾಥ ಪಾಟೀಲ, ಶಿವಪುತ್ರಪ್ಪ ಕರೂರ, ಬಿ.ವೈ. ಪಾಟೀಲ, ಪಾಶಾ ಮಣೂರ, ಬಸವರಾಜ ಸಪ್ಪನಗೋಳ, ಸಾವಿರಪ್ಪ ಪೂಜಾರಿ, ಸುಭಾಷ ರಾಠೊಡ, ಮುಖ್ಯ ಅಭಿಯಂತರ ಪಿ. ಮೂರ್ತಿ, ಕಾರ್ಯನಿರ್ವಾಹಕ ಅಭಿಯಂತರ ಮೈಬೂಬಸಾಬ್, ಘಟಕ ವ್ಯವಸ್ಥಾಪಕ ಗೋಪಾಲ ಕುಲಕರ್ಣಿ, ಡಿಟಿಒ ಶ್ರೀಧರ ಕುಲಕರ್ಣಿ, ಡಿಎಂಇ ಕಮ್ಮೂರ, ಎಇಇ ಎಂ.ಡಿ. ಸುಂಕದ, ಗುತ್ತಿಗೆದಾರ ಯಲ್ಲಪ್ಪಗೌಡ ಕುಲಕರ್ಣಿ, ಪಿ ಸಂಜೀವರೆಡ್ಡಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
ದಿ| ಜಾರ್ಜ್ ಫೆರ್ನಾಂಡಿಸ್ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್ ಚೌಟ
ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ