ಕುಲಪತಿ ಇಲ್ಲದೇ ಬೀದರ ಪಶು ವಿವಿ ಅನಾಥ!


Team Udayavani, Dec 26, 2017, 10:32 AM IST

55828_Capture.JPG-cvr-image-after-ml..jpg-edt-after.jpg

ಬೀದರ: ಸರ್ಕಾರದ ನಿಷ್ಕಾಳಜಿತನದ ಪರಿಣಾಮ ರಾಜ್ಯದ ಏಕೈಕ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಕುಲಪತಿ ಹುದ್ದೆ ಒಂದೂವರೆ ವರ್ಷದಿಂದ ಖಾಲಿ ಉಳಿದಿದೆ. ಹಿಂದೆ ನೇಮಕಾತಿ ಅಕ್ರಮ, ಅವ್ಯವಹಾರಗಳಿಂದ ಚರ್ಚೆಗೆ ಒಳಗಾಗುತ್ತಿದ್ದ ವಿವಿ ಈಗ ಕಾಯಂ ಕುಲಪತಿ ಇಲ್ಲದೇ ಮತ್ತೆ ಸುದ್ದಿಯಲ್ಲಿದೆ.

ಜಾನುವಾರುಗಳ ಆರೋಗ್ಯ ಸಂಶೋಧನೆ ಚಟುವಟಿಕೆಗಳು ನಡೆಯುವುದರಿಂದ ಪಶು ವಿಶ್ವವಿದ್ಯಾಲಯ ಅತಿ ಮಹತ್ವದ್ದಾಗಿದ್ದರೂ ಅದರ ಮುಖ್ಯ ಹುದ್ದೆಯಾಗಿರುವ ಕುಲಪತಿ ಸ್ಥಾನ ತುಂಬುವಲ್ಲಿ ಸರ್ಕಾರ ನಿಷ್ಕಾಳಜಿ ತೋರುತ್ತಿದೆ. 2016ರ ಸೆ.22ರಂದು ಕುಲಪತಿ ಪ್ರೊ| ರೇಣುಕಾಪ್ರಸಾದ ನಿವೃತ್ತಿ ನಂತರ ಈ ಸ್ಥಾನಕ್ಕೆ ಯಾರೊಬ್ಬರನ್ನು ಇದೂವರೆಗೆ ನೇಮಿಸಿಲ್ಲ.

ಶಿವಮೊಗ್ಗದ ಪಶು ವೈದ್ಯಕೀಯ ಕಾಲೇಜಿನ ಡೀನ್‌ ಡಾ| ಆರ್‌.ವಿ. ಪ್ರಸಾದ ಅವರನ್ನು ಪ್ರಭಾರಿ ಕುಲಪತಿಗಳನ್ನಾಗಿ ನಿಯುಕ್ತಿ ಮಾಡಲಾಗಿದೆ. ರಾಜ್ಯದ ಏಕೈಕ ಪಶು ವಿವಿ ವ್ಯಾಪ್ತಿಯಲ್ಲಿ ಒಟ್ಟು 7 ಮಹಾವಿದ್ಯಾಲಯಗಳು ಮತ್ತು 2 ಪಾಲಿಟೆಕ್ನಿಕ್‌ ಕಾಲೇಜುಗಳು ಕಾರ್ಯ ನಿರ್ವಹಿಸುತ್ತಿದ್ದು, ಇವುಗಳ ನಿರ್ವಹಣೆ ಜವಾಬ್ದಾರಿ ಕುಲಪತಿಗಳ ಮೇಲಿದೆ.
 
ಆದರೆ, ಮಹತ್ವದ ಹುದ್ದೆಯನ್ನೇ ಸರ್ಕಾರ ಖಾಲಿ ಇರಿಸಿರುವ ವಿಷಯ ಗಂಭೀರವಾಗಿದೆ. ಇದರಿಂದ ಶಿಕ್ಷಣದ ಗುಣಮಟ್ಟದ ಜತೆಗೆ ಹುದ್ದೆಗಳ ಭರ್ತಿ ಸೇರಿದಂತೆ ಕಾನೂನಾತ್ಮಕ ವಿಷಯಗಳ ನಿರ್ಣಯ ಕೈಗೊಳ್ಳಲು ಸಾಧ್ಯವಾಗದೇ ಆಡಳಿತ ಕಾರ್ಯವೈಖರಿ ಮೇಲೂ ಹೊಡೆತ ಬಿದ್ದಿದೆ.

ಕುಲಪತಿಗಳ ಹುದ್ದೆಗಾಗಿ ಪಶು ವೈದ್ಯಕೀಯ ಮತ್ತು ಸಂಗೋಪಾಲನಾ ಇಲಾಖೆ ಪ್ರಧಾನ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಅಧಿಕಾರಿಗಳು ಮತ್ತು ಆಡಳಿತ ಮಂಡಳಿ ಸದಸ್ಯರನ್ನೊಳಗೊಂಡ ಶೋಧನಾ ಸಮಿತಿಗೆ ಪ್ರೋಫೆಸರ್‌ಗಳಿಂದ 20ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿದ್ದವು. ಆದರೆ, ಶೋಧನಾ ಸಮಿತಿಯು ಸಮಯಕ್ಕೆ ಸಭೆಗಳನ್ನು ನಡೆಸದೇ ಮುಂದೂಡುತ್ತ ಬಂದಿದ್ದೇ ಕುಲಪತಿಗಳ ಹುದ್ದೆ ನೇಮಕಾತಿ ವಿಳಂಬಕ್ಕೆ ಕಾರಣವಾಗಿತ್ತು.

ಮೂಲಗಳ ಪ್ರಕಾರ ಶೋಧನಾ ಸಮಿತಿ ನ.29ರಂದು ಸಭೆ ನಡೆಸಿ ಅರ್ಜಿಗಳ ಪರಿಶೀಲನೆ ನಡೆಸಿದ್ದು, ಐದು ಜನರ ಹೆಸರನ್ನು ಅಂತಿಮಗೊಳಿಸಿ ಸರ್ಕಾರಕ್ಕೆ ಕಳುಹಿಸಿದೆ. ಈ ಪಟ್ಟಿಯಲ್ಲಿ ಡಾ|ಎಚ್‌. ಎಂ ಜಯಪ್ರಕಾಶ, ಪ್ರೊ| ಶಿವಾನಂದ ಮೂರ್ತಿ, ಡಾ|ಎಸ್‌.ಯತಿರಾಜ್‌, ಪ್ರೊ| ಶಿವಶಂಕರ ಉತ್ತರಗಿ, ಎಚ್‌.ಟಿ. ನಾರಾಯಣಸ್ವಾಮಿ ಅವರ ಹೆಸರು ಸೇರಿವೆ ಎನ್ನಲಾಗುತ್ತಿದೆ. ಆದರೆ, ಸರ್ಕಾರ ಈ ಪೈಕಿ ಮೂವರು ಹೆಸರನ್ನು ರಾಜ್ಯಪಾಲರಿಗೆ ಶಿಫಾರಸು ಮಾಡಬೇಕಿದ್ದು, ಈ ಪ್ರಕ್ರಿಯೆ ಇನ್ನೂ ಶುರುವಾಗಿಲ್ಲ.

ಸತ್ಯಶೋಧನಾ ಸಮಿತಿಯ ವಿಳಂಬ ಧೋರಣೆ ಬಳಿಕ ಈಗ ಸರ್ಕಾರದ ಮಟ್ಟದಲ್ಲಿ ತಡ ಆಗುತ್ತಿದೆ. ಮಹತ್ವದ ಹುದ್ದೆಗಾಗಿ ಪ್ರಬಲ ಪೈಪೋಯೂ ನಡೆಯುತ್ತಿರುವುದು ಸಹ ಮೂವರ ಹೆಸರು ಅಂತಿಮಗೊಳ್ಳುವಲ್ಲಿ ವಿಳಂಬ ಆಗುತ್ತಿದೆ. ಶೈಕ್ಷಣಿಕ ಹಿತದೃಷ್ಟಿಯಿಂದ ಶೀಘ್ರ ನೇಮಕಾತಿ ಪ್ರಕ್ರಿಯೆ ಮುಗಿಸಬೇಕಿದೆ.
 
ವಾರದಲ್ಲಿ ಪ್ರಕ್ರಿಯೆ ಪೂರ್ಣ ಕರ್ನಾಟಕ ಪಶು ವೈದ್ಯಕೀಯ ವಿಶ್ವವಿದ್ಯಾಲಯದ ಕುಲಪತಿಗಳ ನೇಮಕಾತಿಯಲ್ಲಿ ಸಾಕಷ್ಟು ವಿಳಂಬ ಆಗಿದ್ದು, ಇದರಿಂದ ವಿವಿ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗುತ್ತಿದೆ. ಸತ್ಯಶೋಧನಾ ಸಮಿತಿಯು ಐದು ಜನರ ಹೆಸರನ್ನು ಸರ್ಕಾರಕ್ಕೆ ಶಿಫಾರಸು ಮಾಡಿದೆ. ಈ ಪೈಕಿ ಅಂತಿಮವಾಗಿ ಮೂವರ ಹೆಸರು ರಾಜ್ಯಪಾಲರಿಗೆ ಶಿಫಾರಸು ಆಗಬೇಕಿದೆ. ಒಂದು ವಾರದಲ್ಲಿ ಈ ಪ್ರಕ್ರಿಯೆ ಪೂರ್ಣಗೊಳ್ಳುವ ಸಾಧ್ಯತೆ ಇದೆ.  ಮಲ್ಲಿಕಾರ್ಜುನ ಬಿರಾದಾರ, ಆಡಳಿತ ಮಂಡಳಿ ಸದಸ್ಯ, ಪಶು ವಿವಿ, ಬೀದರ

ಶಶಿಕಾಂತ ಬಂಬುಳಗೆ

ಟಾಪ್ ನ್ಯೂಸ್

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewewe

Congress;ಪ್ರತಾಪ್‌ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.