ತೆಲಂಗಾಣದ ಕದನದಲ್ಲಿ ಗೆಲುವಿಗೆರಾಜ್ಯದ ಗೂಬೆಗಳ ಮಾಟದ ಹಾವಳಿ


Team Udayavani, Nov 17, 2018, 2:53 PM IST

gul-5.jpg

ಸೇಡಂ: ನ.14 ರಂದು ಬಾಗಲಕೋಟೆ ಜಿಲ್ಲೆಯ ಜಮಖಂಡಿಯಿಂದ ಸೇಡಂ ಮಾರ್ಗವಾಗಿ ಹೈದ್ರಾಬಾದಗೆ ಸಾಗಿಸಲಾಗುತ್ತಿದ್ದ ಅದೃಷ್ಟದ ಗೂಬೆಗಳನ್ನು ಪೊಲೀಸರು ವಶಪಡಿಕೊಂಡ ಘಟನೆಗೆ ಹೊಸ ತಿರುವು ದೊರೆಯಲಾರಂಭಿಸಿದೆ.

ಅರಣ್ಯ ಜೀವಿ ಗೂಬೆಗಳ ಪ್ರಕಾರಗಳಲ್ಲಿ ಅದೃಷ್ಟದ ಗೂಬೆ (ಲಕ್ಷ್ಮೀ ಕಟಾಕ್ಷದ) ಗಳನ್ನು ಧನ ಲಾಭ, ವಶೀಕರಣ, ಮಾಟ ಮಂತ್ರಗಳಲ್ಲಿ ಬಳಸುವುದು ತಿಳಿದ ವಿಷಯವಾದರೆ, ಇತ್ತೀಚೆಗೆ ದೊರೆತ ಗೂಬೆಗಳನ್ನು ತೆಲಂಗಾಣದ ಚುನಾವಣೆಯಲ್ಲಿ ಗೆಲುವಿಗಾಗಿ ಬಲಿ ಕೊಡಲು ಕೊಂಡೊಯ್ಯಲಾಗುತ್ತಿತ್ತು ಎನ್ನುವ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.

ತೆಲಂಗಾಣ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಘೋಷಣೆಯಾಗಿದೆ. ಪ್ರತಿನಿತ್ಯ ಚುರುಕಿನ ಪ್ರಚಾರದಲ್ಲಿ ರಾಜಕಾರಣಿಗಳು ತೊಡಗಿದ್ದಾರೆ. ಅಲ್ಲದೇ ಗೆಲ್ಲಲು ಹವಣಿಸುವ ಅನೇಕರು ವಿವಿಧ ರೀತಿಯ ಕಸರತ್ತು ಮಾಡುತ್ತಿದ್ದಾರೆ. ಇದರಲ್ಲಿ ಕೆಲವರು ಮಾಟ ಮಂತ್ರಕ್ಕೆ ಮೊರೆ ಹೋಗಿದ್ದಾರೆ. ಗೂಬೆಗಳನ್ನು ಬಲಿಕೊಟ್ಟು ಮಂತ್ರ-ತಂತ್ರದ ಮೂಲಕ ಗೆಲ್ಲುವ ಹುನ್ನಾರಕ್ಕೆ ಕೈ ಹಾಕಿದ್ದು, ಈಗ ಜನರ
ಆಕ್ರೋಶಕ್ಕೆ ಕಾರಣವಾಗಿದೆ. 

ಇತ್ತೀಚೆಗೆ ಜಮಖಂಡಿ, ಶಹಾಪುರ ಮೂಲದ ಆರು ಜನರನ್ನು ಸಿಪಿಐ ಶಂಕರಗೌಡ ಪಾಟೀಲ, ಪಿಎಸ್‌ಐ ಸುಶೀಲಕುಮಾರ ತಂಡ ಬಂಧಿಸಿ ಅವರಿಂದ ದೊರೆತ ಎರಡು ಬೃಹತ್‌ ಗಾತ್ರದ ಗೂಬೆಗಳನ್ನು ಚಿತ್ತಾಪುರ ಅರಣ್ಯ ಇಲಾಖೆ ಉಪ ವಿಭಾಗಕ್ಕೆ ಹಸ್ತಾಂತರಿಸಿದ್ದರು.

ನಂತರ ಅರಣ್ಯ ಇಲಾಖೆ ಅಧಿಕಾರಿಗಳು ತನಿಖೆ ಕೈಗೆತ್ತಿಕೊಂಡಾಗ ಆಘಾತಕಾರಿ ಸುದ್ದಿ ಹೊರಬಿದ್ದಿದೆ. ಹೈದ್ರಾಬಾದ ಮೂಲದ ಕೆಲ ರಾಜಕಾರಣಿಗಳು ಗೂಬೆಗಳನ್ನು ಬಳಸಿ ಗೆಲ್ಲಲು ಸಂಚು ರೂಪಿಸಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಬಂಧಿತ ಗೂಬೆ ಸಾಗಾಟಗಾರರು ಮತ್ತು ರಾಜಕಾರಣಿಗಳ ನಡುವೆ ಮಧ್ಯವರ್ತಿಗಳು ಇರುವುದು ತಿಳಿದು ಬಂದಿದೆ.

ಮಾಟ-ಮಂತ್ರ ಹೆಚ್ಚು: ದೀಪಾವಳಿ, ಅಮವಾಸ್ಯೆ ಮತ್ತು ಚುನಾವಣೆ ಸಂದರ್ಭದಲ್ಲಿ ತೆಲಂಗಾಣದ ಹೈದ್ರಾಬಾದ್‌, ಮೇದಕ, ರಂಗಾರೆಡ್ಡಿ, ವಿಕಾರಾಬಾದ ಜಿಲ್ಲೆಗಳ ಕೆಲವೆಡೆ ಗೂಬೆಗಳನ್ನು ಮಾಟ ಮಂತ್ರಕ್ಕಾಗಿ ಬಳಸುವ ಪ್ರಕರಣಗಳು ಕಂಡು ಬಂದಿವೆ. ಫೆಬ್ರವರಿ ತಿಂಗಳಲ್ಲಿ ಹೈದ್ರಾಬಾದನಲ್ಲಿ ಗೂಬೆಗಳ ಕಣ್ಣು ಕಿತ್ತಿ, ಮಂತ್ರಿಸಿ ಬಿಟ್ಟು ಹೋಗಲಾಗಿತ್ತು. ವಶೀಕರಣಕ್ಕಾಗಿ ಗೂಬೆಗಳ ಕಣ್ಣು ಮತ್ತು ಮಾಂಸಗಳ ಬಳಕೆ ಮಾಡಲಾಗುತ್ತಿದೆ

ಗೂಬೆಗಳನ್ನು ಸಾಗಿಸುತ್ತಿದ್ದ ಆರೋಪಿತರು ನೀಡಿದ ಮಾಹಿತಿ ಪ್ರಕಾರ ಸೇಡಂನಲ್ಲಿ ಕೆಲ ಮಧ್ಯವರ್ತಿಗಳು ಗೂಬೆಗಳನ್ನು
ಪಡೆದು, ಬೇರೆಡೆ ಸಾಗಿಸುತ್ತಿದ್ದರು. ಆರೋಪಿಗಳು ಸಹ ಮಧ್ಯವರ್ತಿಗಳಿಗೆ ಗೂಬೆಗಳನ್ನು ನೀಡಲು ತೆರಳುತ್ತಿದ್ದರು. ತನಿಖೆ ಜಾರಿಯಲ್ಲಿದೆ. ಮಧ್ಯವರ್ತಿಗಳ ಬಂಧನಕ್ಕೆ ಜಾಲ ಬೀಸಲಾಗಿದ್ದು, ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು. ಮುಜಬೋದ್ದಿನ್‌, ಚಿತ್ತಾಪುರ ವಲಯ ಅರಣ್ಯಾಧಿಕಾರಿ 

„ಶಿವಕುಮಾರ ಬಿ. ನಿಡಗುಂದ

ಟಾಪ್ ನ್ಯೂಸ್

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

7

Kundapur: ಬೈಕ್‌ ಢಿಕ್ಕಿ; ಸ್ಕೂಟರ್‌ ಸವಾರೆಗೆ ಗಾಯ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.