ಸ್ವೀಪ್‌ ಪರಿಣಾಮಕಾರಿ ಅನುಷ್ಟಾನದಿಂದ ಮತದಾನ ಪ್ರಮಾಣ ಹೆಚಳ್ಚ


Team Udayavani, Apr 3, 2018, 11:53 AM IST

gul-3.jpg

ಕಲಬುರಗಿ: ದೇಶದಾದ್ಯಂತ ಈ ಹಿಂದೆ ನಡೆದಿರುವ ಲೋಕಸಭಾ ಮತ್ತು ವಿಧಾನಸಭಾ ಚುನಾವಣೆಗಳ ಸಂದರ್ಭದಲ್ಲಿ ಮತದಾರರಿಗೆ ಜಾಗೃತಿ ಮೂಡಿಸುವ ಸ್ವೀಪ್‌ ಕಾರ್ಯಕ್ರಮ ಹಮ್ಮಿಕೊಂಡ ಪ್ರಯುಕ್ತ ಮತದಾನದಲ್ಲಿ ಉತ್ತಮ ಫಲಿತಾಂಶ ಸಿಕ್ಕಿದೆ. ಈ ಸಲದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿಯೂ ಮತದಾನದ ಪ್ರಮಾಣ ಹೆಚ್ಚಿಸಲು ಜಾಗೃತಿ ಮೂಡಿಸುವಂತೆ ಕೇಂದ್ರ ಚುನಾವಣಾ
ಆಯೋಗದ ಹಿರಿಯ ಉಪ ಚುನಾವಣಾ ಆಯುಕ್ತ ಉಮೇಶ ಸಿನ್ಹಾ ಸೂಚಿಸಿದರು.

ಬೆಂಗಳೂರಿನಲ್ಲಿ ಚುನಾವಣಾ ಆಯೋಗದ ಕಚೇರಿಯಿಂದ ಹಮ್ಮಿಕೊಂಡಿದ್ದ ವಿಡಿಯೋ ಕಾರ್ನ್‌ರೆನ್ಸ್‌ ಮೂಲಕ ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾ ಸ್ವೀಪ್‌ ಸಮಿತಿ ಅಧ್ಯಕ್ಷರೊಂದಿಗೆ ಮಾತನಾಡಿದ ಅವರು, ಈ ಹಿಂದಿನ ಚುನಾವಣೆಗಳಲ್ಲಿ ಕಡಿಮೆ ಮತದಾನವಾಗಿರುವ ಮತಗಟ್ಟೆಗಳಿಗೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ತೊಂದರೆಗಳಿದ್ದರೆ ನಿವಾರಿಸಬೇಕು. ಮತದಾರರು ಯಾವುದೇ ಆಸೆ-ಆಮಿಷಗಳಿಗೆ ಒಳಗಾಗದೇ ನೈತಿಕ ಮತದಾನ ಮಾಡುವ ಹಾಗೆ ಬೂತ್‌ ಮಟ್ಟದಲ್ಲಿ ಮತದಾರರಿಗೆ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ಸ್ವೀಪ್‌ ಸಮಿತಿ ಜಿಲ್ಲೆಯಲ್ಲಿರುವ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ಮತದಾರರ ಪಟ್ಟಿಗೆ ನೋಂದಣಿಯಾಗದ ಯುವ ಮತದಾರರನ್ನು ಗುರುತಿಸಿ ಮುಂದಿನ ವಾರದೊಳಗಾಗಿ ಶಿಬಿರ ಹಮ್ಮಿಕೊಂಡು ನೋಂದಣಿ ಮಾಡಿಸಲು ಕ್ರಮ ತೆಗೆದುಕೊಳ್ಳಬೇಕು. ಜಿಲ್ಲೆಯ ಎಲ್ಲ ಮತಗಟ್ಟೆಗಳಲ್ಲಿ ಮತದಾರರಿಂದ ಅಣುಕು ಮತದಾನ ಮಾಡಿಸುವ ಮೂಲಕ ಇಲೆಕ್ಟ್ರಾನಿಕ್‌ ಮತಯಂತ್ರ ಮತ್ತು ಮತಖಾತ್ರಿ ಯಂತ್ರ (ವಿವಿ ಪ್ಯಾಟ್‌)ಗಳ ಅರಿವು ಜಾಗೃತಿ ಮೂಡಿಸಬೇಕು. 

ಅಂಗವಿಕಲರಿಗೆ ಮತದಾನ ಪ್ರಕ್ರಿಯೆಯಲ್ಲಿ ಯಾವುದೇ ತೊಂದರೆಯಾಗದಂತೆ ಸುಗಮ ಮತದಾನಕ್ಕೆ ವ್ಯವಸ್ಥೆ ಕಲ್ಪಿಸಬೇಕು ಹಾಗೂ ಮತದಾರರು ತಮ್ಮ ಮೊಬೈಲ್‌ಗ‌ಳ ಮೂಲಕ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಾತ್ರಿ ಪಡಿಸಿಕೊಳ್ಳುವ ಕುರಿತು ಅರಿವು ಮೂಡಿಸಬೇಕು ಎಂದು ಹೇಳಿದರು.

ಕಲಬುರಗಿ ಜಿಲ್ಲಾ ಸ್ವೀಪ್‌ ಸಮಿತಿ ಅಧ್ಯಕ್ಷೆ ಹೆಪ್ಸಿಬಾರಾಣಿ ಕೊರ್ಲಪಾಟಿ ಮಾತನಾಡಿ, ಬೂತ್‌ ಮಟ್ಟದಲ್ಲಿ ವಿವಿ ಪ್ಯಾಟ್‌ ಅರಿವು ಮೂಡಿಸಲು “ಪರಿಚಯ’ ಎಂಬ ಕಾರ್ಯಕ್ರಮವನ್ನು ಪ್ರಸಕ್ತ ತಿಂಗಳು ಎರಡು ವಾರಗಳ ಅವಧಿಯಲ್ಲಿ ಹಮ್ಮಿಕೊಳ್ಳಲಾಗುವುದು. ಜಿಲ್ಲೆಯ 2267 ಮತಗಟ್ಟೆಗಳಲ್ಲಿ ಬೂತ್‌ ಮಟ್ಟದ ಜಾಗೃತಿ ಗುಂಪುಗಳ ಮುಖಾಂತರ ಅಣುಕು ಮತದಾನ ಮಾಡಿಸಲಾಗುವುದು. ಕಳೆದ ಚುನಾವಣೆಗಳಲ್ಲಿ ಮಹಿಳಾ ಮತದಾರರ ಮತದಾನದ ಪ್ರಮಾಣ ತುಂಬಾ ಕಡಿಮೆ ಇರುವ ಕಾರಣ ಮಹಿಳಾ ಮತದಾರರನ್ನು ಗುರಿಯಾಗಿಸಿಕೊಂಡು ವಿನೂತನ ಸ್ವೀಪ್‌ ಚಟುವಟಿಕೆ ಹಮ್ಮಿಕೊಳ್ಳಲಾಗುತ್ತಿದೆ.

ಮಹಿಳಾ ಮತದಾರರ ಕೈಯಲ್ಲಿ ಚುನಾವಣಾ ಲೋಗೋ ಮೆಹಂದಿ ಹಾಕುವುದು, ರಂಗೋಲಿ, ಫ್ಯಾಶನ್‌ ಶೋ, ಮತದಾನದ ದಿನದಂದು ಪ್ರಥಮ ಮತದಾನ ಮಾಡಿದ ಮಹಿಳೆಯರಿಗೆ ಕಾಣಿಕೆ ನೀಡಲಾಗುವುದು ಎಂದು ಹೇಳಿದರು. ಮಹಾನಗರ ಪಾಲಿಕೆ ಆಯುಕ್ತ ರಘುನಂದನಮೂರ್ತಿ, ಸ್ವೀಪ್‌ ಸಮಿತಿ ಸದಸ್ಯರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.