ಗೋದಾಮು ರೈತರಿಗೆ ವರದಾನ
Team Udayavani, Feb 17, 2018, 12:12 PM IST
ಆಳಂದ: 3.50 ಕೋಟಿ ರೂ. ವೆಚ್ಚದಲ್ಲಿ ಒಟ್ಟು ನಾಲ್ಕು ಗೋದಾಮು ಒಟ್ಟುಗೂಡಿಸಿ ಆಳಂದ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ನಿರ್ಮಿಸಲಾಗಿರುವ ಹೊಸ ಮಾದರಿ ಗೋದಾಮು ತಾಲೂಕಿನ ರೈತರಿಗೆ ಅನುಕೂಲವಾಗಲಿದೆ ಎಂದು ಸಂಸದ ಡಾ| ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಪಟ್ಟಣದಲ್ಲಿ ಕೃಷಿ ಮಾರುಕಟ್ಟೆ ಇಲಾಖೆ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆಳಂದ ಇವುಗಳ ಸಂಯುಕ್ತಾಶ್ರಯದಲ್ಲಿ ಆರ್. ಕೆ.ವಿ.ವೈ. ಯೋಜನೆಯಡಿ ಇಲ್ಲಿನ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ನಿರ್ಮಿಸಲಾಗಿರುವ 5,000 ಮೆ. ಟನ್ ಸಾಮರ್ಥ್ಯದ ಹೊಸ ಮಾದರಿ ಗೋದಾಮು ಉದ್ಘಾಟಿಸಿ ಅವರು ಮಾತನಾಡಿದರು.
ದೇಶದ ಬೆನ್ನೆಲುಬಾದ ರೈತ ಬೆಳೆದ ಅನ್ನದಿಂದಲೇ ದೇಶದ ಎಲ್ಲ ಜನರ ಹೊಟ್ಟೆ ತುಂಬುತ್ತಿದೆ ಎಂಬುದನ್ನು ಯಾರೂ ಮರೆಯಬಾರದು. ರೈತರ ಹಿತಕ್ಕಾಗಿ ರಾಜ್ಯ ಸರ್ಕಾರ ಅನೇಕ ಕಾರ್ಯಕ್ರಮ ಜಾರಿಗೊಳಿಸಿದೆ ಎಂದು ಹೇಳಿದರು.
ಹೈದ್ರಾಬಾದ್ ಕರ್ನಾಟಕ ಪ್ರದೇಶದ ಹಿಂದುಳಿದ ಪ್ರದೇಶ ಎಂದು ಮನಗಂಡು ಆರು ಜಿಲ್ಲೆಗಳಿಗೆ ವಿಶೇಷ ಮೀಸಲಾತಿ ಕಲ್ಪಿಸಲು ಸಂವಿಧಾನಕ್ಕೆ ತಿದ್ದುಪಡಿ ತಂದು 371(ಜೆ) ಕಲಂ ಜಾರಿಗೊಳಿಸಲಾಗಿದೆ. ಮೀಸಲಾತಿಯಿಂದ ಹೈ.ಕ. ಭಾಗದ ಸುಮಾರು 700 ಮೆಡಿಕಲ್ ಸೀಟು,4000ಕ್ಕಿಂತ ಹೆಚ್ಚು ಇಂಜನಿಯರಿಂಗ್ ಸೀಟು ಸ್ಥಳೀಯರಿಗೆ ಅಧ್ಯಯನಕ್ಕೆ ಅವಕಾಶ ಕಲ್ಪಿಸಿದೆ. ಇದಲ್ಲದೇ ಉದ್ಯೋಗದಲ್ಲಿಯೂ ಮೀಸಲಾತಿ ನೀಡಲಾಗಿದ್ದು, ಸ್ಥಳೀಯವರಿಗೆ ಶೇಕಡವಾರು ಮೀಸಲಾತಿ ನೀಡಿದ್ದು, ಸ್ಥಳೀಯರು ಇದರ ಪ್ರಯೋಜನ ಪಡೆಯಬೇಕು ಎಂದು ಹೇಳಿದರು.
ನಿಡುಮಾಮಿಡಿ ಮಾನವ ಪೀಠದ ಪರಮ ಪೂಜ್ಯ ವೀರಭದ್ರ ಚನ್ನಮಲ್ಲ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಶಾಸಕ ಬಿ.ಆರ್. ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಆಳಂದ ಎಂಪಿಎಂಸಿ ಅಧ್ಯಕ್ಷ ಶರಣಬಸಪ್ಪ ಬಿ. ಭೂಸನೂರ, ಆಳಂದ ಪುರಸಭೆ ಉಪಾಧ್ಯಕ್ಷ ಅಸಗರ್ ಅಲಿ ಹವಾಲ್ದಾರ, ಎಪಿಎಂಸಿ ಆಡಳಿತ ಮಂಡಳಿ ಸದಸ್ಯ ದತ್ತಪ್ಪ ಅಟ್ಟೂರ, ಎಪಿಎಂಸಿ ಕಾರ್ಯದರ್ಶಿ ಸಂತೋಷ ಬುಡಗೆ, ಶಂಕರರಾವ ದೇಶಮುಖ, ಪ್ರಕಾಶ ಮೂಲಭಾರತಿ, ಎಪಿಎಂಸಿ ಆಡಳಿತ ಮಂಡಳಿ ಸದಸ್ಯರು, ಸ್ಥಳೀಯ ಜನಪ್ರತಿನಿಧಿ ಗಳು, ಮುಖಂಡರು ಇದ್ದರು. ಜಿಪಂ ಸದಸ್ಯ ಸಿದ್ದರಾಮ ಪ್ಯಾಟಿ ಸ್ವಾಗತಿಸಿದರು. ರಮೇಶ ಮಾಡಿಯಾಳ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು