ಅಧಿಕಾರವಧಿಯಲ್ಲಿನ ಕಾರ್ಯವೇ ಶಾಶ್ವತ


Team Udayavani, Sep 16, 2017, 10:27 AM IST

gul-4.jpg

ಶಹಾಬಾದ: ರಾಜಕೀಯ ಜೀವನದಲ್ಲಿ ಅಧಿಕಾರ ಶಾಶ್ವತವಲ್ಲ. ನಾವು ಮಾಡಿದ ಕಾರ್ಯವೇ ಶಾಶ್ವತ. ಇದಕ್ಕೆ ಕಾರ್ಮಿಕ ಸಚಿವರಾದ ಸಮಯದಲ್ಲಿ ದಿ| ಸಿ.ಗುರುನಾಥ ಮಾಡಿದ ಕೆಲಸವೇ ಇಂದು ಮೂರ್ತಿ ಅನಾವರಣ ಆಗಿರುವುದಕ್ಕೆ ಸಾಕ್ಷಿ ಎಂದು ಮಾಜಿ ಸಚಿವ ರೇವುನಾಯಕ ಬೆಳಮಗಿ ಹೇಳಿದರು.

ಶುಕ್ರವಾರ ನಗರದ ಮಡ್ಡಿ ಬಡಾವಣೆ ಅಂಬೇಡ್ಕರ್‌ ಭವನದಲ್ಲಿ ಮಾಜಿ ಕಾರ್ಮಿಕ ಸಚಿವ ದಿ| ಸಿ.ಗುರುನಾಥ ಅವರ ಮೂರ್ತಿ
ಅನಾವರಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಯಾವುದೇ ಸಮಸ್ಯೆಗಳನ್ನು ಹೊತ್ತು ಬಂದ ಕಾರ್ಮಿಕರಿಗೆ, ನೊಂದ ಜನರಿಗೆ ನ್ಯಾಯ ಒದಗಿಸುವ ನಾಯಕರಾಗಿದ್ದರು ಗುರುನಾಥ.

ಯಾವತ್ತಿಗೂ ಸುಳ್ಳು ಹೇಳಿದವರಲ್ಲ. ಕಾರ್ಮಿಕರಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ದಿಟ್ಟವಾಗಿ ಮಾತನಾಡುವ ಎದೆಗಾರಿಕೆ ಅವರಲ್ಲಿತ್ತು. ಇಂದು ಮೂರ್ತಿ ಅನಾವರಣವಗಿದೆ ಎಂದರೆ ಅವರು ಮಾಡಿದ ಸಮಾಜಪರವಾದ ಕೆಲಸವೇ ಕಾರಣ ಎಂದರು.

ಮುಗುಳನಾಗಾವಿಯ ಅಭಿನವ ಸಿದ್ಧಲಿಂಗ ಶಿವಾಚಾರ್ಯರು ಮಾತನಾಡಿ, ಬಡತನ ಬಂದಾಗ ಧ್ಯಾನ ಮಾಡಬೇಕು. ಸಿರಿತನ ಬಂದಾಗ ದಾನ ಮಾಡಬೇಕು. ಅಧಿಕಾರ ಬಂದಾಗ ಸೇವೆ ಮಾಡಬೇಕು. ಈ ನಿಟ್ಟಿನಲ್ಲಿ ಗುರುನಾಥ ತಮ್ಮ ಅಧಿಕಾರದ ಅವಧಿಯಲ್ಲಿ ನೊಂದವರಿಗೆ ನಂದಾ ದೀಪ, ದೀನದಲಿತರ, ದುಃಖೀತರ, ಶೋಷಿತರ ಸೇವೆ ಮಾಡಿದ್ದರು ಎಂದು ನುಡಿದರು.

ಗುರುನಾಥ ಅವರು ತಮ್ಮ ಅಧಿಕಾರದ ಅವಧಿಯಲ್ಲಿ ಗುಡಿಗುಂಡಾರ ನಿರ್ಮಿಸಲು ಅನೇಕ ಕಡೆಗಳಲ್ಲಿನ ಗ್ರಾಮಸ್ಥರು
ಮನವಿ ಮಾಡಿದ್ದಾಗ ಮುಲಾಜಿಲ್ಲದೇ ನಿರಾಕರಿಸಿದ್ದರು. ಅದರ ಬದಲು ಶಾಲಾ ಕಟ್ಟಡಗಳನ್ನು ಕಟ್ಟಿಸಿದರು. ಅವರು ವೈಚಾರಿಕತೆ ನೆಲೆಗಟ್ಟಿನ ಮೇಲೆ ತಮ್ಮ ಬದುಕು ಕಟ್ಟಿಕೊಂಡಿದ್ದರು ಎಂದರು.

ವರಜ್ಯೋತಿ ಭಂತೇಜಿ ಮಾತನಾಡಿ, ದುಡಿಮೆಯೇ ಧರ್ಮ ಎಂದು ಗುರುನಾಥ ನಂಬಿದ್ದರು. ಹಂಚಿಕೊಂಡು ತಿನ್ನುವ ಗುಣ ಅವರಲ್ಲಿತ್ತು. ಕಾರ್ಮಿಕ ಸಚಿವರಾದಾಗ ಅಸಂಘಟಿತ ಕಾರ್ಮಿಕರ ಕೂಲಿ ನಿಗದಿ, ಕಾನೂನುಗಳನ್ನು ರಚನೆ ಮಾಡಿ ತೋರಿಸಿದವರಲ್ಲಿ ಪ್ರಥಮರಾಗಿದ್ದರು. ಅವರು ತಮ್ಮ ಜೀವನದ ಕೊನೆ ಗಳಿಗೆಯವರೆಗೂ ಕಾರ್ಮಿಕರ ಹಿತಾಸಕ್ತಿಗಾಗಿ ಬದುಕಿದ್ದರು ಎಂದು ಹೇಳಿದರು.

ತೊನಸನಹಳ್ಳಿ(ಎಸ್‌)ನ ಮಲ್ಲಣಪ್ಪ ಸ್ವಾಮೀಜಿ, ಜಿಪಂ ವಿರೋಧ ಪಕ್ಷದ ನಾಯಕ ಶಿವಾನಂದ ಪಾಟೀಲ, ದಸಂಸ ರಾಜ್ಯ ಸಂಘಟನಾ ಸಂಚಾಲಕ ಮರೆಪ್ಪ ಹಳ್ಳಿ, ಉದ್ಯಮಿ ಲಿಂಗಾರೆಡ್ಡಿ ಬಾಸರೆಡ್ಡಿ ಮಾತನಾಡಿದರು. ಮುಗುಳನಾಗಾವಿ ಜೇಮಸಿಂಗ್‌ ಮಹಾರಾಜರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಚಂದ್ರಿಕಾ ಪರಮೇಶ್ವರ, ಮಾಜಿ ಶಾಸಕ ವಾಲ್ಮೀಕಿ ನಾಯಕ, ಗೌತಮ ವೈಜನಾಥ ಪಾಟೀಲ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಡಾ| ಎಂ.ಎ. ರಶೀದ, ಜೆಡಿಎಸ್‌ ಗ್ರಾಮೀಣ ಕ್ಷೇತ್ರ ಅಧ್ಯಕ್ಷ ನಾಗರಾಜ ಸಿಂಗ್, ಉದ್ಯಮದಾರರಾದ ಅಣವೀರ ಇಂಗಿನಶೆಟ್ಟಿ, ಶಿವಕುಮಾರ ಇಂಗಿನಶೆಟ್ಟಿ, ನಗರಸಭೆ ಅಧ್ಯಕ್ಷೆ ಗೀತಾಸಾಹೇಬಗೌಡ ಬೋಗುಂಡಿ, ಉಪಾಧ್ಯಕ್ಷೆ  ಲಕ್ಷ್ಮೀಬಾಯಿ
ಕುಸಾಳೆ, ಸ್ಥಾಯಿ ಸಮಿತಿ ಅಧ್ಯಕ್ಷ ಕುಮಾರ ಚವ್ಹಾಣ, ಬಿಜೆಪಿ ಅಧ್ಯಕ್ಷ ಸುಭಾಷ ಜಾಪೂರ, ಜೆಡಿಎಸ್‌ ಅಧ್ಯಕ್ಷ ರಾಜಮಹ್ಮದ್‌ ರಾಜಾ, ಮೂರ್ತಿ ಅನಾವರಣ ಸಮಿತಿ ಗೌರಾವಾಧ್ಯಕ್ಷ ಸುರೇಶ ಮೆಂಗನ್‌, ಅಧ್ಯಕ್ಷ ನಿಂಗಣ್ಣ ಹುಳಗೋಳಕರ್‌ ಹಾಗೂ ಮತ್ತಿತರರು ಇದ್ದರು.

ಸಿ.ಗುರುನಾಥ ಅಭಿಮಾನಿಗಳ ಸಂಘದ ಅಧ್ಯಕ್ಷ ಗಿರೀಶ ಕಂಬಾನೂರ ಅಧ್ಯಕ್ಷತೆ ವಹಿಸಿದ್ದರು. ವಿಶ್ವನಾಥ ಹಡಪದ, ಗಿರಿಮಲ್ಲಪ್ಪ ವಳಸಂಗ ನಿರೂಪಿಸಿದರು, ರಾಜು ಕೋಬಾಳ ಮತ್ತು ಕೀರ್ತಿ ಪ್ರಾರ್ಥಿಸಿದರು, ಸುರೇಶ ಮೆಂಗನ ಪ್ರಾಸ್ತಾವಿಕ ಮಾತನಾಡಿದರು, ಲೋಹಿತ್‌ ಕಟ್ಟಿ ವಂದಿಸಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.