ಉತ್ತರಾದಿ ಮಠದಲ್ಲಿ ಕಳ್ಳತನ: ಡಿಸಿ ಕಚೇರಿಗೆ ಮುತ್ತಿಗೆ


Team Udayavani, Feb 16, 2018, 10:59 AM IST

gul-4.jpg

ಕಲಬುರಗಿ: ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡದಲ್ಲಿನ ಉತ್ತರಾಧಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಪತ್ತೆ ಹಚ್ಚಬೇಕೆಂದು ಆಗ್ರಹಿಸಿ ವಿವಿಧ ಸಂಘಟನೆಗಳ ಭಕ್ತರು ಮಳಖೇಡ ಮಠದಿಂದ ಆರಂಭಿಸಿದ ಪಾದಯಾತ್ರೆಯು ಗುರುವಾರ ಜಿಲ್ಲಾಧಿಕಾರಿ ಕಚೇರಿಗೆ ತಲುಪಿ ಪ್ರತಿಭಟನೆಯಾಗಿ ಮಾರ್ಪಟ್ಟಿತು.

ಪ್ರತಿಭಟನೆಕಾರರು ನಂತರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ, ಮಳಖೇಡ ಉತ್ತರಾಧಿಮಠ ಈ ಭಾಗದ ಪ್ರಸಿದ್ಧ ದೇವಸ್ಥಾನ. ಈ ಮಠ ಇತ್ತೀಚೆಗೆ ಮೇಲಿಂದ ಮೇಲೆ ಕಳ್ಳತನಕ್ಕೊಳಗಾಗುತ್ತಿದೆ. ಇದಕ್ಕೆ ಜಿಲ್ಲಾಡಳಿತ ಮತ್ತು ಪೊಲೀಸ್‌ ಇಲಾಖೆಯು ನಿರ್ಲಕ್ಷ ಎಂದು ಹೇಳಬೇಕಾಗಿದೆ. ಮೂರು ವರ್ಷಗಳ ಹಿಂದೆ ಕಳವೂ ಆದಾಗ ಅಪರಾಧಿಗಳನ್ನು ಪತ್ತೆ ಮಾಡದ ಕಾರಣ ಈಗ ಮತ್ತೆ ಅಪಾರ ಪ್ರಮಾಣದ ದೇವಾಲಯದ ಬೆಳ್ಳಿ, ಪೂಜಾ ಸಾಮಗ್ರಿಗಳು, 30 ಕೆ.ಜಿ ಬೆಳ್ಳಿ, 5 ಲಕ್ಷ ರೂ.ಗಳ ನಗದು ಸೇರಿದಂತೆ ಲಕ್ಷಾಂತರ ಮೊತ್ತದ ವಸ್ತುಗಳು ಕಳ್ಳತನವಾಗಿವೆ ಎಂದು ಕಳವಳ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ಹಲವಾರು ಮಠ-ಮಂದಿರಗಳು ಕೂಡ ಕಳ್ಳತನವಾಗಿದೆ. ಅವುಗಳು ಕೂಡ ಇನ್ನೂ ಪತ್ತೆಯಾಗಿಲ್ಲ. ಇದರಿಂದ ಮಠದ ಭಕ್ತಾಧಿಗಳಿಗೆ ಹಾಗೂ ಹಿಂದು ಸಮಾಜದವರಿಗೆ ಆತಂಕವಾಗಿದೆ. ತಿಂಗಳು ಆಗುತ್ತ ಬಂದರು ಆರೋಪಿಗಳನ್ನು ಪತ್ತೆ ಮಾಡುವಲ್ಲಿ ಜಿಲ್ಲಾಡಳಿತ ವಿಫಲವಾಗಿದೆ. ಇದನ್ನು ಖಂಡಿಸಿ ಮಳಖೇಡದಿಂದ ಡಿಸಿ ಕಚೇರಿವರೆಗೂ ಪಾದಯಾತ್ರೆ ಮಾಡಿ ಮನವಿ ಸಲ್ಲಿಸುತ್ತಿದ್ದೇವೆ.

2-3 ದಿನದೊಳಗಾಗಿ ದರೋಡೆ ಪ್ರಕರಣವನ್ನು ಪತ್ತೆ ಮಾಡಿ ಕಳ್ಳತನವಾದ ವಸ್ತುಗಳನ್ನು ಮಠಕ್ಕೆ ಒಪ್ಪಿಸಬೇಕು. ದರೋಡೆಕೋರರಿಗೆ ಶಿಕ್ಷೆ ವಿಧಿಸಬೇಕೆಂದು ಅವರು ಆಗ್ರಹಿಸಿದರು.

ಈ ವೇಳೆಯಲ್ಲಿ ಮಹಿಳಾ ಒಕ್ಕೂಟದ ಸಂಚಾಲಕಿ ಹಾಗೂ ಬಿಜೆಪಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ವಿವ್ಯಾ ಹಾಗರಗಿ, ದಕ್ಷಿಣ ಕ್ಷೇತ್ರದ ಶಾಸಕ ದತ್ತಾತ್ರೇಯ ಪಾಟೀಲ ರೇವೂರ್‌, ಬಿಜೆಪಿ ಮುಖಂಡ ವಿಜಯಕುಮಾರ ಸೇವಲಾನಿ, ಪೇಜಾವರ ಶ್ರೀ ಸೇನೆಯ ಅಧ್ಯಕ್ಷ ಎಂ.ಎಸ್‌. ಪಾಟೀಲ್‌ ನರಿಬೋಳ್‌, ಭಾಗೀರಥಿ ಗುನ್ನಾಪೂರ್‌, ನಿವೇದಿತಾ ದಹಿಂದೆ, ಗೀತಾ ಸಜ್ಜನ್‌, ಶಿವು ನಾಶಿ, ದೇವು ಪೂಜಾರಿ, ಸಂಗಮೇಶ ಶೆಳ್ಳಗಿ, ಗುರುರಾಜ ಅಂಬಾಡಿ, ಇಂದ್ರಾ ಬನಶೆಟ್ಟಿ, ಇಂದ್ರಾ ಚಿತ್ತಾಪೂರ್‌, ಶಶಿಕಲಾ, ಲಕ್ಷ್ಮಿಕಾಂತ ಜಮಾದಾರ್‌, ಅಖೀಲ್‌ ಜುನೈದಿ, ದೇವಿಂದ್ರ ಪೂಜಾರಿ, ಶೇಖರ್‌ ಬಿರಾದಾರ್‌, ಜಯ ಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಸಾರವಾಡ ಹಾಗೂ ಗೌಸಿಯಾಬೇಗಂ ಮುಂತಾದವರು ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.