ಥೀಮ್ ಪಾರ್ಕ್: ಮರು ಟೆಂಡರ್ಗೆ ಸೂಚನೆ
Team Udayavani, Jan 20, 2019, 9:18 AM IST
ಕಲಬುರಗಿ: ನಗರದ ದರಿಯಾಪುರ ಕೋಟನೂರ ಪ್ರದೇಶದಲ್ಲಿರುವ ರಾಜೀವಗಾಂಧಿ ಥೀಮ್ ಪಾರ್ಕ್ನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಭಿವೃದ್ಧಿಪಡಿಸಿ ನಿರ್ವಹಣೆ ಮಾಡಲು ಮರು ಟೆಂಡರ್ ಕರೆಯಿರಿ ಎಂದು ಪ್ರಾದೇಶಿಕ ಆಯುಕ್ತ ಸುಬೋಧ ಯಾಧವ ಸೂಚಿಸಿದರು.
ಪ್ರಾದೇಶಿಕ ಆಯುಕ್ತರ ಕಚೇರಿ ಸಭಾಂಗಣದಲ್ಲಿ ರಾಜೀವಗಾಂಧಿ ಥೀಮ್ ಪಾರ್ಕ್ ಅಭಿವೃದ್ಧಿಗೆ ಆಯೋಜಿಸಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈ ಹಿಂದೆ ರಾಜೀವಗಾಂಧಿ ಥೀಮ್ ಪಾರ್ಕ್ನಲ್ಲಿ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಅನುಕೂಲವಾಗುವ ಹಾಗೆ ತಮ್ಮ ಸ್ವಂತ ಹಣದಲ್ಲಿ ಅಭಿವೃದ್ಧಿಪಡಿಸಿ ನಿರ್ವಹಿಸಲು ಆಸಕ್ತಿ ವ್ಯಕ್ತಪಡಿಸುವ ಟೆಂಡರ್ ಕರೆಯಲಾಗಿತ್ತು. ಆದರೆ ಯಾರೂ ಟೆಂಡರ್ ಪ್ರಕ್ರಿಯೆಯಲ್ಲಿ ಭಾಗಿಯಾಗಿಲ್ಲ. ಕಾರಣ ಮತ್ತೂಂದು ಬಾರಿ ಮರು ಟೆಂಡರ್ ಕರೆಯಬೇಕು ಎಂದರು.
ಪಾರ್ಕ್ ಅಭಿವೃದ್ಧಿಗೆ ಆಸಕ್ತಿ ವ್ಯಕ್ತಪಡಿಸುವ ಟೆಂಡರ್ ಕರೆದಾಗ ಹೆಚ್ಚು ಗುತ್ತಿಗೆದಾರರು ಭಾಗವಹಿಸಲು ಅನುಕೂಲವಾಗುವ ಹಾಗೆ ಹಣಕಾಸು ಮತ್ತು ತಾಂತ್ರಿಕ ನಿಬಂಧನೆಗಳನ್ನು ಸಾಧ್ಯವಾದಲ್ಲಿ ಸಡಿಲಗೊಳಿಸಬೇಕು. 15 ದಿನಗಳ ಕಾಲಾವಕಾಶ ನೀಡಿ ಟೆಂಡರ್ ಕರೆಯಬೇಕು. ದೇಶದಲ್ಲಿ ದೊಡ್ಡ ಪ್ರಮಾಣದಲ್ಲಿ ಅಮ್ಯೂಜ್ಮೆಂಟ್ ಪಾರ್ಕ್ಗಳಂತಹ ಯೋಜನೆಗಳಲ್ಲಿ ಭಾಗವಹಿಸಿದವರು, ಇಂತಹ ಯೋಜನೆಗಳನ್ನು ನಿರ್ವಹಿಸುವರಿಗೆ ಕಲಬುರಗಿ ಥೀಮ್ ಪಾರ್ಕ್ ಕುರಿತು ಮಾಹಿತಿ ನೀಡಬೇಕು. ಈಗಾಗಲೇ ರಾಜೀವಗಾಂಧಿ ಥೀಮ್ ಪಾರ್ಕ್ ಅಭಿವೃದ್ಧಿಗೆ 4 ಕೋಟಿ ರೂ. ಖರ್ಚು ಮಾಡಲಾಗಿದೆ ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ, ಹೆ„.ಕ.ಪ್ರ.ಅ. ಮಂಡಳಿ ಅಧಿಧೀಕ್ಷಕ ಇಂಜಿನಿಯರ್ ತಿಪ್ಪೇಶ, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಇಂಜಿನಿಯರ್ ಮುಖ್ತಾರ, ಮಹಾನಗರಪಾಲಿಕೆ ಕಾರ್ಯನಿರ್ವಾಹಕ ಇಂಜಿನಿಯರ್ ಶಿವನಗೌಡ ಪಾಟೀಲ ಮತ್ತಿತರರು ಪಾಲ್ಗೊಂಡಿದ್ದರು.
ಗುತ್ತಿಗೆದಾರರಿಗೆ ಷರತ್ತು
ಥೀಮ್ ಪಾರ್ಕ್ ಅಭಿವೃದ್ಧಿ ಹಾಗೂ ನಿರ್ವಹಣೆಗೆ ಆಸಕ್ತಿ ವ್ಯಕ್ತಪಡಿಸುವವರು ಕಳೆದ ಐದು ವರ್ಷಗಳಲ್ಲಿ ಕನಿಷ್ಠ ಎರಡು ವರ್ಷ ಆರು ಕೋಟಿ ರೂ.ಗಳ ಹಣಕಾಸು ವಹಿವಾಟು ಮಾಡಿದವರಾಗಿರಬೇಕು. ಟೆಂಡರ್ನಲ್ಲಿರುವ ಹಣಕಾಸು ಮತ್ತು ತಾಂತ್ರಿಕ ಅವಶ್ಯಕತೆಗಳೊಂದಿಗೆ ಈ ಹಿಂದಿನ 10 ವರ್ಷಗಳಲ್ಲಿ ಥೀಮ್ ಪಾರ್ಕ್ಗಳಂತಹ ಯೋಜನೆಗಳನ್ನು ಅಭಿವೃದ್ಧಿಪಡಿಸಿ ನಿರ್ವಹಿಸಿದ ಅನುಭವ ಹೊಂದಿರಬೇಕು. ಆಸಕ್ತಿ ವ್ಯಕ್ತಪಡಿಸಿದ ಯಶಸ್ವಿ ಬಿಡ್ಡುದಾರರು ರಾಜೀವಗಾಂಧಿ ಥೀಮ್ ಪಾರ್ಕ್ ಅಭಿವೃದ್ಧಿ ಹಾಗೂ ನಿರ್ವಹಣೆ ಕುರಿತು ವಿವರಣೆ ನೀಡಬೇಕಾಗುತ್ತದೆ. ಅದರ ಆಧಾರದ ಮೇಲೆ ಅಂಕ ನೀಡುವ ಮೂಲಕ ಬಿಡ್ಡುದಾರರನ್ನು ಆಯ್ಕೆ ಮಾಡಲಾಗುವುದು. ಥೀಮ್ ಪಾರ್ಕ್ ಅಭಿವೃದ್ಧಿಗೆ ಆಸಕ್ತಿ ವ್ಯಕ್ತಪಡಿಸಿದವರು ಸುಮಾರು 8 ಕೋಟಿ ರೂ.ಗಳಿಗಿಂತಲೂ ಹೆಚ್ಚಿನ ಅನುದಾನದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಬೇಕು. ಗರಿಷ್ಠ 20 ವರ್ಷಗಳವರೆಗೆ ಥೀಮ್ ಪಾರ್ಕ್ನ್ನು ಲೀಸ್ಗೆ ನೀಡಲಾಗುವುದು. ಇದಕ್ಕಿಂತಲೂ ಕಡಿಮೆ ಅವಧಿಯಲ್ಲಿ ಹಾಗೂ ಹೆಚ್ಚಿನ ಬಂಡವಾಳ ಹೂಡಿ ಪಾರ್ಕ್ನಿಂದ ಬಂದ ಆದಾಯದಲ್ಲಿ ತಮ್ಮ ಹೂಡಿಕೆ ಪಡೆದು ಮರಳಿ ಪಾರ್ಕ್ನ್ನು ಮಹಾನಗರ ಪಾಲಿಕೆಗೆ ಹಸ್ತಾಂತರಿಸುವವರನ್ನು ಆಯ್ಕೆಗೆ ಪರಿಗಣಿಸಲಾಗುವುದು.
•ಸುಬೋಧ ಯಾಧವ, ಪ್ರಾದೇಶಿಕ ಆಯುಕ್ತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ