ತೊಗರಿ ಬಂಪರ್‌ ಬೆಳೆ ಬಂದರೂ ಬೆಲೆ ಇಲ್ಲ 


Team Udayavani, Jan 16, 2017, 3:45 AM IST

dal.jpg

ಕಲಬುರಗಿ: ಕಳೆದ ವರ್ಷ ಭೀಕರ ಬರಗಾಲದಿಂದ ಇಳುವರಿ ಬಾರದೇ ಕಂಗಾಲಾಗಿದ್ದ ತೊಗರಿ ಬೆಳೆಗಾರರು ಈ ವರ್ಷ ಬಂಪರ್‌ ಇಳುವರಿ ತೆಗೆದಿದ್ದಾರೆ. ಆದರೆ ಸರ್ಕಾರದ ಬೆಂಬಲೆ ಬೆಲೆ ಹೊರತಾಗಿಯೂ ಸೂಕ್ತ ಬೆಲೆ ಸಿಗದೆ ಪರದಾಡುವಂತಾಗಿದೆ. ರೈತರ ನೆರವಿಗೆ ಬರಬೇಕಿದ್ದ ತೊಗರಿ ಕೇಂದ್ರಗಳು ನಾಮ್‌ ಕೆ ವಾಸ್ತೆ ಎನ್ನುವಂತಾಗಿವೆ.

ಬೆಲೆ ಕುಸಿತದಿಂತ ತೊಗರಿ ಬೆಳೆಗಾರರನ್ನು ರಕ್ಷಿಸುವ ಸಲುವಾಗಿ ಕೇಂದ್ರದ 5050 ರೂ. ಬೆಂಬಲ ಬೆಲೆಗೆ ರಾಜ್ಯ ಸರ್ಕಾರ 1000 ರೂ. ಪ್ರೋತ್ಸಾಹಧನ ನೀಡಬಹುದು ಎನ್ನುವ ನಿರೀಕ್ಷೆ ರೈತರಲ್ಲಿತ್ತು. 2014-15ರಲ್ಲಿ 750 ರೂ. ಪ್ರೋತ್ಸಾಹ ಧನ ನೀಡಿದ್ದ ರಾಜ್ಯ ಸರ್ಕಾರ ಈ ವರ್ಷ ಕೇವಲ 450 ರೂ. ನೀಡಿರುವುದರಿಂದ ಪ್ರೋತ್ಸಾಹ ಧನದಿಂದ ತೊಗರಿ ಬೆಳೆಗಾರರಿಗೆ ಪ್ರಯೋಜನವಿಲ್ಲದಂತಾಗಿದೆ.

ಎರಡು ವರ್ಷದ ಹಿಂದೆ ತೊಗರಿಗೆ ಮಾರುಕಟ್ಟೆಯಲ್ಲಿ 5200 – 5300 ರೂ. ಬೆಲೆ ಇತ್ತು. ಆಗ 4300 ರೂ. ಬೆಂಬಲ ಬೆಲೆ ಜೊತೆಗೆ ರಾಜ್ಯ ಸರ್ಕಾರ ಪ್ರತಿ ಕ್ವಿಂಟಲ್‌ಗೆ 700 ರೂ. ಪ್ರೋತ್ಸಾಹ ಧನ ಸೇರಿಸಿ 5000 ರೂ.ನಂತೆ ಖರೀದಿಸುತ್ತಿತ್ತು. ಈ ವರ್ಷ 5050 ರೂ. ಬೆಂಬಲ ಬೆಲೆ ಮತ್ತು ರಾಜ್ಯ ಸರ್ಕಾರದ ಪ್ರೋತ್ಸಾಹ ಧನ 450 ರೂ. ಸೇರಿ 5500 ರೂ. ದರದಲ್ಲಿ ಖರೀದಿ ಪ್ರಕ್ರಿಯೆ ಆರಂಭವಾಗಿದೆ. ಆದರೆ ಕೆಲ ಕಾರಣಗಳಿಂದ ಮಾರುಕಟ್ಟೆ ದರ 4300 ರೂ. ದಿಂದ 4700 ರೂ. ಬೆಲೆಯಲ್ಲಿಯೇ ತೊಗರಿ ಹೆಚ್ಚು ಮಾರಾಟವಾಗುತ್ತಿದೆ.

ನ್ಯಾಫೆಡ್‌ ಸಂಸ್ಥೆ ಕಳೆದ ಡಿಸೆಂಬರ್‌ ಮಾಸಾಂತ್ಯದಲ್ಲಿ ಜಿಲ್ಲೆಯ ಏಳು ಕಡೆ ಖರೀದಿ ಕೇಂದ್ರಗಳನ್ನು ತೆರೆದಿದೆ. ಇನ್ನೂ ಏಳು ಕಡೆ ಖರೀದಿ ಪ್ರಕ್ರಿಯೆ ಉಸ್ತುವಾರಿಯನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿಗೆ ವಹಿಸಲಾಗಿದೆ. 

ಮಹಾಮಂಡಳಿಯು ತಾಲೂಕು ಕೃಷಿ ಉತ್ಪನ್ನ ಹುಟ್ಟುವಳಿ ಮಾರಾಟ ಸಹಕಾರಿ ಸಂಘ (ಟಿಎಪಿಸಿಎಂಎಸ್‌) ಮೂಲಕ ಖರೀದಿಸುತ್ತಿದೆ. ಎಲ್ಲಕ್ಕೂ ಮೊದಲೇ ತೊಗರಿ ಬೆಳೆಗಾರರ ನೆರವಿಗೆ ಬರಬೇಕಿದ್ದ ತೊಗರಿ ಅಭಿವೃದ್ಧಿ ಮಂಡಳಿ ಈಗ ಎಚ್ಚೆತ್ತು ಸೋಮವಾರದಿಂದ (ಜ. 16) ಖರೀದಿಗೆ ಮುಂದಾಗಿದೆ.

ರೈತರ ಸ್ಪಂದನೆ ಇಲ್ಲ;
ನ್ಯಾಫೆಡ್‌ ಹಾಗೂ ತೊಗರಿ ಮಂಡಳಿ ತೊಗರಿಯನ್ನು ಖರೀದಿಸುತ್ತಿದ್ದರೂ ತೊಗರಿ ಬೆಳೆಗಾರರು ಸ್ಪಂದಿಸುತ್ತಿಲ್ಲ. ನ್ಯಾಫೆಡ್‌ ಹಾಗೂ ಸಹಕಾರಿ ಸಂಘಗಳಲ್ಲಿನ ತೊಗರಿ ಖರೀದಿ ಕೇಂದ್ರಗಳಲ್ಲಿ ಸಾಮಾನ್ಯ ರೈತರು ತೊಗರಿ ನೇರವಾಗಿ ಒಯ್ಯುವಂತಿಲ್ಲ. ಮೊದಲು ಪಹಣಿ, ಆಧಾರ ಕಾರ್ಡ್‌ಗಳೊಂದಿಗೆ ಹೆಸರು ನೋಂದಾಯಿಸಬೇಕು. ಈಗ ಹೆಸರು ನೋಂದಾಯಿಸಿದರೆ ಫೆಬ್ರವರಿ ಕೊನೆ ವಾರ ಸರದಿ ಬರುತ್ತದೆ. ಜೊತೆಗೆ ತಕ್ಷಣವೇ ಹಣ ರೈತರ ಕೈಸೇರಲಿದೆ. ಆದರೆ ಮಂಡಳಿಯು ಸಹಕಾರ ಸಂಘಗಳಿಂದ ಮೂಲಕ ಖರೀದಿಸಿ ನ್ಯಾಫೆಡ್‌ಗೆ ನೀಡಿ ಅಲ್ಲಿಂದ ಹಣ ಬಂದ ಮೇಲೆ ರೈತರ ಖಾತೆಗೆ ಹಣ ಪಾವತಿಸುತ್ತದೆ. ಹೀಗಾಗಿ ರೈತರು ನ್ಯಾಫೆಡ್‌ ಹಾಗೂ ಮಂಡಳಿ ಮೂಲಕ ಮಾರಿದಾಗ ಸಿಗುವ 5500 ರೂ. ಬಿಟ್ಟು 4400ರಿಂದ 4700 ದರಕ್ಕೆ ಮಾರುಕಟ್ಟೆಯಲ್ಲಿ ತೊಗರಿಯನ್ನು ಮಾರುತ್ತಿದ್ದಾರೆ.

ಮಾರುಕಟ್ಟೆಯಲ್ಲಿ 4400ರಿಂದ 4700 ರೂ. ದರದಲ್ಲಿ ರೈತರಿಂದ ಖರೀದಿ ಮಾಡಿರುವ ಮಧ್ಯವರ್ತಿಗಳು ಖರೀದಿ ಕೇಂದ್ರಗಳಲ್ಲಿ 5500 ರೂ.ಗೆ ಮಾರಾಟ ಮಾಡುತ್ತಿದ್ದಾರೆ.

ರಾಜ್ಯ ಸರ್ಕಾರ ಬೆಂಬಲ ಬೆಲೆ ಮೇಲೆ ಕನಿಷ್ಠ ಸಾವಿರ ರೂ. ಪ್ರೋತ್ಸಾಹ ಧನ ಘೋಷಿಸಬೇಕೆಂದು ಸಂಸದ ಡಾ| ಮಲ್ಲಿಕಾರ್ಜುನ ಖರ್ಗೆ ಅವರಲ್ಲಿ ಮನವಿ ಮಾಡಲಾಗಿತ್ತು. ಆದರೆ ಸರ್ಕಾರ ಕೇವಲ 450 ರೂ. ಘೋಷಿಸಿದೆ. ಖರೀದಿ ಕೇಂದ್ರಗಳಲ್ಲಿ ಸಾಮಾನ್ಯ ರೈತರಿಗಿಂತ ಮಧ್ಯವರ್ತಿ(ದಲ್ಲಾಳಿ)ಗಳ ತೊಗರಿಯೇ ಮಾರಾಟವಾಗುತ್ತಿದೆ. ಹೀಗಾಗಿ ರೈತರ ಎಲ್ಲ ನಿರೀಕ್ಷೆ ಹುಸಿಯಾಗುತ್ತಿವೆ.
– ಮಾರುತಿ ಮಾನ್ಪಡೆ, ಅಧ್ಯಕ್ಷರು, ಕರ್ನಾಟಕ ಪ್ರಾಂತ ರೈತ ಸಂಘ

ಮೂರು ವರ್ಷಗಳ ಬೆಲೆ
ವರ್ಷ ಬೆಂಬಲ ಬೆಲೆ ಮಾರುಕಟ್ಟೆಯಲ್ಲಿ ಮಾರಾಟವಾದ ಬೆಲೆ
2016-17 5050 ರೂ. 4000-4700ರೂ.
2015-16 4625 ರೂ. 9000-13000ರೂ.
2014-15 4350 ರೂ. 4600-5200ರೂ.

– ಹಣಮಂತರಾವ ಭೈರಾಮಡಗಿ

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.