ಸರಳ ಬದುಕಿನ ರೂಢಿ ಅಗತ್ಯ: ಸಚಿವ ಡಾ| ಶರಣಪ್ರಕಾಶ


Team Udayavani, Oct 10, 2017, 9:54 AM IST

gul-2.jpg

ಕಲಬುರಗಿ: ಜೀವನ ಕ್ರಮ ಸರಳವಾಗಿದ್ದರೆ ಮಾತ್ರವೇ ಬಹು ದಿನಗಳ ಕಾಲ ನಾವು ಜನರ ನೆನಪಿನಲ್ಲಿ ಜೀವಂತ ಇರಲು ಸಾಧ್ಯ. ಈ ನಿಟ್ಟಿನಲ್ಲಿ ಸರಳ ಜೀವನದ ಜೊತೆಯಲ್ಲಿ ಅದ್ಭುತ ಸಾಧನೆ ಮಾಡಿದವರು ಸನ್ಮಾನಕ್ಕೆ ಭಾಜನರಾಗುತ್ತಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಹೇಳಿದರು.

ರವಿವಾರ ತಾಜಸುಲ್ತಾನಪುರ ಗ್ರಾಮದ ಕೆ.ಎಸ್‌.ಆರ್‌.ಪಿ. ಮೈದಾನದಲ್ಲಿ ಸ್ನೇಹ ಸಂಗಮ ವಿವಿದೋದ್ದೇಶ ಸಂಘದ ವತಿಯಿಂದ ಏರ್ಪಡಿಸಿದ್ದ, ರಾಜ್ಯ ಸರಕಾರದ “ಹಿರಿಯ ನಾಗರಿಕ ಪ್ರಶಸ್ತಿ’ ಪ್ರದಾನ ಸಮಾರಂಭದಲ್ಲಿ ವಿಶ್ರಾಂತ ನ್ಯಾಯಮೂರ್ತಿ ಅರಳಿ ನಾಗರಾಜ, ರಾಷ್ಟ್ರಪತಿ ಪದಕ ಪಡೆದ ಬಸವರಾಜ ಜಿಳ್ಳೆ ಅವರನ್ನು ಸನ್ಮಾನಿಸಿ ಅವರು ಮಾತನಾಡಿದರು.

ಸಮಾಜದ ಏಳ್ಗೆಗಾಗಿ ಹಗಲಿರುಳು ಶ್ರಮಿಸುತ್ತಿರುವ ಚೇತನಗಳನ್ನು ಗುರುತಿಸಿ, ಗೌರವಿಸುವುದು ಅಗತ್ಯವಾಗಿದೆ. ಸರಳತೆ, ಸಹಜತೆ, ಬದ್ಧತೆ, ಪ್ರಾಮಾಣಿಕತೆಯಿಂದ ಕಾರ್ಯ ನಿರ್ವಹಿಸುವವರನ್ನು ಸತ್ಕರಿಸುವ ಮೂಲಕ ಸಮಾಜದ ವಿದ್ಯಾರ್ಥಿ ಯುವ ಪೀಳಿಗೆಗೆ ಪರಿಚಯಿಸುವ ಕಾರ್ಯ ಆಗಬೇಕು ಎಂದರು. ಅಭಿನಂದನೆ ಸ್ವೀಕರಿಸಿ ಮಾತನಾಡಿದ ವಿಶ್ರಾಂತ ನ್ಯಾಯಮೂರ್ತಿ ಅರಳಿ ನಾಗರಾಜ ಗಂಗಾವತಿ ಮಾತನಾಡಿ, ಆದರ್ಶ ಸಮಾಜದ ನಿರ್ಮಾಣದಲ್ಲಿ ವಿದ್ಯಾರ್ಥಿ ಮತ್ತು ಯುವಜನತೆ ಪಾತ್ರ ಬಹುಮುಖ್ಯವಾಗಿದೆ. ಮಕ್ಕಳಲ್ಲಿ ಉತ್ತಮ ಸಂಸ್ಕಾರ, ಸತ್ಯನಿಷ್ಠೆ ಹಾಗೂ ಸಮಾಜದ ಕುರಿತು ಚಿಂತನೆ ಬೋಧಿ ಸುವುದು ಅಗತ್ಯ ಎಂದರು.

ಮೀತಿಮೀರಿದ ಭ್ರಷ್ಟಾಚಾರದಿಂದ ಜನತೆ ರೋಸಿ ಹೋಗಿದ್ದಾರೆ. ವ್ಯವಸ್ಥೆಯ ಬದಲಾವಣೆಗೆ ಇದು ಸಕಾಲವಾಗಿದ್ದು, ಪ್ರತಿಯೊಬ್ಬರು ಭ್ರಷ್ಟಾಚಾರ ಮುಕ್ತ ಸಮಾಜಕ್ಕಾಗಿ ಹೆಜ್ಜೆ ಹಾಕುವಂತೆ ಕರೆ ನೀಡಿದರು. ಸನ್ಮಾನಿತ ಸಾಧಕ ಕೆ.ಎಸ್‌.ಆರ್‌.ಪಿ., ಎಸ್‌.ಪಿ. ಬಸವರಾಜ ಜಿಳ್ಳೆ ಮಾತನಾಡಿ, ಸಮಾಜದ ಪ್ರಗತಿಯಲ್ಲಿ ಸಂಘ ಸಂಸ್ಥೆಗಳ ಪಾತ್ರ ಅತ್ಯಂತ ಹಿರಿದಾಗಿದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಹಣಮಂತರಾಯ ಅಟ್ಟೂರ ಮಾತನಾಡಿದರು. ಕಲಬುರಗಿ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಆರ್‌.ಕೆ. ಹೀರೆಮಠ, ಜಿಲ್ಲಾಧ್ಯಕ್ಷ ಹೈದ್ರಾಬಾದ ಕರ್ನಾಟಕ ಅಭಿವೃದ್ಧಿ ವೇದಿಕೆ ಅಧ್ಯಕ್ಷ ನಾಗಲಿಂಗಯ್ಯ ಮಠಪತಿ ಹಾಜರಿದ್ದರು. ಗುಂಡಣ್ಣಾ ಡಿಗ್ಗಿ ಹರಸೂರ, ಗಣೇಶ ಪಾಟೀಲ ಅವರಿಂದ ನಗೆಚಟಾಕಿ ನಡೆಯಿತು. 

ನಂದೀಶ್ವರ ಜೆ. ಪಾಟೀಲ, ಸಾಯಬಣ್ಣ ಬೆಳಮ, ರಾಜಶೇಖರ ಪಾಟೀಲ, ಶಿವಕುಮಾರ ಗಣಾಚಾರಿ, ರಘುನಂದನ ಕುಲಕರ್ಣಿ, ಕಲ್ಯಾಣಿ ಮುರುಡ್‌, ಆನಂದ ಖೇಳಗಿ, ಶರಣು ಜೆ. ಪಾಟೀಲ, ಭೀಮರಾವ ಹುಂಪಳಿ, ನಾಗರಾಜ ಹೆಬ್ಟಾಳ, ಡಾ. ರಾಜಕುಮಾರ ಪಾಟೀಲ, ರಜನಿಕಾಂತ ಬರುಡೆ, ಶಿವಶರಣಪ್ಪ ಸಿರಿ, ಡಾ| ಸುಧಾ ಹಾಲಕಾಯಿ, ಗೋಪಾಲ ಪಾಲಾದಿ, ನೀಲಾಂಬಿಕಾ ಚೌಕಿಮಠ, ಚನ್ನಬಸವ, ನಿಸಾರ್‌ ಅಹ್ಮದ್‌ ಸೇರಿದಂತೆ ಕೆ.ಎಸ್‌.ಆರ್‌.ಪಿ. ಸಿಬ್ಬಂದಿ  ಹಾಗೂ ನೂರಾರು ಜನ ಭಾಗವಹಿಸಿದ್ದರು. ನಾಗಲಿಂಗಯ್ಯ ಮಠಪತಿ ಸ್ವಾಗತಿಸಿದರು. ರವಿ ಶಹಾಪೂರಕರ್‌ ನಿರೂಪಿಸಿದರು, ಮಲಕಾರಿ ಪೂಜಾರಿ ವಂದಿಸಿದರು.

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.