ಆರಾಧನೆಗೆ ಜಾತಿ ಸಂಕೋಲೆಯಿಲ್ಲ


Team Udayavani, Oct 23, 2017, 10:13 AM IST

gul-1.jpg

ಸೇಡಂ: ಸಂತ, ಶರಣರ ಆರಾಧನೆಗೆ ಯಾವುದೇ ತರಹದ ಜಾತಿ ಸಂಕೋಲೆಗಳು ಇರುವುದಿಲ್ಲ ಎಂದು ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾ ಧಿಪತಿ ಪೂಜ್ಯ ಸುಭುದೇಂದ್ರತೀರ್ಥ ಶ್ರೀಪಾದಂಗಳವರು ನುಡಿದರು. ಪಟ್ಟಣದ ಕೋಡ್ಲಾ ರಸ್ತೆಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಶ್ರೀ ರಾಘವೇಂದ್ರ ಸ್ವಾಮಿ ಮಠದ ಭೂಮಿ ಪೂಜೆ ನೆರವೇರಿಸಿದ ಅವರು, ನಂತರ ತಾಪಾಡಿಯಾ ಭವನದಲ್ಲಿ ಆಯೋಜಿಸಿದ್ದ ಪ್ರವಚನ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.

ರಾಘವೇಂದ್ರ ಸ್ವಾಮೀಜಿ ಸರ್ವ ಜಾತಿ, ಜನಾಂಗದ ಭಕ್ತರಿಂದ ಪೂಜಿಸಲ್ಪಟ್ಟವರು. ಅವರ ನಿತ್ಯ ಆರಾಧನೆಯಿಂದ ಮನಶಾಂತಿ ದೊರೆಯುತ್ತದೆ. ಇಷ್ಟಾರ್ಥಗಳ ಈಡೇರಕರಾಗಿರುವ ರಾಯರನ್ನು ಸೇಡಂ ಪಟ್ಟಣಕ್ಕೆ ಬರಮಾಡಿಕೊಳ್ಳುವ ಜವಾಬ್ದಾರಿ ಪ್ರತಿ ಸಮಾಜದ ವ್ಯಕ್ತಿಗಳ ಮೇಲೂ ಇದೆ. ಎಲ್ಲರೂ ಒಟ್ಟಾಗಿ ರಾಯರ ಮಠ ನಿರ್ಮಿಸುವಂತಾಗಬೇಕು ಎಂದು ನುಡಿದರು.

ಮಾನವನು ಸಮಯದ ಸದುಪಯೋಗ ಮಾಡಿಕೊಳ್ಳದೇ ದಿನನಿತ್ಯ ನರಳುವಂತಾಗಿದೆ. ಸರಿಯಾದ ರೀತಿಯಲ್ಲಿ ಸಮಯ ಸದ್ಬಳಕೆಯಾದರೆ ಆರ್ಥಿಕ, ಸಾಮಾಜಿಕ ಮತ್ತು ದೈಹಿಕವಾಗಿ ಸದೃಢರಾಗಲು ಸಾಧ್ಯ. ಭವ ರೋಗದಿಂದ ಮುಕ್ತಿ ಹೊಂದಲು ರಾಯರ ಆರಾಧನೆ ಅತಿಮುಖ್ಯ. ರಾಘವೇಂದ್ರ ಸ್ವಾಮೀಜಿ ನೆಲೆಸುವ ಸ್ಥಳ ಸರ್ವ ಸಂಪದ್ಭರಿತ ಆಗಿರುತ್ತದೆ ಎಂದು ಹೇಳಿದರು.

ವೈದ್ಯಕೀಯ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ| ಶರಣಪ್ರಕಾಶ ಪಾಟೀಲ ಮಾತನಾಡಿ, ಲಕ್ಷಾಂತರ ಜನರ ಆರಾಧ್ಯ ದೈವವಾಗಿರುವ ರಾಘವೇಂದ್ರ ಸ್ವಾಮೀಜಿ ಮಠ ಸೇಡಂನಲ್ಲಿ ನಿರ್ಮಾಣ ಆಗುತ್ತಿರುವುದು ಖುಷಿ ತಂದಿದೆ. ಕಾಮಗಾರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಅಥವಾ ವೈಯಕ್ತಿಕವಾಗಿ ಸೇವೆ ಸಲ್ಲಿಸಲು ಸದಾ ಸಿದ್ಧರಿರುವುದಾಗಿ ಭರವಸೆ ನೀಡಿದರು.

ಶ್ರೀಮಠದ ಅರ್ಚಕ ವಾದಿರಾಜ ಆಚಾರ್ಯ, ಸುಭಾಶ ಆಚಾರ್ಯ, ಹಾಪಕಾಮ್ಸ್‌ ರಾಜ್ಯಾಧ್ಯಕ್ಷ ಬಸವರಾಜ ಪಾಟೀಲ ಊಡಗಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ನಾಗೇಶ್ವರಾವ್‌ ಮಾಲಿಪಾಟೀಲ, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಸುದರ್ಶನರೆಡ್ಡಿ ಪಾಟೀಲ, ಪ್ರಮುಖರಾದ ಶ್ರೀನಿವಾಸರಾವ್‌ ದೇಶಪಾಂಡೆ, ಡಾ| ಮುರಳಿಧರ ದೇಶಪಾಂಡೆ, ಪಾಡುರಂಗ ಜೋಶಿ, ಸಂತೋಷ ಮಹಾರಾಜ ಸಿಂಧನಮಡು, ರಮೇಶ ಮಾಲು, ಕೃಷ್ಣಾಚಾರ ನವಲಿ, ಮೋಹನಕುಮಾರ ರಂಜೋಳ, ಅಮಿತ ಜೋಶಿ, ರಾಜಗೋಪಾಲರೆಡ್ಡಿ, ವೆಂಕಟೇಶ ಕುಲಕರ್ಣಿ, ನರಸಿಂಹ ಕುಲಕರ್ಣಿ, ಕಾಶಿನಾಥ ಕುಲಕರ್ಣಿ, ಸಂತೋಷ ಕುಲಕರ್ಣಿ ಇನ್ನಿತರರು ವೇದಿಕೆಯಲ್ಲಿದ್ದರು. ಸರೋಜಾ ಕುಲಕರ್ಣಿ ವೈಯಕ್ತಿಕ ಗೀತೆ ಹಾಡಿದರು. ಶ್ರೀನಿವಾಸ, ಭೀಮಸೇನರಾವ್‌ ಕುಲಕರ್ಣಿ ಪ್ರಾರ್ಥಿಸಿದರು. ಸಂತೋಷ ಕುಲಕರ್ಣಿ ಸ್ವಾಗತಿಸಿದರು. ರಾಮಚಂದ್ರ ಜೋಶಿ, ಜಗನ್ನಾಥ ದೇಶಕ ನಿರೂಪಿಸಿ, ವಂದಿಸಿದರು. 

ಪುರ ಪ್ರವೇಶಕ್ಕೆ ಭಕ್ತರ ಮಹಾಪೂರ
ಸೇಡಂ: ಪ್ರಥಮ ಬಾರಿಗೆ ಸೇಡಂ ಪುರಪ್ರವೇಶ ಮಾಡಿದ ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿ ಪತಿ ಪೂಜ್ಯ ಸುಬುಧೇಂದ್ರತೀರ್ಥ ಶ್ರೀಪಾದಂಗಳವರನ್ನು ಭಕ್ತ ಸಮೂಹ ಅದ್ಧೂರಿಯಾಗಿ ಸ್ವಾಗತಿಸಿತು. ಶನಿವಾರ ಸಂಜೆ ಪುರಪ್ರವೇಶ ಮಾಡಿದ ಶ್ರೀಗಳನ್ನು ಶ್ರೀ ಹನುಮಾನ ದೇವಾಲಯದಿಂದ ಲಕ್ಷ್ಮೀನಾರಾಯಣ ಮಂದಿರದ ವರೆಗೆ ತೆರೆದ ರಥದಲ್ಲಿ ಮೆರವಣಿಗೆ ಮಾಡಲಾಯಿತು. ಈ ವೇಳೆ ಭಕ್ತರು ಪುಷ್ಪಾರ್ಚನೆ ಮಾಡಿದರು. ರವಿವಾರ ಬೆಳಗ್ಗೆ ಯಾದಗಿರಿ ರಸ್ತೆಯಲ್ಲಿರುವ ಭೂದಾನಿ ಪಾಡುರಂಗ ಜೋಶಿ ಅವರ ಜಮೀನಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ದೇವಾಲಯದ ಭೂಮಿ ಪೂಜೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ನಂತರ ಸಾಮೂಹಿಕ ಪಾದಪೂಜೆ ನೆರವೇರಿಸಿದ ನೂರಾರು ಭಕ್ತರು, ಸಂಸ್ಥಾನ ಮಹಾಪೂಜೆಯಿಂದ ಕಾರ್ಯಕ್ರಮ ಸಂಪನ್ನಗೊಳಿಸಿದರು.

ಟಾಪ್ ನ್ಯೂಸ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

10-uv-fusion

Theater: ಅಳಿವು ಉಳಿವಿನ ದವಡೆಯಲ್ಲಿ ರಂಗಭೂಮಿ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.