ಛೇ..ಸಿಮೆಂಟ್‌ ನಗರಿಯಲ್ಲಿ ಮೂತ್ರಾಲಯ ಇಲ್ಲ!


Team Udayavani, Sep 8, 2017, 12:50 PM IST

GUL-7.jpg

ವಾಡಿ: ಬೆಳೆಯುತ್ತಿರುವ ಪಟ್ಟಣದಲ್ಲಿ ಕನಿಷ್ಠ ಮೂತ್ರಾಲಯಗಳ ಮೂಲಸೌಕರ್ಯಗಳಿಲ್ಲ ಎಂದಾದರೆ, ಇಲ್ಲಿ ನಾಚಿಕೆ ಪಡಬೇಕಾದದ್ದು ಅಧಿಕಾರಿಗಳ್ಳೋ, ಜನಪ್ರತಿನಿಧಿಗಳ್ಳೋ ಅಥವಾ ಮತಹಾಕಿದ ಜನತೆಯೋ ಎನ್ನುವುದು
ಯಕ್ಷ ಪ್ರಶ್ನೆಯಾಗಿದೆ.

ಒಟ್ಟು 23 ವಾರ್ಡ್‌ಗಳಿರುವ ಹಾಗೂ 50 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇರುವ ಪಟ್ಟಣದಲ್ಲಿ ಪುರಸಭೆ ಆಡಳಿತವಿದೆ. ವಿಶ್ವಮಟ್ಟದಲ್ಲಿ ಗುರುತಿಸಿಕೊಂಡಿರುವ ಬೃಹತ್‌ ಸಿಮೆಂಟ್‌ ಕಾರ್ಖಾನೆಯಿದೆ. ಅಷ್ಟಕ್ಕೂ ಇದು ಅಪ್ಪಟ ಕಾರ್ಮಿಕ ನಗರಿ. ಇಲ್ಲಿ ಶೇ.90 ರಷ್ಟು ಭಾಗ ದುಡಿಯುವ ಜನರಿದ್ದಾರೆ. ಕಲ್ಲು ಗಣಿ ಕಾರ್ಮಿಕರು, ಎಸಿಸಿ ಸಿಮೆಂಟ್‌ ಕಂಪನಿ ಕಾರ್ಮಿಕರು, ಪೌರಕಾರ್ಮಿಕರು, ದಿನಗೂಲಿ ಕಾರ್ಮಿಕರು, ಗುತ್ತಿಗೆ ಕಾರ್ಮಿಕರು, ಕಟ್ಟಡ ಕಾರ್ಮಿಕರು, ಕೃಷಿ ಕಾರ್ಮಿಕರಿಂದ ಪಟ್ಟಣ ಆವರಿಸಿಕೊಂಡಿದೆ.

ಪಟ್ಟಣದ ಯಾವ ರಸ್ತೆಗಳ ಬದಿಯಲ್ಲೂ ಸಾರ್ವಜನಿಕ ಮೂತ್ರಾಲಯಗಳು ಕಾಣಸಿಗುವುದಿಲ್ಲ. ಪುರುಷರು ಗೋಡೆಗಳಿಗೆ ಒರಗಿ ನಿಲ್ಲುವ ಅನಾಗರಿಕ ಪದ್ಧತಿ ಕಂಡು ಕೇಂದ್ರ ಸರಕಾರದ ಸ್ವತ್ಛ ಭಾರತ ಅಭಿಯಾನ ಯೋಜನೆ ಮುಸಿಮುಸಿ ನಗುತ್ತಿದೆ. ಪುರಸಭೆ ಕಚೇರಿಯ ಗೋಡೆಗಳಿಗೆ ನಿತ್ಯ ಮೂತ್ರ ವಿಸರ್ಜಿಸುವರ ಸಂಖ್ಯೆಯೂ ಹೆಚ್ಚಿದೆ. ನೈಸರ್ಗಿಕ ಕ್ರಿಯೆ ತಡೆಯಲಾಗದೆ ಸಾರ್ವಜನಿಕರು ಸಿಕ್ಕಸಿಕ್ಕ ಗೋಡೆಗಳ ಆಸರೆಗೆ ನಿಂತು ಮೂತ್ರ ವಿಸರ್ಜಿಸುವುದನ್ನು ಕಂಡು ವಿದ್ಯಾರ್ಥಿನಿಯರು, ಮಹಿಳೆಯರು, ಕಣ್ಣು-ಮೂಗು ಮುಚ್ಚಿಕೊಂಡು ಹೆಜ್ಜೆ ಹಾಕಬೇಕಾದ ಹೀನಾಯ ಸ್ಥಿತಿ ಇಲ್ಲಿ ಜೀವಂತವಿದೆ.

ಸ್ವತ್ಛ ಭಾರತ ಯೋಜನೆ ಸಾಕಾರಕ್ಕೆ ಮುಂದಾಗಿರುವ ಪುರಸಭೆ ಅಧಿಕಾರಿಗಳು, ವಿದ್ಯಾರ್ಥಿಗಳಿಂದ ಪ್ರಭಾತ್‌ಫೇರಿ ಮಾಡಿಸಿದ್ದಾರೆ. ಪಟ್ಟಣದ ವಿವಿಧೆಡೆ ಜಾಹಿರಾತು ಪ್ರಕಟಿಸಿ ಮೂಲಸೌಕರ್ಯ ಜಾಗೃತಿಗೆ ಮುಂದಾಗಿದ್ದಾರೆ. ಕನಿಷ್ಠ ಒಂದು ಸ್ಥಳದಲ್ಲಾದರೂ ಮೂತ್ರಾಲಯ ಸೌಲಭ್ಯ ಒದಗಿಸದ ಪುರಸಭೆ ಅಧಿಕಾರಿಗಳ ಜಾಗೃತಿ ಅಭಿಯಾನಗಳು ಸ್ಥಳೀಯರ ಟೀಕೆಗೆ ಗುರಿಯಾಗಿವೆ.

ವಿಷಜಂತುಗಳ ಭಯದಲ್ಲಿಯೇ ಕಸದ ರಾಶಿಗಳ ಮಧ್ಯೆ ನಿಂತು ಮೂತ್ರ ವಿಸರ್ಜಿಸುವಂತ ದುಸ್ಥಿತಿ ಇಲ್ಲಿದೆ. ಪುರಸಭೆ ಸಿಬ್ಬಂದಿಯೊಬ್ಬ ವಾರದ ಹಿಂದಷ್ಟೇ ಪುರಸಭೆ ಸಮೀಪದ ಪಾಳು ಗೋಡೆ ಮರೆಗೆ ಮೂತ್ರಕ್ಕೆ ಹೋದಾಗ ಹಾವು ಕಚ್ಚಿಸಿಕೊಂಡು ಆಸ್ಪತ್ರೆಗೆ ಸೇರಿದ ಘಟನೆಯೂ ನಡೆದಿದೆ. ಇಷ್ಟಾದರೂ ಅಧಿಕಾರಿಗಳು, ವಾರ್ಡ್‌ ಸದಸ್ಯರು ಎಚ್ಚೆತ್ತುಕೊಳ್ಳದಿರುವುದು ಬೇಜವಾಬ್ದಾರಿ ಪರಮಾವಧಿ ಆಗಿದೆ. 

ಪುರಸಭೆ ಖಜಾನೆಯಲ್ಲಿ ಕೋಟ್ಯಂತರ ರೂ. ಅನುದಾನ ಕೊಳೆಯುತ್ತಿದೆ. ಈ ಅನುದಾನ ಯಾವ ಕಾರ್ಯಕ್ಕೆ ಬಳಕೆಯಾಗುತ್ತಿದೆ ಎನ್ನುವ ಪ್ರಶ್ನೆಗೆ ಪುರಸಭೆಯೇ ಉತ್ತರಿಸಬೇಕಿದೆ.

ಮಡಿವಾಳಪ್ಪ ಹೇರೂರ

ಟಾಪ್ ನ್ಯೂಸ್

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.