ತೊಗರಿ ಖರೀದಿ ಕೇಂದ್ರ ಆರಂಭಕ್ಕೆ ಒತ್ತಾಯಿಸಿ ಮನವಿ
Team Udayavani, Dec 21, 2019, 11:38 AM IST
ಆಳಂದ: ತಾಲೂಕಿನ ಆಯ್ದ ಭಾಗಗಳಲ್ಲಿ ತೊಗರಿ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಬೇಕೆಂದು ಕರವೇ ಕಾರ್ಯಕರ್ತರು ತಹಶೀಲ್ದಾರ್ಗೆ ಒತ್ತಾಯಿಸಿದರು.
ಪಟ್ಟಣದ ಗ್ರೇಡ್-2 ತಹಶೀಲ್ದಾರ್ ಬಿ.ಜಿ. ಕುದರಿ ಅವರಿಗೆ ಮನವಿ ಸಲ್ಲಿಸಿದ ಕಾರ್ಯಕರ್ತರು, ಕೂಡಲೇ ತೊಗರಿ ಖರೀದಿ ಕೇಂದ್ರ ಪ್ರಾರಂಭಿಸಿ ರೈತರಿಗೆ ಅನುಕೂಲ ಒದಗಿಸಬೇಕು ಎಂದು ಮನವಿ ಸಲ್ಲಿಸಿದರು. ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಮಹಾಂತೇಶ ಸಣ್ಣಮನಿ ನೇತೃತ್ವದಲ್ಲಿ ಮನವಿ ಸಲ್ಲಿಸಿದ ಮುಖಂಡರು, ತಾಲೂಕಿನಲ್ಲಿ ಸಕಾಲಕ್ಕೆ ತೊಗರಿ ಬೆಳೆ ಅಧಿ ಕ ಪ್ರಮಾಣದಲ್ಲಿ ಉತ್ಪಾದನೆಯಾಗಿದ್ದು, ರೈತರು ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಸರ್ಕಾರ ಖರೀದಿ ಕೇಂದ್ರದ ಮೂಲಕ ಅವರು ಬೆಳೆದ ಬೆಳೆಯನ್ನು ಖರೀದಿಸಿ ಸಕಾಲಕ್ಕೆ ಹಣ ಪಾವತಿಸಲು ಸೂಚಿಸಬೇಕು ಎಂದರು.
ಪ್ರಭು ಜಿರೋಳಿ, ದವಲಪ್ಪ ಮಸರೆ,ದವಲಪ್ಪ ವಣದೆ, ಪಾಂಡು ಕೊಂಡಗುಳೆ, ಪೀಠು ಮಾಡ್ಯಾಳ, ರಾಜು ಮುಲಗೆ, ಸುನೀಲ ಸಣ್ಣಮನಿ, ಅಂಬ್ರೇಶ ಆಳಂದಮತ್ತು ಅಮರ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು