ಜನಮುಖಿ ಕೆಲಸ ಮಾಡದ ಉನ್ನತ ಅಧಿಕಾರಿ ನಾಲಾಯಕ್: ನಾರಾಯಣಸ್ವಾಮಿ

ಕೆಲಸ ಮಾಡದೇ ಇದ್ದರೆ ಹೇಗೆ...... ಕೇಂದ್ರ ಸಚಿವರ ಚಾಟಿ

Team Udayavani, Oct 17, 2022, 2:23 PM IST

1-dfsfsdfs

ಕಲಬುರಗಿ: ”ದೊಡ್ಡ ಓದು ಓದಿ ಬಂದು ಕುರ್ಚಿಯಲ್ಲಿ ಕುಳಿತು ಒಳ್ಳೆಯ ಮತ್ತು ಸಮಾಜ ಬಯಸುವ ಕೆಲಸ ಮಾಡದೇ ಇರುವ ಅಧಿಕಾರಿಯ ಓದು ಮೌಲ್ಯವಿಲ್ಲದ್ದು ಮತ್ತು ಅಂತಹ ನಿರ್ಜೀವ ಅಧಿಕಾರಿ ನಾಲಾಯಕ್” ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯಖಾತೆ ಸಚಿವ ಎ.ನಾರಾಯಣಸ್ವಾಮಿ ಹೇಳಿದರು.

ಕಡಗಂಚಿ ಬಳಿ ಇರುವ ಸಿಯುಕೆನಲ್ಲಿ ಅಂಬೇಡ್ಕರ್ ಸೆಂಟರ್ ಆಫ್ ಎಕ್ಸ್ ಲೆನ್ಸ್ ಹಾಗೂ ೩ ವಸತಿ ನಿಲಯಗಳನ್ನು ಉದ್ಘಾಟಿಸಿ ಮಾತನಾಡಿ,ಯಾವ ಉನ್ನತ ಅಧಿಕಾರಿ ದೇಶದ ಉನ್ನತ ತರಬೇತಿಗಳಾದ ಐಎಎಸ್, ಐಪಿಎಸ್, ಕೆಎಎಸ್ ಓದಿ, ಉನ್ನತ ಹುದ್ದೆ ಪಡೆದು ವಿಧಾನಸೌಧದಲ್ಲಿ ಬಂದು ಕುಳಿತು ಕೆಲಸ ಮಾಡದೇ ಇದ್ದರೆ ಹೇಗೆ ಎಂದ ಅವರು, ಅಂತಹ ಅಧಿಕಾರಿಗಳು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಅಧಿಕಾರಿ ವರ್ಗಕ್ಕೆ ಚಾಟಿ ಬೀಸಿದರು.

ಅಧಿಕಾರಿ ವರ್ಗ ಮತ್ತು ವಿದ್ಯಾರ್ಥಿಗಳು ಪಡೆಯುವ ಪದವಿಪತ್ರದಲ್ಲಿ ನಮ್ಮ ಬದುಕು ಬದಲಿ ಮಾಡುವ ಜಾದೂ ಇಲ್ಲ ಎಂದು ಕಿವಿ ಮಾತು ಹೇಳಿದ ಅವರು, ನಾವು ಕಲಿಯುವ ಮತ್ತು ಪಡೆಯುವ ಜ್ಞಾನದಿಂದ ಮಾತ್ರ. ಅದನ್ನು ವಿವಿಗಳಯ, ಪ್ರೋಫರಸರ್ ಗಳು ವರ್ಗ, ಜಾತಿ ರಹಿತವಾಗಿ ಜ್ಞಾನ ನೀಡಬೇಕು. ಆಗಲೇ ಹೊಸ ಶಿಕ್ಷಣ ನೀತಿಗೆ ಖದರ್ ಬರುತ್ತದೆ ಎಂದರು.

ನಮ್ಮ ದೇಶದಲ್ಲಿ ವರ್ಗ, ಸಮಾಜ ಮತ್ತು ಜಾತಿ ನೋಡಿ ಶಿಕ್ಷಣ ನೀಡುವಂತಹ ಮೀಸಲು ವ್ಯವಸ್ಥೆಯಿಂದ ಹಂತ,ಹಂತವಾಗಿ ನಡೆದು ಬಂದು ಇವತ್ತು ಸಂವಿಧಾನ ಮೀಸಲಾತಿ ಅಡಿಯಲ್ಲಿ ದಲಿತ ಸಮುದಾಯಕ್ಕೆ ಯುಪಿಎಸ್ ಸಿ ಅಂತಹ ಉನ್ನತ ಹುದ್ದೆಗೇರುವಂತಹ ಅವಕಾಶ ಇಂದು ಸಿಯುಕೆಯಲ್ಲಿ ನೀಡುತ್ತಿರುವುದು ಸ್ವಾಗತಾರ್ಹ ಎಂದ ಅವರು, ಇದರ ಸಂಪೂರ್ಣ ಲಾಭವನ್ನು ಶೋಷಿತವರ್ಗದ ವಿದ್ಯಾರ್ಥಿಗಳು ಪಡೆಯಬೇಕು ಎಂದರು.

ಶೋಷಿತರು ಎಂದರೆ ಕೇವಲ ದಲಿತರಲ್ಲ. ಎಲ್ಲ ಜಾತಿಗಳಲ್ಲಿ ಶಿಕ್ಷಣ, ಆರ್ಥಿಕ ಮತ್ತು ಸಾಮಾಜಿಕವಾಗಿ ಹಿಂದುಳಿದವರೆಲ್ಲರೂ ಶೋಷಿತರೇ ಎಂದ ಅವರು, ನಾನು ಯಾರ ಬಳಿಯಲ್ಲಿ ಕೈ..ಕಾಲು ಹಿಡಿದು ಅಧಿಕಾರಕ್ಕೆ ಬಂದವನಲ್ಲ.. ಆದ್ದರಿಂದ ನಾನು ಹೇಳುವ ರೀತಿಯಲ್ಲಿ ಜನಮುಖಿ ಕೆಲಸವಾಗಬೇಕು ಎಂದು ಹಠ ಹಿಡಿದೆ. ಪರಿಣಾಮ ರಾಜ್ಯದಲ್ಲಿ ಸಚಿವ ಸ್ಥಾನ ಬಿಡಬೇಕಾಯಿತು. ಬಳಿಕ ಪಕ್ಷದ ಹಿರಿಯರು ಕೇಂದ್ರದಲ್ಲಿ ಸ್ಥಾನ ಸಿಕ್ಕಿತು ಎಂದರು.

ಶಾಸಕ ದತ್ತಾತ್ರೇಯ ಪಾಟೀಲ್ ರೇವೂರ ಮಾತನಾಡಿ, ವಿವಿ ಈ ಭಾಗದ ಮತ್ತು ದೇಶದ ಇತರೆ ಭಾಗದ ಮಕ್ಕಳಿಗೆ ಒಳ್ಳೆಯ ಉನ್ನತ ಶಿಕ್ಷಣ ನೀಡಲು ಶಕ್ತಿ ಮೀರಿ ಪ್ರಯತ್ನಿಸುತ್ತಿದೆ. ಅಲ್ಲದೆ, ಹೊಸ ಶಿಕ್ಷಣ ನೀತಿ ಜಾರಿಗೆ ತರುವ ಮೂಲಕ ದೇಶದ ಯುವ ಸಮೂಹಕ್ಕೆ ಔದ್ಯೋಗಿಕ ಅವಕಾಶಗಳನ್ನು ತೆರೆಯುತ್ತಿದೆ. ವಿವಿಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎನ್ನುವ ಕಾರಣಕ್ಕಾಗಿ ಕೆಕೆಆರ್ ಡಿಬಿಯಿಂದ ೨.೫ ಕೋಟಿ ರೂಗಳಲ್ಲಿ ವಸತಿ ನಿಲಯ ಕಟ್ಟಲಾಗಿದೆ. ದಲಿತ ಸಮಾಜಕ್ಕೆ, ಹಿಂದುಳಿದ ವರ್ಗಕ್ಕೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಉನ್ನತ ಹುದ್ದೆಗಳ ತರಬೇತಿ ನೀಡಲು ಅಂಬೇಡ್ಕರ್ ಸೆಂಟರ್ ಆಫ್ ಎಕ್ಸ್ ಲೆನ್ಸ್ ಆರಂಭಿಸಲಾಗುತ್ತಿದೆ ಎಂದರು.

ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಬಸವರಾಜ ಪಾಟೀಲ ಸೇಡಂ ಮಾತನಾಡಿದರು.ವಿಸಿ ಪ್ರೊ.ಬಟ್ಟು ಸತ್ಯನಾರಾಯಣ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕುಲಸಚಿವ ಪ್ರೊ. ಬಸವರಾಜ್ ಡೋಣೂರ ಸ್ವಾಗತಿಸಿದರು. ಶಾಸಕ ಸುಭಾಸ ಗುತ್ತೇದಾರ, ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ದೇವೇಂದ್ರ ಕುಮಾರ್ ಇದ್ದರು.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.