ವಾಡಿಗೆ ಪ್ರವಾಸಿ ಮಂದಿರ ಭಾಗ್ಯ
Team Udayavani, Mar 2, 2018, 10:44 AM IST
ವಾಡಿ: ಸಿಮೆಂಟ್ ನಗರಿ ವಾಡಿ ಪಟ್ಟಣಕ್ಕೆ ಪ್ರವಾಸಿ ಮಂದಿರ ಭಾಗ್ಯ ಒದಗಿ ಬಂದಿದ್ದು, ಕಾಮಗಾರಿ ಭರದಿಂದ ಸಾಗಿದೆ.
ಸರಕಾರಿ ಕಾಲೇಜು ಕಟ್ಟಡ ಕಟ್ಟಲು ಜಾಗವಿಲ್ಲ ಎಂಬ ಆರೋಪದ ಮಧ್ಯೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರವಾಸಿ ಮಂದಿರ ನಿರ್ಮಾಣಕ್ಕೆ ಜಾಗ ಹುಡುಕಿ ತೆಗೆದಿದ್ದು, ಕೇವಲ ಆರೇ ತಿಂಗಳಲ್ಲಿ ಕಟ್ಟಡ ಎದ್ದು ನಿಲ್ಲಲಿದೆ.
ಪಟ್ಟಣದ ರೆಸ್ಟ್ ಕ್ಯಾಂಪ್ ತಾಂಡಾ ಬಡಾವಣೆಯಲ್ಲಿರುವ ಸರಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆ ಹಿಂಭಾಗದಲ್ಲಿ ಲೋಕೋಪಯೋಗಿ (ಪಿಡಬ್ಯುಡಿ) ಇಲಾಖೆಗೆ ಸೇರಿದ್ದ 100*100 ಅಡಿ ಜಾಗವನ್ನು ಪ್ರವಾಸಿ ಮಂದಿರ ನಿರ್ಮಾಣಕ್ಕೆ ಯೋಜನೆ ರೂಪಿಸಿರುವ ಅಧಿಕಾರಿಗಳು, ಆ ಜಾಗದಲ್ಲಿದ್ದ ಇಲಾಖೆಗೆ ಸೇರಿದ್ದ ಪಾಳು ಕಟ್ಟಡಗಳನ್ನು ತೆರವುಗೊಳಿಸಿ ಕಾಮಗಾರಿಗೆ ಚಾಲನೆ ನೀಡಿದ್ದಾರೆ. ಬೆಳೆಯುತ್ತಿರುವ ಪಟ್ಟಣಕ್ಕೆ ಪ್ರವಾಸಿ ಮಂದಿರದ ಅಗತ್ಯತೆ ಅರಿತ ಸಚಿವ ಪ್ರಿಯಾಂಕ್ ಖರ್ಗೆ ಅವರು 2016ರಲ್ಲಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು ಎನ್ನಲಾಗಿದ್ದು, ಮಂಜೂರಾಗಿರುವ 2 ಕೋಟಿ ರೂ. ಅನುದಾನದಲ್ಲಿ ಪ್ರವಾಸಿ ಮಂದಿರ ನಿರ್ಮಾಣವಾಗುತ್ತಿದೆ.
ಪಟ್ಟಣದಲ್ಲಿ ಸರಕಾರಿ ಕಾಲೇಜು, ಪ್ರವಾಸಿ ಮಂದಿರ, ಕ್ರೀಡಾಂಗಣ, ಗ್ರಂಥಾಲಯ ಹಾಗೂ ಕನ್ಯಾ ಪ್ರೌಢ ಶಾಲೆಯಂತಹ ಪ್ರಮುಖ ಸಾರ್ವಜನಿಕ ಬೇಡಿಕೆಗಳಲ್ಲಿ ಸದ್ಯ ಪ್ರವಾಸಿ ಮಂದಿರ ಬೇಡಿಕೆ ಈಡೇರಿದಂತಾಗಿದೆ.
ಪಟ್ಟಣಕ್ಕೆ ಭೇಟಿ ನೀಡುವ ಪ್ರವಾಸಿ ಅತಿಥಿಗಳಿಗೆ ಉಳಿದುಕೊಳ್ಳಲು ಅನುಕೂಲತೆಯಿಲ್ಲ ಎಂಬುದು ಗಮನಕ್ಕೆ ಬಂದಿದ್ದರಿಂದ, ಸರಕಾರಕ್ಕೆ ಪ್ರವಾಸಿ ಮಂದಿರ ಕಟ್ಟಡದ ಬೇಡಿಕೆ ಸಲ್ಲಿಸಲಾಗಿತ್ತು. ಈಗ ಅನುದಾನ ಮಂಜೂರಾಗಿದ್ದು, ಕಾಮಗಾರಿಗೆ ಚಾಲನೆ ದೊರೆತಿದೆ. ವಾಡಿಯಲ್ಲಿ ಸರಕಾರಿ ಕಾಲೇಜು ಕಟ್ಟಡ ನಿರ್ಮಿಸಲು 6 ಎಕರೆ ಜಮೀನು ಖರೀದಿಗೆ ಚಿಂತಿಸಲಾಗಿದೆ. ಭೂಮಿ ಕೊಡಲು ರೈತರು ಮುಂದೆ ಬರುತ್ತಿಲ್ಲ.
ಪ್ರಿಯಾಂಕ್ ಖರ್ಗೆ, ಪ್ರವಾಸೋದ್ಯಮ ಹಾಗೂ ಐಟಿಬಿಟಿ ಖಾತೆ ಸಚಿವರು
ಪಿಡಬ್ಲ್ಯುಡಿ ಸುಮಾರು ಎರಡು ಕೋಟಿ ರೂ. ಅನುದಾನದಡಿ ವಾಡಿಯಲ್ಲಿ ಪ್ರವಾಸಿ ಮಂದಿರ ನಿರ್ಮಿಸಲಾಗುತ್ತಿದೆ. ಎರಡು ವರ್ಷದ ಹಿಂದೆ ಸಚಿವರು ಈ ಕುರಿತು ಪ್ರಸ್ತಾವನೆ ಸಲ್ಲಿಸಿದ್ದರು. ಸರಕಾರದ ಆದೇಶದಂತೆ ಸುಸಜ್ಜಿತ ಕಟ್ಟಡ ಕಾಮಗಾರಿಗೆ ಚಾಲನೆ ನೀಡಿದ್ದೇವೆ. ಆರು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದ್ದು, ನೂತನ ಪ್ರವಾಸಿ ಮಂದಿರ ಸಾರ್ವಜನಿಕ ಸೇವೆಗೆ ತೆರೆದಿಡಲಾಗುವುದು.
ಹಣಮಂತ ರೆಡ್ಡಿ. ಎಇಇ, ಪಿಡಬ್ಲ್ಯುಡಿ ಚಿತ್ತಾಪುರ.
ಮಡಿವಾಳಪ್ಪ ಹೇರೂರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Yugadi: ಯುಗಾದಿ
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ