ಕಲಬುರಗಿಯಲ್ಲಿ ಕೃಷಿ ಕಾಯ್ದೆಗಳ ವಿರೋಧಿಸಿ ಬೃಹತ್ ಜನತಾ ಪರೇಡ್: ಟ್ರ್ಯಾಕ್ಟರ್ ರಾಲಿ
Team Udayavani, Jan 26, 2021, 1:54 PM IST
ಕಲಬುರಗಿ: ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳು ಮತ್ತು ರಾಜ್ಯ ಸರ್ಕಾರದ ಭೂ ಸುಧಾರಣೆ ಕಾಯ್ದೆಯನ್ನು ಹಿಂಪಡೆಯವಂತೆ ಆಗ್ರಹಿಸಿ ಕಲಬುರಗಿ ನಗರದಲ್ಲಿ ಬೃಹತ್ ಜನತಾ ಪರೇಡ್ ಆರಂಭಿಸಲಾಗಿದೆ.
ಎಪಿಎಂಸಿ ತಿದ್ದುಪಡಿ ಕಾಯ್ದೆ, ಕನಿಷ್ಠ ಬೆಂಬಲ ಬೆಲೆ ತಿದ್ದುಪಡಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ಹೋರಾಟನಿತರ ರೈತರು ಗಣರಾಜ್ಯೋತ್ಸವ ದಿನವಾದ ಇಂದು ಟ್ರ್ಯಾಕ್ಟರ್ ರಾಲಿಗೆ ಕರೆ ಕೊಟ್ಟಿದ್ದು, ಇದರ ಭಾಗವಾಗಿಯೇ ಸಂಯುಕ್ತ ಕಿಸಾನ್ ಮೋರ್ಚಾ ವೇದಿಕೆ ನೇತೃತ್ವದಲ್ಲಿ ಕಲಬುರಗಿಯಲ್ಲಿ ಜನತಾ ಪರೇಡ್ ನಡೆಸಲಾಗುತ್ತಿದೆ.
ಇದನ್ನೂ ಓದಿ:ದೆಹಲಿ ಟ್ರ್ಯಾಕ್ಟರ್ Rally: ಪೊಲೀಸರನ್ನೇ ಅಟ್ಟಾಡಿಸಿಕೊಂಡು ಹೋದ ರೈತರು, ಹಲವರಿಗೆ ಗಾಯ
ಇದನ್ನೂ ಓದಿ:ರೈತರೇ ಕೈ ಮುಗಿದು ಕೇಳುವೆ ಪ್ರತಿಭಟನೆ ಕೈಬಿಡಿ: ಡಿಸಿಎಂ ಗೋವಿಂದ ಕಾರಜೋಳ
ಇಲ್ಲಿನ ಹುಮನಾಬಾದ್ ರಿಂಗ್ ರೋಡ್ ನಿಂದ ಪರೇಡ್ ಆರಂಭವಾಗಿದ್ದು, ನೂರಾರು ಟ್ರ್ಯಾಕ್ಟರ್ ಗಳು ಹಾಗೂ ಸಾವಿರಾರು ರೈತರು, ಕೂಲಿ ಕಾರ್ಮಿಕರು ಹಾಗೂ ಹಲವು ಮುಖಂಡರು ಪರೇಡ್ ನಲ್ಲಿ ಪಾಲ್ಗೊಂಡಿದ್ದಾರೆ. ನಗರದ ಮುಖ್ಯ ರಸ್ತೆಗಳ ಮೂಲಕ ಜಿಲ್ಲಾಧಿಕಾರಿ ಕಚೇರಿಯವರಗೆ ಸುಮಾರು ಆರು ಕಿ.ಮೀ. ಈ ಪರೇಡ್ ನಡೆಯಲಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ