ಸಿಯುಕೆಗೆ ಕೆನರಾ ಬ್ಯಾಂಕಿಂದ ಟ್ರ್ಯಾಕ್ಟರ್‌ ಟ್ಯಾಂಕರ್‌ ಕೊಡುಗೆ


Team Udayavani, May 29, 2022, 11:51 AM IST

6CUK

ಕಲಬುರಗಿ: ಕೆನರಾ ಬ್ಯಾಂಕ್‌ ತನ್ನ ಸಾಮಾಜಿಕ ಹೊಣೆಗಾರಿಕೆ ನಿಭಾಯಿಸುವ ನಿಟ್ಟಿನಲ್ಲಿ ಕೇಂದ್ರೀಯ ವಿಶ್ವ ವಿದ್ಯಾಲಯದ ಕ್ಯಾಂಪಸ್‌ನಲ್ಲಿ ಗಿಡ ನೆಟ್ಟು ಪೋಷಿಸಲು ಸಹಾಯವಾಗಲಿ ಎನ್ನುವ ಉದ್ದೇಶದಿಂದ ಟ್ರ್ಯಾಕ್ಟರ್‌ ಟ್ಯಾಂಕರ್‌ನ್ನು ಶನಿವಾರ ಕಾಣಿಕೆಯಾಗಿ ನೀಡಿದೆ.

ಸಿಯುಕೆ ಕ್ಯಾಂಪಸ್‌ನಲ್ಲಿ ಸಿಯುಕೆ ಕುಲಪತಿ ಪ್ರೊ| ಬಟ್ಟು ಸತ್ಯಾನಾರಾಯಣ ಅವರಿಗೆ ಬ್ಯಾಂಕ್‌ನ ಮಹಾ ಪ್ರಬಂಧಕ ಭಾಸ್ಕರ್‌ ಚಕ್ರವರ್ತಿ ಅವರಿಗೆ ಟ್ಯಾಂಕರ್‌ನ ಕೀ ಹಸ್ತಾಂತರ ಮಾಡಿದರು.

ಈ ವೇಳೆ ಮಾತನಾಡಿದ ಪ್ರೊ| ಬಟ್ಟು, ಇದೊಂದು ಉತ್ತಮ ಬೆಳವಣಿಗೆ. ಇಂತಹ ಸಾಮಾಜಿಕ ಕಾರ್ಯಗಳಿಂದ ಬ್ಯಾಂಕ್‌ ಕೂಡ ತನ್ನ ಬದ್ಧತೆ ಮತ್ತು ಪ್ರಾಮಾಣಿಕ ಸೇವೆಯನ್ನು ಇನ್ನಷ್ಟು ವೃದ್ಧಿಸಲು ಸಹಾಯವಾಗುತ್ತದೆ. ಇದರಿಂದ ಸಿಬ್ಬಂದಿ ಮತ್ತು ಗ್ರಾಹಕರ ಮಧ್ಯದ ಸಂಪರ್ಕ ಇನ್ನಷ್ಟು ಸುಧಾರಿಸುತ್ತದೆ ಎಂದರು.

ಪರಿಸರ ಸಂರಕ್ಷಣೆ ದೊಡ್ಡ ಸವಾಲು. ಇದನ್ನು ನಾವೆಲ್ಲರೂ ಮಾಡಬೇಕಾದ ಅನಿವಾರ್ಯತೆಯಲ್ಲಿ ಇದ್ದೇವೆ. ಇಂತಹ ಕೊಡುಗೆಗಳು ಬ್ಯಾಂಕಿನ ಅಮೋಘ ಸೇವೆಯ ಭಾಗವಾಗಿದೆ. ಗಿಡ ನೆಟ್ಟು ಪೋಷಿಸಿದರೆ ಬಿಸಿಲಿನ ತಾಪ ಕಡಿಮೆ ಆಗುತ್ತದೆ. ಓಜೋನ್‌ ಸಂರಕ್ಷಣೆಯೂ ಸಾಧ್ಯವಾಗುತ್ತದೆ. ಆಮ್ಲಜನಕ ಹೆಚ್ಚಳ, ಗಿಡ, ಸಸಿಗಳು ನೀಡುವ ಹಣ್ಣುಗಳಿಂದ ಪಕ್ಷಿ ಸಂಕುಲವೂ ಹೆಚ್ಚುತ್ತದೆ ಎಂದು ಹೇಳಿದರು.

ಕೆನರಾ ಬ್ಯಾಂಕ್‌ ಮಹಾ ಪ್ರಬಂಧಕ ಭಾಸ್ಕರ್‌ ಚಕ್ರವರ್ತಿ ಮಾತನಾಡಿ, ಬ್ಯಾಂಕ್‌ ತನ್ನ ಸಾಮಾಜಿಕ ಹೊಣೆಗಾರಿಕೆ ನಿಟ್ಟಿನಲ್ಲಿ ಟ್ಯಾಂಕರ್‌ನ್ನು ಸಿಯುಕೆಗೆ ನೀಡಿದೆ. ಇದರಿಂದ ಮುಂಬರುವ ದಿನಗಳಲ್ಲಿ ಕ್ಯಾಂಪಸ್‌ನಲ್ಲಿ ನೂರಾರು ಗಿಡ, ಮರಗಳು ಬೆಳೆಯುತ್ತವೆ. ಇದರಿಂದ ಪರಿಸರವನ್ನು ಕಾಪಾಡಿದಂತಾಗುತ್ತದೆ. ಕ್ಯಾಂಪಸ್‌ನಲ್ಲಿ ಬಿಸಿಲಿನ ತಾಪ ಕಡಿಮೆಯಾಗಿ ಓದಲು ಬರುವ ಮಕ್ಕಳಿಗೆ ತಣ್ಣನೆ ವಾತಾವರಣ ಸೃಷ್ಟಿಯಾಗಲಿದೆ. ಅಲ್ಲದೇ ಆ್ಯಂಬುಲೆನ್ಸ್‌, ವೈದ್ಯಕೀಯ ಉಪಕರಣ, ನೀರು ಫ್ಯೂರಿಫಾಯರ್‌ಗಳನ್ನು ಅನೇಕ ಸಾಮಾಜಿಕ ಸಂಸ್ಥೆಗಳಿಗೆ ಬ್ಯಾಂಕ್‌ ವತಿಯಿಂದ ನೀಡಲಾಗಿದೆ ಎಂದರು.

ಸಿಯುಕೆ ಮುಖ್ಯ ಪರೀಕ್ಷಾ ಅಧಿಕಾರಿ ಚನ್ನವೀರ, ಹಣಕಾಸು ಅಧಿಕಾರಿ ಎಸ್‌. ಶಿವಾನಂದಂ, ಕೆನರಾ ಬ್ಯಾಂಕ್‌ ಕಲಬುರಗಿ ಕ್ಷೇತ್ರೀಯ ಕಾರ್ಯಾಲಯದ ಸಹಾಯಕ ಮಹಾ ಪ್ರಬಂಧಕ ಸಂಜೀವಪ್ಪ ಆರ್‌.ಬಿ, ಕಡಗಂಚಿ ಶಾಖಾ ವ್ಯವಸ್ಥಾಪಕಿ ಶುಭಶ್ರೀ, ದೀಕ್ಷಿತ್‌, ಸಿಬ್ಬಂದಿ ಪಾಲ್ಗೊಂಡಿದ್ದರು. ವಿಭಾಗೀಯ ಪ್ರಬಂಧಕ ವೀರಪ್ಪ ನಿರೂಪಿಸಿ, ಸ್ವಾಗತಿಸಿದರು.

ಕೆನರಾ ಬ್ಯಾಂಕ್‌ ಕೇವಲ ವ್ಯಾಪಾರದ ಉದ್ದೇಶವನ್ನಷ್ಟೆ ಹೊಂದಿಲ್ಲ. ಬ್ಯಾಂಕ್‌ ಇರುವುದು ಸಮಾಜದಲ್ಲಿಯೇ. ಬ್ಯಾಂಕ್‌ ಜನರಿಂದಲೇ ನಡೆಯುತ್ತದೆ. ಆದ್ದರಿಂದ ಬ್ಯಾಂಕ್‌ ಜನರಿಗಾಗಿಯೇ ಯೋಜನೆ ರೂಪಿಸುತ್ತದೆ ಮತ್ತು ಯೋಚಿಸುತ್ತದೆ. ಸಾಮಾಜಿಕ ಹೊಣೆಗಾರಿಕೆಯ ಅನುದಾನದಲ್ಲಿ ಸಾಕಷ್ಟು ಕಾರ್ಯಗಳು ನಡೆದಿವೆ, ನಡೆಯುತ್ತದೆ. ಇದಕ್ಕೆ ಜನರ ಸಹಕಾರವೂ ಇರಲಿ. ಭಾಸ್ಕರ್ಚಕ್ರವರ್ತಿ, ಮಹಾಪ್ರಬಂಧಕ, ಕೆನರಾ ಬ್ಯಾಂಕ್

ಟಾಪ್ ನ್ಯೂಸ್

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.