ರಸ್ತೆ ಗುಂಡಿ ಮುಚ್ಚಿಸಿದ ಹೆದ್ದಾರಿ ಗಸ್ತು ಸಿಬ್ಬಂದಿ
Team Udayavani, Sep 13, 2022, 3:03 PM IST
ಶಹಾಬಾದ: ರಾಷ್ಟ್ರೀಯ ಹೆದ್ದಾರಿ 150 ದೇವನತೆಗನೂರ ಸಮೀಪದಲ್ಲಿ ರಸ್ತೆಯ ಮೇಲೆ ದೊಡ್ಡದಾದ ಗುಂಡಿಯಲ್ಲಿ ಸಾಗುತ್ತಿರುವ ವಾಹನಗಳ ಅಪಘಾತಗಳಾಗುವ ಸಾಧ್ಯತೆ ಇರುವುದನ್ನು ಕಂಡು ಶಹಾಬಾದ ಉಪವಿಭಾಗದ ಹೈವೆ ಪೆಟ್ರೋಲಿಂಗ್ ಎಎಸ್ಐ ಅಶೋಕ ಕಟ್ಟಿ ಹಾಗೂ ಸಿಬ್ಬಂದಿ ವಿಠ್ಠಲ್ ಅವರು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳಿಗೆ ತಿಳಿಸಿ ರಸ್ತೆ ದುರಸ್ತಿ ಮಾಡಿಸಿ ತಮ್ಮ ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ.
ಪೆಟ್ರೋಲಿಂಗ್ ಎಎಸ್ಐ ಅಶೋಕ ಕಟ್ಟಿ ಹಾಗೂಸಿಬ್ಬಂದಿ ವಿಠ್ಠಲ್ ಹೋಗುವಾಗ ಲಾರಿ, ಕಾರು ಹಾಗೂ ಬೈಕ್ ಸವಾರರಿಗೆ ರಸ್ತೆಯಲ್ಲಿ ನೀರು ನಿಂತು ಕೊಂಡಿರಬಹುದೆಂದು ಹಾಗೇ ವಾಹನ ಚಲಾಯಿಸಿದ್ದರಿಂದ ಗುಂಡಿಯಲ್ಲಿ ಟೈರ್ ಸಿಗಿಬಿದ್ದು ಆಯಾ ತಪ್ಪಿ ಅಪಘಾತವಾಗುವುದು ಅದೃಷ್ಟವಶ ತಪ್ಪಿದನ್ನು ಕಂಡಿದ್ದಾರೆ. ಕೂಡಲೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಎಇಇ ಗುರುರಾಜ ಜೋಶಿ ಅವರನ್ನು ಸಂಪರ್ಕಿಸಿದ್ದಾರೆ. ದೊಡ್ಡದಾದ ಗುಂಡಿ ಬಿದ್ದಿದೆ. ಗುಂಡಿಯಲ್ಲಿ ನೀರು ತುಂಬಿಕೊಂಡಿದ್ದರಿಂದ ಗುಂಡಿ ಕಾಣದೇ ಅಪಘಾತಕ್ಕೊಳಗಾಗುತ್ತಾರೆ. ಕೂಡಲೇ ದುರಸ್ತಿಗೊಳಿಸಿ ಎಂದು ಮನವಿ ಮಾಡಿದ್ದಾರೆ.
ತಕ್ಷಣವೇ ಸ್ಪಂದಿಸಿದ ಎಇಇ ಗುರುರಾಜ ಜೋಶಿ ಅರ್ಧ ಗಂಟೆಯಲ್ಲಿಯೇ ಸಿಬ್ಬಂದಿಗೆ ಕಳುಹಿಸಿ ದುರಸ್ತಿಗೊಳಿಸಿ ಗುಂಡಿಯನ್ನು ಮುಚ್ಚುವಂತ ಕೆಲಸ ಮಾಡಿದ್ದಾರೆ. ಇದರಿಂದ ಸಾರ್ವಜನಿಕರ ಅಪಘಾತಗಳನ್ನು ತಡೆಗಟ್ಟುವಲ್ಲಿ ಹೈವೆ ಪೆಟ್ರೋಲಿಂಗ್ನ ಸಿಬ್ಬಂದಿ ಉತ್ತಮ ಕೆಲಸ ಮಾಡಿರುವುದಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
MUST WATCH
ಹೊಸ ಸೇರ್ಪಡೆ
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mollywood: ಸೂಪರ್ ಹಿಟ್ ʼಪ್ರೇಮಲುʼ ಸೀಕ್ವೆಲ್ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ
Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು
Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ
Box office: ಈ ವಾರ ಬಾಲಿವುಡ್ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?