ಸುರಕ್ಷತೆಗೆ ಸಂಚಾರ ನಿಯಮ ಪಾಲಿಸಿ: ನ್ಯಾ| ಸುಬ್ರಹ್ಮಣ್ಯ


Team Udayavani, Oct 23, 2021, 6:11 PM IST

26road

ಕಲಬುರಗಿ: ರಸ್ತೆ ಅಪಘಾತಗಳಿಂದ ಪಾರಾಗಲು ಪ್ರತಿಯೊಬ್ಬರು ಸಂಚಾರ ನಿಯಮಗಳನ್ನು ತಪ್ಪದೆ ಪಾಲನೆ ಮಾಡಬೇಕೆಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಕೆ.ಸುಬ್ರಹ್ಮಣ್ಯ ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಲಯ, ಪೊಲೀಸ್‌ ಆಯುಕ್ತಾಲಯ ಸಂಯುಕ್ತಾಶ್ರಯದಲ್ಲಿ ಸಾರ್ವಜನಿಕರಿಗೆ ಸಂಚಾರ ಕಾನೂನು ಅರಿವು ಮೂಡಿಸಲು ಶುಕ್ರವಾರ ನಗರದಲ್ಲಿ ನಡೆದ ಸಂಚಾರ ಕಾನೂನು ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವಾಹನ ಚಾಲನೆ ಸಂದರ್ಭದಲ್ಲಿ ಚಾಲಕರು, ಸವಾರರು ತಮ್ಮ ಹಾಗೂ ಕುಟುಂಬದವರ ಯೋಗಕ್ಷೇಮ, ಸುರಕ್ಷತೆ ಗಮನದಲ್ಲಿ ಇರಿಸಿಕೊಳ್ಳಬೇಕು ಎಂದರು.

ವಾಹನ ಚಾಲನೆ ಮಾಡುವಾಗ ಕಡ್ಡಾಯವಾಗಿ ನಿಯಮ ಪಾಲಿಸಬೇಕು. ಮೈಮರೆತರೆ ಅಪಾಯ ತಪ್ಪಿದ್ದಲ್ಲ. ಸಂಚಾರ ಕಾನೂನುಗಳ ಕುರಿತು ಕೇವಲ ಗೋಡೆ ಬರಹ, ಇಲ್ಲವೇ ಘೋಷಣೆ ಕೂಗಿದರೆ ಸಾಲದು, ಎಲ್ಲರೂ ಚಾಚು ತಪ್ಪದೆ ಪರಿಪಾಲನೆ ಮಾಡಬೇಕು ಎಂದು ಸಲಹೆ ನೀಡಿದರು.

ಮದ್ಯಪಾನ ಸೇವಿಸಿ ಚಾಲನೆ ಮಾಡಬಾರದು. ವಾಹನ ಚಲಾಯಿಸುವಾಗ ಮೊಬೈಲ್‌ನಲ್ಲಿ ಮಾತನಾಡಬಾರದು. ರಸ್ತೆ ಹಾಗೂ ಚಾಲನೆ ಕಡೆಗೆ ಗಮನ ಕೇಂದ್ರಿಕೃತಗೊಳಿಸಿರಬೇಕು. ಅಪಘಾತ ಸಂಭವಿಸಿದಾಗ ನೊಂದವರಿಗೆ ಬೇಗನೆ ಪರಿಹಾರ ನೀಡುವಂತಾಗಲು ಪೊಲೀಸರ ಕಾರ್ಯವೂ ಪ್ರಮುಖವಾಗಿದೆ. ಎಫ್ಐಆರ್‌ ಇನ್ನಿತರ ದಾಖಲೆಗಳನ್ನು ನ್ಯಾಯಾಲಯಗಳಿಗೆ ಈ-ಮೇಲ್‌ ಮೂಲಕ ಸಲ್ಲಿಸಲು ಸುಪ್ರೀಂಕೋರ್ಟ್‌ ಅವಕಾಶ ಕಲ್ಪಿಸಿದೆ. ಹೀಗಾಗಿ ಅದನ್ನು ಬಳಸಿಕೊಂಡು ಬೇಗನೆ ನೆರವು ಸಿಗುವಂತೆ ಮಾಡಿಕೊಡಲಾಗುತ್ತಿದೆ ಎಂದು ಹೇಳಿದರು.

ನಗರ ಪೊಲೀಸ್‌ ಆಯುಕ್ತ ಡಾ| ವೈ.ಎಸ್‌.ರವಿಕುಮಾರ ಮಾತನಾಡಿ, ಬೇರೆ ತಪ್ಪುಗಳನ್ನು ಮಾಡಿದರೆ ತಿದ್ದಿಕೊಳ್ಳಲು ಅವಕಾಶವಿರುತ್ತದೆ. ಆದರೆ, ಒಮ್ಮೆ ಅಪಘಾತ ಸಂಭವಿಸಿ ಅದರಿಂದ ಹಾನಿ ಭರಿಸಲು ಯಾರಿಂದಲೂ ಸಾಧ್ಯವಿಲ್ಲ ಎನ್ನುವುದನ್ನು ಅರಿತು ವಾಹನ ಚಾಲನೆ ಮಾಡಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ನ್ಯಾ| ಸುಶಾಂತ್‌ ಚೌಗಲೆ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ರಾಜಕುಮಾರ ಕಡಗಂಚಿ ಮಾತನಾಡಿದರು. ಜಿಲ್ಲಾ ನ್ಯಾಯಾಲಯದಿಂದ ಆರಂಭವಾದ ಜಾಥಾ ಸರ್ದಾರ ವಲ್ಲಭಭಾಯಿ ಪಟೇಲ್‌ ವೃತ್ತದ ವರೆಗೆ ನಡೆಯಿತು. ನಂತರ ವಾಹನ ಸವಾರರಿಗೆ ಸಂಚಾರ ಅರಿವು ಮೂಡಿಸುವ ಕರಪತ್ರಗಳನ್ನು ವಿತರಿಸಲಾಯಿತು.

ಜಾಥಾದಲ್ಲಿ ನಗರ ಉಪ ಪೊಲೀಸ್‌ ಆಯುಕ್ತರಾದ ಅಡ್ಡೂರು ಶ್ರೀನಿವಾಸಲು, ಶ್ರೀಕಾಂತ ಕಟ್ಟಿಮನಿ, ಸಂಚಾರ ವಿಭಾಗದ ಸಹಾಯಕ ಪೊಲೀಸ್‌ ಆಯುಕ್ತೆ ಸುಧಾ ಆದಿ, ಇನ್‌ಸ್ಪೆಕ್ಟರ್‌ಗಳಾದ ಶಾಂತಿನಾಥ ಬಿ.ಪಿ., ಅಮರೇಶ, ಪಿಎಸ್‌ ಐಗಳಾದ ಭಾರತಿ ಧನ್ನಿ, ಸುವರ್ಣ ಹಾಗೂ ಪೊಲೀಸ್‌ ಸಿಬ್ಬಂದಿ ಹಾಗೂ ಶಿಕ್ಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದ ಕಾರಣ ಶಾಲೆ-ಕಾಲೇಜುಗಳು ಆರಂಭವಾಗಿವೆ. ಇದರಿಂದ ವಾಹನಗಳ ಸಂಚಾರ ದಟ್ಟಣೆಯೂ ಹೆಚ್ಚಿದೆ. ಹೀಗಾಗಿ ಸಂಚಾರ ನಿಯಮ ಪಾಲಿಸಬೇಕು. ವಾಹನಗಳ ಚಾಲನೆ ಮಾಡುವಾಗ ಬೇರೆಡೆ ಲಕ್ಷ್ಯ ಇರಬಾರದು. ಡಾ| ವೈ.ಎಸ್‌.ರವಿಕುಮಾರ, ಆಯುಕ್ತ, ನಗರ ಪೊಲೀಸ್

ಟಾಪ್ ನ್ಯೂಸ್

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

crime (2)

Kalaburagi:ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.