ಯುವತಿ ನಿಶ್ಚಿತಾರ್ಥ ಮುರಿಯಲು ಯತ್ನ; ಸಹೋದರನ ಭೀಕರ ಕೊಲೆ


Team Udayavani, Jun 6, 2021, 10:58 AM IST

ಯುವತಿ ನಿಶ್ಚಿತಾರ್ಥ ಮುರಿಯಲು ಯತ್ನ; ಸಹೋದರನ ಭೀಕರ ಕೊಲೆ

ಕಲಬುರಗಿ: ನಿಶ್ಚಿತಾರ್ಥ ಆಗುತ್ತಿದ್ದ ಸಂಬಂಧ ಮುರಿಯಲು ಯತ್ನಿಸಿದ ಹಿನ್ನೆಲೆಯಲ್ಲಿ ನಡೆದ ಜಗಳದಲ್ಲಿ ಮಗನ ಕೊಲೆಯಾಗಿದ್ದು, ತಾಯಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಗರದಲ್ಲಿ ನಡೆದಿದೆ.

ಸಂಬಂಧ ಮುರಿಯುವ ಪ್ರಕರಣಕ್ಕೆ ಸಂಬಂಧಿಸಿದಂತೆ ದುಷ್ಕರ್ಮಿಗಳ ಗುಂಪೊಂದು ಮಗನನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ ಅಟಲ್‌ ಬಿಹಾರಿ ವಾಜಪೇಯಿ ಬಡಾವಣೆ ಬಳಿ ಶನಿವಾರ ನಡೆದಿದೆ.

ನಿಖಿಲ್ ರಾಜು ಕನೇಗಾರ (22) ಕೊಲೆಯಾಗಿರುವ ಯುವಕ. ಈತ ಕರುಣೇಶ್ವರ ನಗರದ ನಿವಾಸಿಯಾಗಿದ್ದ. ಈತನ ತಾಯಿ ಕಮಲಾ ಎನ್ನುವರಿಗೆ ಗಂಭೀರ ಗಾಯಗಳಾಗಿವೆ. ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.

ಈಕೆಯ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ. ನಿಖಿಲ್ ಸಹೋದರ ವಿಕಾಸ ಸೇರಿದಂತೆ ಮೂವರು ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಮಲಮ್ಮ ತರಕಾರಿ ಮಾರಾಟ ಮಾಡಿಕೊಂಡಿದ್ದರೆ, ಪತಿ ರಾಜು ರಾಮ ಮಂದಿರ ಸಮೀಪದ ಕಾಲೇಜೊಂದರಲ್ಲಿ ಅಡುಗೆ ತಯಾರಕಾಗಿ ಕೆಲಸಮಾಡುತ್ತಿದ್ದಾರೆ. ಮೂವರು ಮಕ್ಕಳೊಂದಿಗೆ ಕರುಣೇಶ್ವರ ನಗರದಲ್ಲಿ ವಾಸವಾಗಿದ್ದರು. ಕೊಲೆ ಯಾಗಿರುವ ನಿಖಿಲ್‌ ಭಜಿ ಬಂಡಿ ಇಟ್ಟುಕೊಂಡಿದ್ದ. ನಿಖಿಲ್ ನ ಸಹೋದರಿ ಮದುವೆಯನ್ನು ಮುಂಬೈನಲ್ಲಿರುವ ವ್ಯಕ್ತಿಯ ಜತೆಗೆ ನಿಗದಿಪಡಿಸಲಾಗಿತ್ತು. ಸೋಮವಾರ ಸರಳವಾಗಿ ನಿಶ್ಚಿತಾರ್ಥ ನಡೆಸಲು ತಯಾರಿ ನಡೆದಿತ್ತು. ಇದನ್ನು ಅರಿತ ಸ್ಟೇಷನ್‌ ಬಜಾರ ಪ್ರದೇಶ ಯುವಕರಿಬ್ಬರು ಸೇರಿಕೊಂಡು ಸಂಬಂಧ ಮುರಿಯಲು ಕುತಂತ್ರ ಮಾಡಿ, ಯುವಕನಿಗೆ ಕರೆ ಮಾಡಿ ಇಲ್ಲದ್ದನ್ನು ಹೇಳಿದ್ದರು. ಆ ಯುವಕ ಮರಳಿ ಯುವತಿ ಮನೆಯವರಿಗೆ ತಿಳಿಸಿದ್ದ. ಅಲ್ಲದೇ ಆ ಸಂಖ್ಯೆಗಳನ್ನು ನೀಡಿದ್ದರು. ಆ ಸಂಖ್ಯೆಗೆ ಶನಿವಾರ ಕರೆ ಮಾಡಿದಾಗ ವಾಗ್ವಾದ ಆಗಿತ್ತು. ಅಲ್ಲದೇ ರಾಮ ಮಂದಿರ ಬಳಿ ಇದ್ದೇವೆ ಬಾ ಎಂದು ಕರೆದಿದ್ದರು.

ಅಲ್ಲಿಗೆ ಹೋದಾಗ ವಾಜಪೇಯಿ ಲೇಔಟ್‌ ಹತ್ತಿರವಿದ್ದೇವೆ ಬನ್ನಿ ಎಂದು ಸವಾಲು ಹಾಕಿದ್ದರು. ನಿಖಿಲ್ ಹಾಗೂ ಮನೆಯವರು ಅಲ್ಲಿಗೆ ಹೋಗಿದ್ದರು. ಇಲ್ಲದ್ದು ಹೇಳಿ ಹೀಗೆ ಮಾಡಬೇಡಿ ಎಂದು ತಿಳಿ ಹೇಳಿದರು. ಕೇಳದೇ ವಾಗ್ವಾದಕ್ಕಿಳಿದರು ಎಂದು ಪೊಲೀಸರು ತಿಳಿಸಿದ್ದಾರೆ.

ಇದರಿಂದ ಕುಪಿತಗೊಂಡ ನಿಖೀಲ್‌ ಉದಯನಿಗೆ ಹೊಡೆದಿದ್ದ. ಆಗ ಆತ ತನ್ನ ಸ್ನೇಹಿತರಿಗೆ ಕರೆ ಮಾಡಿ ಕರೆಸಿಕೊಂಡು ಮಾರಕಾಸ್ತ್ರಗಳಿಂದ ಎಲ್ಲರ ಮೇಲೆ ದಾಳಿ ನಡೆಸಿದ. ದುಷ್ಕರ್ಮಿಗಳೆಲ್ಲರೂ ಸೇರಿಕೊಂಡು ನಡೆಸಿದ ದಾಳಿಯಲ್ಲಿ ಗಂಭೀರ ಗಾಯಗೊಂಡು ನಿಖಿಲ್‌ ಕೊನೆಯುಸಿ ರೆಳೆದಿದ್ದಾನೆ. ಉಳಿದ ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಡಿಸಿಪಿ ಕಿಶೋರಬಾಬು, ಎಸಿಪಿ ಜೆ.ಎಚ್‌.ಇನಾಮದಾರ, ಇನ್‌ಸ್ಪೆಕ್ಟರ್‌ ಶಿವಾನಂದ ಗಾಣಿಗೇರ ಮತ್ತು ಸಿಬ್ಬಂದಿ ಭೇಟಿ ನೀಡಿದ್ದಾರೆ. ಈ ಕುರಿತು ವಿಶ್ವವಿದ್ಯಾಲಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಲೆ ಆರೋಪಿತರ ಪತ್ತೆಗೆ ಜಾಲ ಬೀಸಲಾಗಿದೆ.

ಟಾಪ್ ನ್ಯೂಸ್

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.