ಯಡ್ರಾಮಿ: ಟ್ರ್ಯಾಕ್ಟರ್ ಹಾಯ್ದು ಸೆಕ್ಯುರಿಟಿ ಗಾರ್ಡ್ ದುರ್ಮರಣ
Team Udayavani, Mar 7, 2022, 11:31 AM IST
ಯಡ್ರಾಮಿ(ಕಲಬುರಗಿ) : ಟ್ರ್ಯಾಕ್ಟರ್ ಹಾಯ್ದು ಸೆಕ್ಯುರಿಟಿ ಗಾರ್ಡ್ ಯೊಬ್ಬ ದುರ್ಮರಣಕ್ಕೀಡಾದ ಘಟನೆ ತಾಲೂಕಿನ ಮಳ್ಳಿ-ನಾಗರಳ್ಳಿ ಉಗಾರ್ ಶುಗರ್ಸ್ (ಘಟಕ-2) ಕಾರ್ಖಾನೆಯಲ್ಲಿ ರವಿವಾರ ತಡರಾತ್ರಿ ನಡೆದಿದೆ.
ಹದನೂರು ಗ್ರಾಮದ ಮಲ್ಲಿಕಾರ್ಜುನ ಜಂಡೆ (23) ಮೃತ ದುರ್ಧೈವಿ.
ಕಳೆದ ಹದಿನೈದು ದಿನಗಳ ಹಿಂದಷ್ಟೆ ಕಾರ್ಖಾನೆಯಲ್ಲಿ ಸೆಕ್ಯುರಿಟಿ ಗಾರ್ಡ್ ಕೆಲಸಕ್ಕೆ ಸೇರಿದ್ದ ಮಲ್ಲಿಕಾರ್ಜುನ ಎಂದಿನಂತೆ ರವಿವಾರ ರಾತ್ರಿ ಪಾಳೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವೇಳೆ ನಿದ್ದೆ ಬರುತ್ತಿದೆ ಎಂದು ಕಬ್ಬು ಹೊತ್ತುಕೊಂಡು ನಿಂತ ಟ್ರ್ಯಾಕ್ಟರ್ ಚಕ್ರದ ಮುಂದೆ ಮಲಗಿಕೊಂಡಿದ್ದಾನೆ. ಟ್ರ್ಯಾಕ್ಟರ್ ಸರದಿ ಬಂದಾಗ ಅದರ ಚಾಲಕ ಸಹಜವಾಗಿ ವಾಹನ ಚಾಲನೆ ಮಾಡಿಕೊಂಡು ಹೋಗುವಾಗ ಚಕ್ರದಡಿ ಸಿಲುಕಿ ಒದ್ದಾಡ ತೊಡಗಿದ್ದಾನೆ. ಚಕ್ರ ಉರುಳಲು ಕಲ್ಲು ಅಡಚಣೆ ಆಗಿರಬಹುದೆಂದು ಚಾಲಕ ವಾಹನದಿಂದ ಕೆಳಗಿಳಿದು ನೋಡಿದಾಗ ಸೆಕ್ಯುರಿಟಿ ಗಾರ್ಡ್ ಒದ್ದಾಡುತ್ತಿರುವುದನ್ನು ಕಂಡು ತಕ್ಷಣ ಅಲ್ಲಿದ್ದ ಸಿಬ್ಬಂದಿ ಗಮನಕ್ಕೆ ತಂದಿದ್ದಾನೆ.
ಇತರ ಸಿಬ್ಬಂದಿಯ ಸಹಕಾರದಿಂದ ತಕ್ಷಣವೇ ವಿಜಯಪುರ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಮಾರ್ಗ ಮಧ್ಯೆಯೇ ಸಾವಪ್ಪಿದ್ದಾನೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ