ಪೊಲೀಸ್‌ ವೃತ್ತಿ ಕೌಶಲ್ಯ ಹೆಚ್ಚಳಕ್ಕೆ ತರಬೇತಿ


Team Udayavani, May 9, 2017, 4:43 PM IST

gul2.jpg

ಕಲಬುರಗಿ: ಪೊಲೀಸ್‌ ಸಿಬ್ಬಂದಿಗಳಲ್ಲಿ ಕಾಲಕ್ಕೆ ತಕ್ಕಂತೆ ಅಗತ್ಯ ಸೇವಾ ಕೌಶಲ್ಯ ಹೆಚ್ಚಿಸುವ ನಿಟ್ಟಿನಲ್ಲಿ ತರಬೇತಿ ನೀಡಲು ಮುಂದಾಗಿದ್ದು, ಮೇ 15ರಿಂದ ಮಂಡ್ಯ ಜಿಲ್ಲೆಯ ಚೆನ್ನಪಟ್ಟಣದಲ್ಲಿ ಪುನಶ್ಚೇತನ ತರಬೇತಿ ಆರಂಭಿಸಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಪೊಲೀಸ್‌ ಮಹಾ ನಿರ್ದೇಶಕ ರೂಪಕ್‌ ಕುಮಾರ ದತ್ತಾ ತಿಳಿಸಿದರು. 

ಸೋಮವಾರ ಜಿಲ್ಲಾ ಪೊಲೀಸ್‌ ಮೈದಾನದಲ್ಲಿ ಹಮ್ಮಿಕೊಂಡಿದ್ದ ಈಶಾನ್ಯ ವಲಯದ ಪರಿವೀಕ್ಷಣಾ ಪಥಸಂಚಲನ ಸಮಾರಂಭ ಉದ್ದೇಶಿಸಿ ಮಾತನಾಡಿದ ಅವರು, ಪುನಶ್ಚೇತನ ತರಬೇತಿಯು ಸೇವಾ ಕೌಶಲ್ಯಕ್ಕೆ ಮತ್ತಷ್ಟು ಪೂರಕವಾಗಲಿದೆ ಎಂದರು. ಪಥ ಸಂಚಲನವು ಪೊಲೀಸ್‌ ಸಿಬ್ಬಂದಿಗಳಲ್ಲಿ ಶಿಸ್ತು ಬೆಳೆಸುತ್ತದೆ. 

ಹೀಗಾಗಿ ಇನ್ನು ಮುಂದೆ ಆಯಾ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ಪಥಸಂಚಲನ ಹಮ್ಮಿಕೊಳ್ಳುವ ಕುರಿತಾಗಿ ಆದೇಶಿಸಲಾಗಿದೆ ಎಂದು ತಿಳಿಸಿದರು. ಇಲಾಖೆಯಲ್ಲಿ ಕೇವಲ ಹಿರಿಯ ಅಧಿಕಾರಿಗಳು ಮಾತ್ರ ತನಿಖೆ ಮಾಡುತ್ತಾರೆ. ಇದೇ ರೀತಿ ಮುಂದುವರಿಯಬಾರದು.

ಬದಲಾಗಿ ಇಲಾಖೆಯಲ್ಲಿನ ಪೇದೆ, ಮುಖ್ಯ ಪೇದೆ ಹಾಗೂ ಎಎಸ್‌ಐ ಅವರಿಗೆ ಅಪಘಾತ, ಗಾಯ, ಇತರೆ ಸಣ್ಣಪುಟ್ಟ ಪ್ರಕರಣಗಳ ತನಿಖಾ ಹೊಣೆಯನ್ನು ನೀಡಲಾಗುತ್ತದೆ. ಇದರಿಂದ ಡಿಎಸ್‌ಪಿ, ಸಿಪಿಐ, ಪಿಎಸ್‌ಐ ಅವರು ಕ್ಲಿಷ್ಟಕರ ಅಪರಾಧ ಪ್ರಕರಣಗಳನ್ನು ಬೇಧಿಸಲು ಸಮಯ ಕೊಡಲು ಸಾಧ್ಯವಾಗಲಿದೆ ಎಂದು ತಿಳಿಸಿದರು. 

ಅಧ್ಯಕ್ಷತೆ ವಹಿಸಿದ್ದ ಈಶಾನ್ಯ ವಲಯ ಪೋಲಿಸ್‌ ಮಹಾನಿರೀಕ್ಷಕ ಅಲೋಕಕುಮಾರ ಮಾತನಾಡಿ, ಪೊಲೀಸ್‌ ಇಲಾಖೆಯಲ್ಲಿ ಪಥಸಂಚಲನ ತುಂಬಾ ಮಹತ್ವದ್ದು. ಶಿಸ್ತಿನ ಇನ್ನೊಂದೇ ಹೆಸರೇ ಪೊಲೀಸ್‌ ಇಲಾಖೆಯಾಗಿದೆ ಎಂದರು. ಪಥಸಂಚಲನದಲ್ಲಿ ಉತ್ತಮ ಪ್ರದರ್ಶನ ನೀಡಿದ ಪಿಎಸ್‌ಐ ಅಕ್ಕಮಹಾದೇವಿ, ಪಿಎಸ್‌ಐ ವಹೀದ್‌ ಕೋತ್ವಾಲ್‌, ಪರಶುರಾಮ ವನಜಕರ್‌ ನೇತೃತ್ವದ ತಂಡಗಳಿಗೆ ನಗದು ಬಹುಮಾನ, ಪಾರಿತೋಷಕ ವಿತರಿಸಲಾಯಿತು.

ಅದೇ ರೀತಿ ಈಶಾನ್ಯ ವಲಯದ ಮೂರು ಜಿಲ್ಲೆಗಳಲ್ಲಿ ಉತ್ತಮ ಕಾರ್ಯನಿರ್ವಹಣೆ, ಅಪರಾಧ ತಡೆ, ಸಂಚಾರಿ ವ್ಯವಸ್ಥೆ, ಜನಸ್ನೇಹಿ ಕಾರ್ಯ ಮಾಡಿದ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ನಗದು ಬಹುಮಾನ ಹಾಗೂ ಪಾರಿತೋಷಕವನ್ನು ಡಿಜಿಪಿ ದತ್ತಾ ವಿತರಿಸಿದರು. 

ವಿಶೇಷ ಸನ್ಮಾನ: ಯುರೋಪ ದೇಶದಲ್ಲಿ ಯುರೋಪ ರಾಷ್ಟ್ರದ ಇಗರ್‌ ಹಂಗೇರಿಯಲ್ಲಿ ನಡೆದ ವರ್ಲ್ಡ್ ಇಂಟರ್‌ ಸ್ಕೂಲ್‌ ರೋಪ್‌ ಸ್ಕಿಪ್ಪಿಂಗ್‌ ಚಾಂಪಿಯನ್‌ಶಿಪ್‌-2017ರಲ್ಲಿ ಪ್ರಥಮ ಸ್ಥಾನ ಪಡೆದ ಪೊಲೀಸ್‌ ಮುಖ್ಯ ಪೇದೆ ಹಿರೇಮಾನ್‌ ಪುತ್ರ ಪವನಕುಮಾರ ರಾಠೊಡನನ್ನು ಡಿಜಿ ದತ್ತಾ ಸನ್ಮಾನಿಸಿದರು.

ಬೀದರ್‌ ಎಸ್‌ಪಿ ಪ್ರಕಾಶ ನಿಕ್ಕಂ ಸ್ವಾಗತಿಸಿದರು. ಕಲಬುರಗಿ ಎಸ್‌ಪಿ ಎನ್‌. ಶಶಿಕುಮಾರ, ಯಾದಗಿರಿ ಎಸ್‌ಪಿ ಯಡಾ ಮಾರ್ಟಿನ್‌ ಮಾರ್ಬನ್ಯಾಂಗ್‌ ಹಾಜರಿದ್ದರು. ಸೇಡಂ ಸಿಪಿಐ ಪಂಚಾಕ್ಷರಿ ಸಾಲಿಮಠ, ಶಶಿಕಲಾ ಜಡೆ ನಿರೂಪಿಸಿದರು. ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಜಯಪ್ರಕಾಶ ವಂದಿಸಿದರು.  

ಟಾಪ್ ನ್ಯೂಸ್

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

hdಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

ಕೇಂದ್ರ ಸಚಿವ ಎಚ್‌ಡಿಕೆ ಬಳಿ ಅಭಿವೃದ್ಧಿ ಯೋಜನೆಗಳ ಪಟ್ಟಿ ಇಟ್ಟ ಸ್ಪೀಕರ್‌ ಖಾದರ್‌

ಕೇಂದ್ರ ಸಚಿವ ಎಚ್‌ಡಿಕೆ ಬಳಿ ಅಭಿವೃದ್ಧಿ ಯೋಜನೆಗಳ ಪಟ್ಟಿ ಇಟ್ಟ ಸ್ಪೀಕರ್‌ ಖಾದರ್‌

Basavaraj Bommai ಅಂತಾರಾಜ್ಯ ಜಲ ವಿವಾದ ಪರಿಹಾರಕ್ಕೆ ಯತ್ನ

Basavaraj Bommai ಅಂತಾರಾಜ್ಯ ಜಲ ವಿವಾದ ಪರಿಹಾರಕ್ಕೆ ಯತ್ನ

ಆಯಾ ರಾಜ್ಯಗಳೇ “ನೀಟ್‌’ ಪರೀಕ್ಷೆ ನಡೆಸಲು ಕೇಂದ್ರಕ್ಕೆ ಮನವಿ: ಡಿಕೆಶಿ

ಆಯಾ ರಾಜ್ಯಗಳೇ “ನೀಟ್‌’ ಪರೀಕ್ಷೆ ನಡೆಸಲು ಕೇಂದ್ರಕ್ಕೆ ಮನವಿ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Alanda; ಕುವೈತ್ ಅಗ್ನಿ ದುರಂತದಲ್ಲಿ ಮೃತ ವ್ಯಕ್ತಿಯ ಶವ ಸ್ವಗ್ರಾಮಕ್ಕೆ ಆಗಮನ: ಅಂತ್ಯಕ್ರಿಯೆ

Alanda; ಕುವೈತ್ ಅಗ್ನಿ ದುರಂತದಲ್ಲಿ ಮೃತ ವ್ಯಕ್ತಿಯ ಶವ ಸ್ವಗ್ರಾಮಕ್ಕೆ ಆಗಮನ: ಅಂತ್ಯಕ್ರಿಯೆ

4-chincholi

Chincholi ತಾಲೂಕಿನಾದ್ಯಂತ ಧಾರಾಕಾರ ಮಳೆ, ಜಲಾಶಯದಲ್ಲಿ ನೀರಿನ ಪ್ರಮಾಣ ಹೆಚ್ಚಳ

1-bbb

Kuwait ಭೀಕರ ಅಗ್ನಿ ದುರಂತದಲ್ಲಿ ಕಲಬುರಗಿಯ ವ್ಯಕ್ತಿ ಸಾವು

KKRDB : ಜೂನ್ 14 ರಂದು ಸಿಎಂ ಪ್ರಗತಿ ಪರಿಶೀಲನೆ ಸಭೆ: ಡಾ. ಅಜಯಸಿಂಗ್

KKRDB : ಜೂನ್ 14 ರಂದು ಸಿಎಂ ಪ್ರಗತಿ ಪರಿಶೀಲನೆ ಸಭೆ: ಡಾ. ಅಜಯಸಿಂಗ್

MLC: ಈಶಾನ್ಯ ಕರ್ನಾಟಕ ಪದವೀಧರ ಚುನಾವಣೆಯಲ್ಲಿ ಕಾಂಗ್ರೆಸ್ ನ ಡಾ. ಚಂದ್ರಶೇಖರ ಪಾಟೀಲ ಗೆಲುವು

MLC: ಈಶಾನ್ಯ ಕರ್ನಾಟಕ ಪದವೀಧರ ಚುನಾವಣೆಯಲ್ಲಿ ಕಾಂಗ್ರೆಸ್ ನ ಡಾ. ಚಂದ್ರಶೇಖರ ಪಾಟೀಲ ಗೆಲುವು

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ಶ್ರುತಿ ಬಿ.ಆರ್‌., ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಯುವ, ಬಾಲ ಪುರಸ್ಕಾರ

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

1-ssdad

ಅನುಚಿತ ವರ್ತನೆ‌ ; ಜೆಸ್ಕಾಂ ಗುತ್ತಿಗೆದಾರನಿಗೆ‌ ಚಪ್ಪಲಿಯಿಂದ ಹೊಡೆದ ಮಹಿಳೆ

hdಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಚನ್ನಪಟ್ಟಣದ ಮೇಲೆ ಅಣ್ಣ ತಮ್ಮಂದಿರ ವಕ್ರದೃಷ್ಟಿ: ಎಚ್‌ಡಿಕೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

ಬೊಮ್ಮಾಯಿ, ಕುಮಾರಸ್ವಾಮಿ, ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.