ಅಪಾಯದಲ್ಲಿ ಬುಡಕಟ್ಟು ಸಂಸ್ಕೃತಿ: ಸೀತಾರಾಮ
Team Udayavani, Sep 2, 2017, 10:48 AM IST
ಕಲಬುರಗಿ: ವಿವಿಧ ರೀತಿಯ ಅಭಿವೃದ್ಧಿ ಹಾಗೂ ಅರಣ್ಯ ನಾಶದಿಂದ ಬುಡಕಟ್ಟು ಸಂಸ್ಕೃತಿ ಅಪಾಯಕ್ಕೆ ಸಿಲುಕಿದೆ ಎಂದು ಹೈದ್ರಾಬಾದನ ಡಾ| ಬಿ.ಆರ್.ಅಂಬೇಡ್ಕರ್ ವಿವಿ ಕುಲಪತಿ ಪ್ರೊ| ಕೆ.ಸೀತಾರಾಮ ಕಳವಳ ವ್ಯಕ್ತಪಡಿಸಿದರು.
ಗುವಿವಿಯಲ್ಲಿ ಶುಕ್ರವಾರ ಮಹರ್ಷಿ ವಾಲ್ಮೀಕಿ ಬುಡಕಟ್ಟು ಅಧ್ಯಯನ ಮತ್ತು ಸಂಶೋಧನಾ ಕೇಂದ್ರ, ಬೆಂಗಳೂರಿನ ಬುಡಕಟ್ಟು ಕಲ್ಯಾಣ ನಿರ್ದೇಶನಾಲಯದ ಆಶ್ರಯದಲ್ಲಿ ಡಾ| ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆಯುತ್ತಿದ್ದ ಭಾರತೀಯ ಸಮಾಜಕ್ಕೆ ಮಹರ್ಷಿ ವಾಲ್ಮೀಕಿ ಅವರ ಕೊಡುಗೆ, ಕರ್ನಾಟಕ ರಾಜ್ಯದ ಬುಡಕಟ್ಟು ಸಮುದಾಯಗಳ ಸಮಸ್ಯೆಗಳು ಮತ್ತು ಸವಾಲುಗಳು ಕುರಿತು ಆಯೋಜಿಸಿದ್ದ
ರಾಷ್ಟ್ರೀಯ ವಿಚಾರ ಸಂಕಿರಣದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಅಭಿವೃದ್ಧಿ ಹೆಸರಿನಲ್ಲಿ ಅರಣ್ಯ ನಾಶ, ಗಣಿಗಾರಿಕೆ, ವಿವಿಧ ಯೋಜನೆಗಳನ್ನು ಮಾಡುವುದರಿಂದ ಬಡುಕಟ್ಟು ಜನರಿಗೆ ತೊಂದರೆಯಾಗುತ್ತಿದೆ. ಇದರಿಂದ ಅವರು ತಮ್ಮ ಸ್ಥಳ ಬದಲಾವಣೆ ಮಾಡುತ್ತಾ ವಲಸೆ ಹೋಗುತ್ತಿದ್ದಾರೆ. ಅವರಲ್ಲಿನ ಸಾಂಪ್ರದಾಯಿಕ ಜೀವನ ಶೈಲಿಗೆ ಧಕ್ಕೆಯಾಗುತ್ತಿದೆ. ಅಲ್ಲದೆ,
ಮಾರ್ಪಾಟುಗಳು ಆಗುತ್ತಿವೆ. ಮೂಲ ಬುಡಕಟ್ಟು ಸಂಸ್ಕೃತಿ ಮಾಯವಾಗುವ ಹಂತಕ್ಕೆ ತಲುಪಿದೆ. ಭಾರತ ಸರಕಾರ ಹಾಗೂ ಆಯಾ ರಾಜ್ಯ ಸರಕಾರಗಳು ಸಂಶೋಧನೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಹಣದ ನೆರವು ನೀಡಬೇಕು. ಈ ಕುರಿತು ವಿಷಯ ತಜ್ಞರು, ಸಂಸ್ಕೃತಿ ಸಂಶೋಧಕರು ಕೂಡ ಹೆಚ್ಚು ಆಸಕ್ತಿವಹಿಸಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಗುವಿವಿ ಕುಲಪತಿ ಪ್ರೊ| ಎಸ್.ಆರ್.ನಿರಂಜನ್ ಮಾತನಾಡಿ, ಎರಡು ದಿನಗಳಿಂದ ವಿವಿಯಲ್ಲಿ ಭಾರತೀಯ ಸಮಾಜಕ್ಕೆ ಮಹರ್ಷಿ ವಾಲ್ಮೀಕಿ ಅವರ ಕೊಡುಗೆ ಮತ್ತು ಕರ್ನಾಟಕ ರಾಜ್ಯದ ಬುಡಕಟ್ಟು ಸಮುದಾಯಗಳ ಸಮಸ್ಯೆಗಳು ಮತ್ತು ಸವಾಲುಗಳು ಕುರಿತು ಹಲವಾರು ತಜ್ಞರು ಮಾತನಾಡಿದ್ದಾರೆ. ತಮ್ಮ ಅಭಿಪ್ರಾಯ ಮಂಡಿಸಿದ್ದಾರೆ. ಈ ನಿಟ್ಟಿನಲ್ಲಿ ನಿರಂತರ ಸಂಶೋಧನೆ ಅಗತ್ಯವೆಂದು ಹಾಗೂ ಸಂಶೋಧಕರು ಹೆಚ್ಚು ಬುಡಕಟ್ಟು ಸಂಸ್ಕೃತಿಯನ್ನು ಇನ್ನಷ್ಟು ಸಂಶೋಧನೆ
ಒಳಪಡಿಸಬೇಕು ಎಂದರು.
ಗುವಿವಿ ಸಮಾಜ ವಿಜ್ಞಾನ ನಿಕಾಯದ ಡೀನ್ ಪ್ರೊ| ಎನ್. ಪಾರ್ವತಮ್ಮ, ಸಿಂಡಿಕೇಟ್ ಸದಸ್ಯ ಈಶ್ವರ ಇಂಗಿನ್, ಮೌಲ್ಯಮಾಪನ ಕುಲಸಚಿವ ಡಾ| ಸಿ.ಎಸ್. ಪಾಟೀಲ, ಹಣಕಾಸು ಅಧಿಕಾರಿ ಪ್ರೊ| ಲಕ್ಷ್ಮಣ ರಾಜನಾಳಕರ್ ವೇದಿಕೆಯಲ್ಲಿದ್ದರು.
ಕುಲಸಚಿವ ಡಾ| ದಯಾನಂದ ಅಗಸರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿವಿಯ ಮಹರ್ಷಿ ವಾಲ್ಮೀಕಿ ಬುಡಕಟ್ಟು ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ನಿರ್ದೇಶಕ ಬಿ.ಶೀರಾಮಲು ನಿರೂಪಿಸಿದರು. ರಾಜ್ಯ ಬುಡಕಟ್ಟು ಕಲ್ಯಾಣ ನಿರ್ದೇಶನಾಲಯದ ಕೆ.ರೇವಣಪ್ಪ ವಂದಿಸಿದರು. ಗುವಿವಿ
ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಹಾಗೂ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ