ಕೊನೆಗೆ ಹಂತದಲ್ಲಿ ಜೆಡಿಎಸ್‌ ಟಿಕೆಟ್‌ ಸಿಗುವ ವಿಶ್ವಾಸ


Team Udayavani, Feb 21, 2018, 10:33 AM IST

gul-4.jpg

ಕಲಬುರಗಿ: ಕಲಬುರಗಿ ದಕ್ಷಿಣ ಕ್ಷೇತ್ರದಲ್ಲಿ ಕಳೆದ ಒಂದು ವರ್ಷದಿಂದ ಪಕ್ಷದ ಸಂಘಟನೆಯಲ್ಲಿ ತೊಡಗಿ ಹತ್ತು ಸಾವಿರಕ್ಕೂ ಹೆಚ್ಚು ಮತದಾರರನ್ನು ಸಂಘಟಿಸಲಾಗಿದೆಯಲ್ಲದೇ ಕಳೆದ 9 ತಿಂಗಳಿನಿಂದ ಕುಮಾರಣ್ಣ ಕಾರ್ಯಕ್ರಮ ಮನೆ-ಮನೆ ತಲುಪಿಸಲಾಗಿ ಪ್ರಬಲ ಆಕಾಂಕ್ಷಿಯಾಗಿರುತ್ತೇನೆ.

ಆದರೆ ಈಗ ಪಕ್ಷ ಸೇರಿದ ದಿನವೇ ಬಸವರಾಜ ಡಿಗ್ಗಾವಿ ಪಕ್ಷದ ಟಿಕೆಟ್‌ ಘೋಷಣೆ ಮಾಡಿರುವುದು ತುಂಬಾ ನೋವುಂಟಾಗಿದೆ ಎಂದು ಜೆಡಿಎಸ್‌ ರಾಜ್ಯ ಯುವ ಉಪಾಧ್ಯಕ್ಷ ಕೃಷ್ಣಾರೆಡ್ಡಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲಬುರಗಿ ದಕ್ಷಿಣದಲ್ಲಿ ತಾವು ಹಾಗೂ ಸುರೇಶ ಮಹಾಗಾಂವಕರ ಆಕಾಂಕ್ಷಿಗಳಾಗಿದ್ದೇವೆ. 

ಇಬ್ಬರಲ್ಲಿ ಒಬ್ಬರಿಗೆ ಟಿಕೆಟ್‌ ನೀಡಿದ್ದರೆ ಅಸಮಾಧಾನ ಆಗುತ್ತಿರಲಿಲ್ಲ. ಜತೆಗೆ ಪಕ್ಷದ ವರಿಷ್ಠರಾದ ಎಚ್‌.ಡಿ. ದೇವೇಗೌಡ ಹಾಗೂ ಕುಮಾರಸ್ವಾಮಿ ಅವರು ತಮ್ಮನ್ನು ವಿಶ್ವಾಸ ತೆಗೆದುಕೊಂಡು ಟಿಕೆಟ್‌ ಘೋಷಣೆ ಮಾಡಿದ್ದರೆ ತಮ್ಮ ಮನಸ್ಸಿಗೆ ಘಾಸಿ ಉಂಟಾಗುತ್ತಿರಲಿಲ್ಲ. ಈಗ ಮುಂದೇನು ಮಾಡಬೇಕೆಂಬುದನ್ನು ಬೆಂಬಲಿಗರ ಸಭೆ ಕರೆದು ನಿರ್ಧರಿಸುತ್ತೇನೆ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಜರುಗಿದ ಬಹಜನ ಸಮಾಜ ಪಕ್ಷ ಹಾಗೂ ಜಾತ್ಯಾತೀತ ಜನತಾದಳದ ಸಮಾವೇಶದಲ್ಲಿ ಹಠಾತ್ತನೇ
ಕಾಣಿಸಿಕೊಂಡ ಶ್ರೀಗುರು ವಿದ್ಯಾಪೀಠದ ಬಸವರಾಜ್‌ ಡಿಗ್ಗಾವಿ ಅವರಿಗೆ ಜೆಡಿ(ಎಸ್‌) ಪಕ್ಷದಿಂದ ಕಲಬುರ್ಗಿ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್‌ ನೀಡಿದ್ದು ಸರಿಯಲ್ಲ. ಡಿಗ್ಗಾವಿ ಅವರು ಪಕ್ಷದ ಸದಸ್ಯರೂ ಅಲ್ಲ. ಅವರ ಹೆಸರನ್ನು ಈಗಲೇ ನಾನು ಕೇಳುತ್ತಿದ್ದೇನೆ. ಇನ್ನೂವರೆಗೂ ಅವರ ಮುಖ ಸಹ ನೋಡಿಲ್ಲ. ಅಂತಹ ವ್ಯಕ್ತಿಗೆ ವರಿಷ್ಠರು ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಟಿಕೆಟ್‌ ಕೊಟ್ಟಿದ್ದಾರೆ. 

ಡಿಗ್ಗಾವಿ ಅವರಿಗೆ ಟಿಕೆಟ್‌ ಸಿಕ್ಕ ಸುದ್ದಿ ತಿಳಿಯುತ್ತಿದ್ದಂತೆಯೇ ನನಗೆ ಹಲವಾರು ಬೆಂಬಲಿಗರು ಮೊಬೈಲ್‌ ಮೂಲಕ ಕರೆ
ಮಾಡಿ ಎಷ್ಟು ಹಣ ತೆಗೆದುಕೊಂಡು ಸುಮ್ಮನಿದ್ದೀರಿ ಎಂದು ಕೇಳುತ್ತಿದ್ದಾರೆ. ಆದ್ದರಿಂದ ಬೆಂಬಲಿಗರಿಗೆ ನಿಜವಾದ ಸಂಗತಿ ತಿಳಿಸಲು ಸಭೆ ಕರೆಯಲಾಗಿದೆಯಲ್ಲದೇ ವರಿಷ್ಠರ ಬಳಿ ತೆರಳಲು ನಿರ್ಧರಿಸಲಾಗಿದೆ ಎಂದು ವಿವರಣೆ ನೀಡಿದರು. ಶಿವಲಿಂಗಯ್ಯಸ್ವಾಮಿ ಸಾವಳಗಿ, ಸೋಮನಾಥ್‌ ರೆಡ್ಡಿ, ಲಾಲ್‌ ಮೊಹ್ಮದ್‌, ನಬಿ ಪಟೇಲ್‌, ಶಿವಲಿಂಗಪ್ಪ ಪಾಟೀಲ್‌ ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.