ಕಲಬುರಗಿಯಲ್ಲಿ ಆಹಾರ ಇಲಾಖೆಯ ಜಂಟಿ ನಿರ್ದೇಶಕ ಸೇರಿ ಇಬ್ಬರು ಎಸಿಬಿ ಬಲೆಗೆ
Team Udayavani, Dec 11, 2019, 5:23 PM IST
ಕಲಬುರಗಿ: ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಆರೋಪದಡಿ ಜಪ್ತಿ ಮಾಡಿದ್ದ ವಾಹನ ಬಿಡುಗಡೆ ಮಾಡಲು ಲಂಚ ಪಡೆಯುತ್ತಿದ್ದ ಆಹಾರ ಇಲಾಖೆಯ ಜಂಟಿ ನಿರ್ದೇಶಕ ಸೇರಿದಂತೆ ಇಬ್ಬರು ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ ಬಿದ್ದಿದ್ದಾರೆ.
ಜಂಟಿ ನಿರ್ದೇಶಕ ಕೆ.ಶ್ರೀಧರ್ ಮತ್ತು ದ್ವಿತೀಯ ದರ್ಜೆ ಸಹಾಯಕ ಸಂತೋಷ ಎಸಿಬಿ ಬಲೆಗೆ ಬಿದ್ದವರು. ಜಪ್ತಿ ಮಾಡಿರುವ ವಾಹನ ಬಿಡುಗಡೆ ಮಾಡಲು ಮೈನುದ್ದಿನ್ ಎನ್ನುವವರಿಂದ 50 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಇಂದು ಮೈನುದ್ದಿನ್ ಅವರಿಂದ ಮುಂಗಡವಾಗಿ 15 ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ, ಇಬ್ಬರನ್ನು ಬಂಧಿಸಿದ್ದಾರೆ.
ಸಿನಿಮೀಯ ರೀತಿ ಕಾರ್ಯಾಚರಣೆ: ಕಳೆದ ಮಾರ್ಚ್ನಲ್ಲಿ ಆಳಂದ ಬಳಿ ಪಡಿತರ ಅಕ್ಕಿ ಸಾಗಿಸುವ ವಾಹನವನ್ನು ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ವಶಪಡಿಸಿಕೊಂಡಿದ್ದರು. ಅಂದಿನಿಂದ ವಾಹನ ಮಾಲೀಕ ಮೈನುದ್ದೀನ್ ವಾಹನ ಬಿಡುಗಡೆ ಮಾಡಿಸಿಕೊಳ್ಳಲು ಕಸರತ್ತು ಮಾಡುತ್ತಿದ್ದರು. ವಾಹನ ಪೊಲೀಸರ ವಶದಲ್ಲಿದ್ದರೂ ಅದರ ಬಿಡುಗಡೆಗೆ ಆಹಾರ ಇಲಾಖೆ ಅಧಿಕಾರಿಗಳ ಅನುಮತಿ ಬೇಕಿತ್ತು.
ಹೀಗಾಗಿ ವಾಹನ ಬಿಡುಗಡೆ ಮಾಡಲು ಆಹಾರ ಇಲಾಖೆಯ ಅಧಿಕಾರಿಗಳು ಲಂಚ ಪಡೆಯುತ್ತಿರುವ ಖಚಿತ ಮಾಹಿತಿ ಮೇರೆಗೆ ಕಚೇರಿ ಮೇಲೆ ಎಸಿಬಿ ಎಸ್ಪಿ ವಿ.ಎಂ. ಜ್ಯೋತಿ ಡಿವೈಎಸ್ಪಿ ಸುಧಾ ಆದಿ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಆದರೆ, ಅಷ್ಟರಲ್ಲೇ ಎಸ್ ಡಿಎ ಸಂತೋಷ ಲಂಚ ಪಡೆದು ಜಂಟಿ ನಿರ್ದೇಶಕ ಶ್ರೀಧರ್ ಗೆ ತಲುಪಿಸಲು ಅವರ ಮನೆಗೆ ವಾಹನದಲ್ಲಿ ಹೋಗುತ್ತಿದ್ದರು. ಹೀಗಾಗಿ ಸಂತೋಷನನ್ನು ಅಧಿಕಾರಿಗಳು ಬೆನ್ನಟ್ಟಿದ್ದಾರೆ. ಘಾಟಗೆ ಲೇಔಟ್ ನಲ್ಲಿರುವ ಮೇಲಾಧಿಕಾರಿ ಶ್ರೀಧರ್ ಮನೆಗೆ ತೆರಳಿ ಸಂತೋಷ ಲಂಚದ ಹಣ ನೀಡುತ್ತಿದ್ದಾಗ ಇಬ್ಬರನ್ನೂ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
MUST WATCH
ಹೊಸ ಸೇರ್ಪಡೆ
Extortion: ಆನ್ಲೈನ್ ಗೇಮ್; ಬಾಲಕನ ಬೆದರಿಸಿ ಸುಲಿಗೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
LPG Cylinders: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?