ಮುಂಬೈನಿಂದ ಕಲಬುರಗಿಗೆ ಎರಡು ರೈಲು


Team Udayavani, May 12, 2020, 6:14 AM IST

ಮುಂಬೈನಿಂದ ಕಲಬುರಗಿಗೆ ಎರಡು ರೈಲು

ಕಲಬುರಗಿ: ಮಹಾರಾಷ್ಟ್ರದ ಮುಂಬೈನಲ್ಲಿ ಸಿಲುಕಿರುವ ಕನ್ನಡಿಗರನ್ನು ಕರೆತರಲು ರಾಜ್ಯ ಸರ್ಕಾರ ರೈಲಿನ ವ್ಯವಸ್ಥೆ ಮಾಡಿದ್ದು, ಕಲ್ಯಾಣ ಕರ್ನಾಟಕ ಭಾಗದ ವಲಸಿಗರನ್ನು ಕಲಬುರಗಿಗೆ ಸ್ಥಳಾಂತರಿಸಲಾಗುತ್ತಿದೆ. ಸೋಮವಾರ ಮೊದಲ ರೈಲು ಪ್ರಯಾಣಿಸಿದ್ದು, ಮೇ 13ರಂದು ಮತ್ತೂಂದು ರೈಲು ಆಗಮಿಸುವ ನಿರೀಕ್ಷೆ ಇದೆ.

ಲಾಕ್‌ಡೌನ್‌ನಲ್ಲಿ ಸಿಲುಕಿರುವ ವಲಸಿಗರ ಪ್ರವಾಸಕ್ಕೆ ರೈಲ್ವೆ ಇಲಾಖೆ “ಶ್ರಮಿಕ’ ವಿಶೇಷ ರೈಲುಗಳನ್ನು ಆರಂಭಿಸಿದೆ. ಉದ್ಯೋಗ ಅರಿಸಿ ಮುಂಬೈಗೆ ತೆರಳಿದ್ದ ರಾಜ್ಯದವರನ್ನು ಕರೆ ತರಲು ರೈಲಿನ ವ್ಯವಸ್ಥೆ ಮಾಡಲಾಗಿದೆ. ಸೋಮವಾರ ಸಂಜೆ 4.30ಕ್ಕೆ ರಾಜ್ಯದ 1,230 ಕಾರ್ಮಿಕರನ್ನು ಹೊತ್ತ ರೈಲು ಶ್ರಮಿಕ ರೈಲು ಥಾಣೆ ನಿಲ್ದಾಣದಿಂದ ಹೊರಟು ಕಲಬುರಗಿ ರೈಲು ನಿಲ್ದಾಣಕ್ಕೆ ತಲುಪಿಸಲಿದೆ.

ನಿಲ್ದಾಣದಲ್ಲೇ ತಪಾಸಣೆ: ಕೋವಿಡ್ ಮಹಾಮಾರಿ ಭೀತಿ ಹಿನ್ನೆಲೆಯಲ್ಲಿ ಮುಂಬೈನಿಂದ ಆಗಮಿಸಿದ ಕಾರ್ಮಿಕರನ್ನು ರೈಲ್ವೆ ನಿಲ್ದಾಣದಲ್ಲೇ ಆರೋಗ್ಯ ತಪಾಸಣೆಗೆ ಒಳಪಡಿಸಲು ವ್ಯವಸ್ಥೆ ಮಾಡಲಾಗಿದೆ. ಒಟ್ಟಿಗೆ ಎಲ್ಲ ಪ್ರಯಾಣಿಕರು ರೈಲಿನಿಂದ ಇಳಿದು ಹೊರ ಹೋಗುವಂತಿಲ್ಲ. ತಾವಿದ್ದ ರೈಲಿನ ಬೋಗಿ ಮುಂದೆ ಸರದಿಯಲ್ಲಿ ಇಳಿದು ತಪಾಸಣೆ ಮಾಡಿಕೊಳ್ಳಲು ಕೌಂಟರ್‌ ತೆರೆಯಲಾಗಿದೆ. ರೈಲಿನಿಂದ ಬಂದಿಳಿದ ಕೂಡಲೇ ಸಾನಿಟೈಜರ್‌ ಸಿಂಪಡಿಸಿ ಸಾನಿಟೈಸ್‌ ಮಾಡಿ, ಥರ್ಮಲ್‌ ಗನ್‌ದಿಂದ ಆರೋಗ್ಯ ತಪಾಸಣೆ ಮಾಡಲಾಗುತ್ತದೆ. ನಂತರ ರೈಲು ನಿಲ್ದಾಣದಲ್ಲಿ ಒಂದೇ ದ್ವಾರದ ಮೂಲಕ ಹೊರಗೆ ಬರುವಂತೆ ವ್ಯವಸ್ಥೆ ಮಾಡಲಾಗಿದೆ.  ರೈಲ್ವೆ ನಿಲ್ದಾಣದಲ್ಲಿನ ವ್ಯವಸ್ಥೆ ಬಗ್ಗೆ ಸೋಮವಾರ ಮಧ್ಯಾಹ್ನ ಶಾಸಕ ದತ್ತಾತ್ರೇಯ ಪಾಟೀಲ ರೇವೂರ, ಜಿಲ್ಲಾಧಿಕಾರಿ ಶರತ್‌ ಬಿ., ಜಿಪಂ ಸಿಇಒ ಡಾ| ರಾಜಾ ಪಿ., ಪಾಲಿಕೆ ಆಯುಕ್ತ ರಾಹುಲ ಪಾಂಡ್ವೆ, ಡಿಸಿಪಿ ಕಿಶೋರಬಾಬು ಸೇರಿದಂತೆ ಹಲವು ಅಧಿಕಾರಿಗಳು ಪರಿಶೀಲಿಸಿದರು.

ಕ್ವಾರಂಟೈನ್‌ ಕಡ್ಡಾಯ: ರೈಲಿನ ಮೂಲಕ ಕಲಬುರಗಿಗೆ ಬಂದಿರುವರ ಹೆಸರು, ವಿವರ ಮತ್ತು ಅವರ ಆಧಾರ ಕಾರ್ಡ್‌ಗಳ ಸಂಖ್ಯೆ ಮತ್ತು ಮೊಬೈಲ್‌ ಸಂಖ್ಯೆ ಮಾಹಿತಿ ಸಂಗ್ರಹಿಸಲಾಯಿತು. ರೈಲ್ವೆ ನಿಲ್ವಾಣದಿಂದ ಅವರ ತಾಲೂಕಿಗೆ ತೆರಳಲು ವ್ಯವಸ್ಥೆ ಈಶಾನ್ಯ ಸಾರಿಗೆ ಸಂಸ್ಥೆಯಿಂದ ಬಸ್‌ ಕಲ್ಪಿಸಲಾಗುತ್ತಿದೆ. ಕಡ್ಡಾಯವಾಗಿ ಕ್ವಾರಂಟೈನ್‌ನಲ್ಲಿ ಇರಿಸಲು ಕ್ರಮ ವಹಿಸಲಾಗಿದೆ. ತವರು ತಾಲೂಕುಗಳಿಗೆ ಕಳುಹಿಸಿದ್ದ ಅಲ್ಲಿ ವಸತಿ ಶಾಲೆ ಮತ್ತು ನಿಲಯಗಳಲ್ಲಿ ಕ್ವಾರಂಟೈನ್‌ ಮಾಡಲಾಯಿತು. ಜಿಲ್ಲೆಯ ಚಿಂಚೋಳಿ, ಚಿತ್ತಾಪುರ, ಸೇಡಂ, ಆಳಂದ, ಅಫ‌ಜಲಪುರ ಹಾಗೂ ಮೊದಲಾದ ಕಡೆಗಳಲ್ಲಿ ಕ್ವಾರಂಟೈನ್‌ಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಕಲಬುರಗಿ ತಾಲೂಕಿನ ಕಾರ್ಮಿಕರನ್ನು ನಗರದ ರಾಜಾಪುರದಲ್ಲಿರುವ ಹಾಸ್ಟೆಲ್‌ದಲ್ಲಿ ಕ್ವಾರಂಟೈನ್‌ ಮಾಡಲಾಗುತ್ತದೆ. ತವರಿಗೆ ಬಂದವರ ವ್ಯವಸ್ಥೆಗಾಗಿ ಪೊಲೀಸರು, ಕಂದಾಯ, ಆರೋಗ್ಯ, ಸಾರಿಗೆ ಸಂಸ್ಥೆ ಮತ್ತು ಪಾಲಿಕೆ ಸಿಬ್ಬಂದಿ ಶ್ರಮಿಸುತ್ತಿದ್ದಾರೆ. ಅಲ್ಲದೇ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್‌ ಅಧಿಕಾರಿಗಳು ಬಂದೋಬಸ್ತ್ ಕೈಗೊಳ್ಳುತ್ತಿದ್ದಾರೆ.

ಮುಂಬೈನಲ್ಲಿ ಸಿಲುಕಿರುವ ಜನರನ್ನು ತವರಿಗೆ ಕರೆ ತರಲು ವಿಶೇಷ ರೈಲಿನ ವ್ಯವಸ್ಥೆ ಮಾಡಲಾಗಿದೆ. ರೈಲಿನ ವೆಚ್ಚವನ್ನು ರಾಜ್ಯ ಸರ್ಕಾರವೇಭರಿಸುತ್ತಿದೆ. ಸೋಮವಾರ ಮೊದಲ ಹಂತದಲ್ಲಿ 1,200 ಕಾರ್ಮಿಕರನ್ನು ಸ್ಥಳಾಂತರ ಮಾಡಲಾಗಿದ್ದು, ಮೇ 13ರಂದು ಮತ್ತೂಂದು ರೈಲು ಆಗಮಿಸುವ ನಿರೀಕ್ಷೆ ಇದೆ. –ಡಾ| ಉಮೇಶ ಜಾಧವ, ಸಂಸದ

ಕಲಬುರಗಿ ರೈಲ್ವೆ ನಿಲ್ದಾಣಕ್ಕೆ ಆಗಮಿಸುವ ವಲಸಿಗರ ಸಮಗ್ರ ಮಾಹಿತಿ ಸಂಗ್ರಹಿಸಲಾಗುತ್ತದೆ. ಕಡ್ಡಾಯವಾಗಿ ಕ್ವಾರಂಟೈನ್‌ ಮಾಡಲಾಗುತ್ತದೆ. “ಸೇವಾ ಸಿಂಧು’ ಸಹಾಯವಾಣಿ ಆ್ಯಪ್‌ನಲ್ಲಿ ಹೆಸರು ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿದೆ. ಹೆಸರು ನೋಂದಾಯಿಸಿ ಕೊಳ್ಳದವರನ್ನು ರೈಲ್ವೆ ನಿಲ್ದಾಣದಲ್ಲಿ ನಿಲ್ಲಿಸಿ ನೋಂದಾಯಿಸಿಕೊಳ್ಳಲಾಗುವುದು.  –ಶರತ್‌ ಬಿ., ಜಿಲ್ಲಾಧಿಕಾರಿ

ಟಾಪ್ ನ್ಯೂಸ್

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.