ಕಲಬುರಗಿ: ವಾಹನಗಳ ಅನಧಿಕೃತ ನಾಮಫಲಕ ತೆರವು; ಪೊಲೀಸರಿಂದ ಕಾರ್ಯಾಚರಣೆ
Team Udayavani, Jul 6, 2022, 12:20 PM IST
ಕಲಬುರಗಿ: ಸರ್ಕಾರಿ ಸೇವೆಯಲ್ಲಿ, ಭಾರತ ಸರ್ಕಾರ ( ಗವರ್ನಮೆಂಟ್ ಆಫ್ ಇಂಡಿಯಾ) ಸೇವೆ ಸೇರಿದಂತೆ ಆ ಸಂಘಟನೆ- ಈ ಸಂಘಟನೆ ಎಂಬುದಾಗಿ ವಾಹನಗಳ ಮೇಲೆ ನಾಮಫಲಕ ಅಳವಡಿಸಿ ಸಂಚಾರ ನಿಯಮ ಉಲ್ಲಂಘಿಸುತ್ತಿರುವ ವಿರುದ್ದ ಸಂಚಾರಿ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದಾರೆ.
ಇಲ್ಲಿನ ಇಎಸ್ಐ ಆಸ್ಪತ್ರೆಯಲ್ಲಿ ಸೇವೆ ಮಾಡುವರು ಜತೆಗೆ ಒಪ್ಪಂದ ಮೇಲೆ ಪಡೆಯಲಾದ ವಾಹನ ಮೇಲೆ , ಒಪ್ಪಂದ ಮುಗಿದು ಹಲವು ವರ್ಷಗಳೂ ಕಳೆದರೂ ಹಾಗೆ ನಾಮಫಲಕ ಹಾಗೆ ಮುಂದುವರೆಸಿಕೊಂಡು ಬರುತ್ತಿರುವುದನ್ನು ಸೇರಿದಂತೆ ಇತರ ಅಕ್ರಮಗಳನ್ನು ಕಾರ್ಯಾಚರಣೆ ಮೂಲಕ ಪತ್ತೆ ಹಚ್ಚಲಾಗುತ್ತಿದೆ.
ಸುಮ್ಮನೇ ಕಾರುಗಳ ಮೇಲೆ ಇಲ್ಲದ ಸಲ್ಲದ್ದನ್ಬು ಬರೆದು ಅದರಲ್ಲೂ ಸರ್ಕಾರಿ ಸೇವೆಯಲ್ಲಿ ಎಂದು ಬೋಗಸ್ ಬರೆದು ವಂಚಿಸುತ್ತಿರುವುದು ಹಾಗೂ ಸಾಮಾಜಿಕವಾಗಿ ತಪ್ಪು ಸಂದೇಶ ಬೀರುತ್ತಿರುವುದನ್ನು ಬೇರು ಸಮೇತ ಕಿತ್ತು ಹಾಕಲು ಸಂಚಾರಿ ಪೊಲೀಸರು ಮುಂದಾಗಿರುವುದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರ ವಾಗಿದೆ.
ಸಂಚಾರಿ ವಿಭಾಗದ ಇನ್ಸ್ ಪೆಕ್ಟರ್ ಶಾಂತಿನಾಥ ಅವರ ನೇತೃತ್ವದಲ್ಲಿ ಕಳೆದ ನಾಲ್ಕು ದಿನಗಳಿಂದ ಕಾರ್ಯಾಚರಣೆ ನಡೆದಿದ್ದು, ಹಲವಾರು ವಾಹನಗಳ ಮೇಲೆ ಅನಧಿಕೃತವಾಗಿವಾಗಿ ಬರೆಯಲಾಗಿದ್ದ ನಾಮಫಲಕ ತೆರವುಗೊಳಿಸಲಾಗುತ್ತಿದೆ.
ದಂಡ ಹಾಕುವ ಹಾಗೂ ವಾಹನ ಜಪ್ತಿಯನ್ನು ಮಾಡಲಾಗುತ್ತಿದೆ. ಒಟ್ಟಾರೆ ವಾಹನಗಳ ಮೇಲೆ ಅನಧಿಕೃತವಾಗಿ ಬರೆಯುವ ಚಾಳಿ ವ್ಯಾಪಕವಾಗಿದೆ. ಕೆಲವರು ಸರಳವಾಗಿ ಪಾರ್ಕಿಂಗ್ ದೊರಕಲು ಹಾಗೂ ರಸ್ತೆ ಪೋಸು ತೋರಿಸಲು ಹೆಸರು ಹಾಕಿ ದರ್ಪ ಮೆರೆಯುತ್ತಿರುವುದಕ್ಕೆ ಇತಿಶ್ರೀ ಹಾಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್
ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು
ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…
MUST WATCH
ಹೊಸ ಸೇರ್ಪಡೆ
OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್ ರೋಲ್ ನಲ್ಲಿ ಫಾಫಾ
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ