ಗ್ರಹಿಕೆಯಿಂದ ಕಲಾಕೃತಿ ವಿಮರ್ಶೆ ಸಾಧ್ಯ
Team Udayavani, Oct 7, 2018, 1:50 PM IST
ಕಲಬುರಗಿ: ಚಿತ್ರ ಕಲಾವಿದನ ಕೈಚಳಕದಿಂದ ಮೂಡಿ ಬಂದ ಕಲಾಕೃತಿಗಳನ್ನು ಗ್ರಹಿಕೆಯ ಮೂಸೆಯಿಂದ ವಿಮರ್ಶೆ
ಮಾಡಲು ಸಾಧ್ಯ ಎಂದು ಪತ್ರಕರ್ತ, ಸಾಹಿತಿ ಮಹಿಪಾಲರೆಡ್ಡಿ ಮುನ್ನೂರ್ ಅಭಿಪ್ರಾಯ ವ್ಯಕ್ತಪಡಿಸಿದರು. ನಗರದ ದಿ ಆರ್ಟ್ ಇಂಟಿಗ್ರೇಶನ್ ಚಿತ್ರಕಲಾ ಮಹಾವಿದ್ಯಾಲಯದ ಅಂಕುರ್ ಆರ್ಟ್ ಗ್ಯಾಲರಿಯಲ್ಲಿ ಆಯೋಜಿಸಲಾಗಿದ್ದ ಹಿರಿಯ ಚಿತ್ರಕಲಾವಿದ ಬಾಬುರಾವ್ ಎಚ್. ಅವರ ಚಿತ್ರ ಮತ್ತು ಮುದ್ರಣ ಕಲಾಕೃತಿಗಳ ಏಕವ್ಯಕ್ತಿ ಚಿತ್ರಕಲಾ ಪ್ರದರ್ಶನದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಬದುಕನ್ನು ಕಟ್ಟಿಕೊಳ್ಳುವಾಗ ಕ್ರಿಯಾಶೀಲತೆ ಮುಖ್ಯವಾಗುತ್ತದೆ. ಸೃಜನೇತರಕ್ಕಿಂತ ಸೃಜನಶೀಲ ಮಾಧ್ಯಮವು ಬದುಕನ್ನು, ದೇಶವನ್ನು ಕಟ್ಟುತ್ತದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಚಿತ್ರಕಲಾ ಮಹಾವಿದ್ಯಾಲಯದ ಪ್ರಾಂಶುಪಾಲ ಎಂ.ಎಸ್. ಬೆಳಮಗಿ ಮಾತನಾಡಿ, ಚಿತ್ರಕಲೆಯಲ್ಲಿ ಎರಡು ಪ್ರಕಾರಗಳಿವೆ. ಕಲಾ ಬದ್ಧ ಮತ್ತು ದೇಶ ಬದ್ಧ. ಕಲಾ ಬದ್ಧ ವೈಯಕ್ತಿಕವಾದರೆ, ದೇಶ ಬದ್ಧ ವ್ಯಾಪ್ತಿ ವಿಸ್ತಾರ ದೊಡ್ಡದು ಎಂದರು. ಕಲಾವಿದರು ಚಿತ್ರಿಸುವ ಕಲಾಕೃತಿಗಳು ಪ್ರೇಕ್ಷಕರ ಮನಸೂರೆಗೊಳ್ಳುವುದಲ್ಲದೇ ಅನೇಕ ರೀತಿಯ ಸಾಮಾಜಿಕ ಸಂದೇಶಗಳನ್ನು ನೀಡುತ್ತವೆ ಎಂದು ಹೇಳಿದರು.
ಅಂತಾರಾಷ್ಟ್ರೀಯ ಚಿತ್ರ ಕಲಾವಿದ, ಕರ್ನಾಟಕ ರಾಜ್ಯೋತ್ಸವ ಪುರಸ್ಕೃತ ಡಾ| ವಿಜಯ ಹಾಗರಗುಂಡಗಿ ಉದ್ಘಾಟಿಸಿದರು. ಡಾ| ಅಶೋಕ್ ಶೆಟಕಾರ್ ನಿರೂಪಿಸಿದರು. ಸಂಗಯ್ಯ ಹಳ್ಳದಮಠ ಪ್ರಾರ್ಥನಾ ಗೀತೆ ಹಾಡಿದರು. ಬಸವರಾಜ್ ಜಾನೆ, ಬಸವರಾಜ್ ಉಪ್ಪಿನ, ಶಂಕ್ರಯ್ಯ ಘಂಟಿ, ಶರಣಯ್ಯ, ಸುನೀಲ ಮಾನ್ಪಡೆ ಮುಂತಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ