ಸೇನಾ ಪಡೆಯಿಂದ ಕಲಬುರಗಿ ನಗರ ಪ್ರದಕ್ಷಿಣೆ
Team Udayavani, Apr 23, 2019, 4:01 PM IST
ಕಲಬುರಗಿ: ಇಂದು (ಏ.23) ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ಮತದಾರರು ನಿರ್ಭಿತಿಯಿಂದ ಮತ ಚಲಾವಣೆಯಲ್ಲಿ ಪಾಲ್ಗೊಳ್ಳಲು ಭದ್ರತೆಯ ಸಂದೇಶ ರವಾನಿಸಲು ಸೋಮವಾರ ಭದ್ರತಾ ಸಿಬ್ಬಂದಿಯಿಂದ ನಗರ ಪ್ರದಕ್ಷಣೆ ನಡೆಯಿತು.
ನಗರದ ಜಗತ್ ವೃತ್ತದಿಂದ ಮುಸ್ಲಿಂ ಚೌಕ್, ಹುಮನಾಬಾದ ಬೇಸ್, ಕಿರಾಣಾ ಬಜಾರ ಮಾರ್ಗವಾಗಿ ಮರಳಿ ಜಗತ್ ವೃತ್ತವರೆಗೆ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ, ಕೆಎಸ್ಆರ್ಪಿ, ಡಿಎಆರ್ ಹಾಗೂ ಸಿವಿಲ್ ಪೊಲೀಸರು ನಗರ ಪ್ರದಕ್ಷಣೆ ನಡೆಸಿದರು.
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ ನೇತೃತ್ವದಲ್ಲಿ ನಡೆದ ನಗರ ಪ್ರದಕ್ಷಣೆಯಲ್ಲಿ ಸುಮಾರು 500ಕ್ಕಿಂತ ಹೆಚ್ಚಿನ ಭದ್ರತಾ ಸಿಬ್ಬಂದಿ ಭಾಗವಹಿಸಿದ್ದರು.
ಜಿಲ್ಲಾದ್ಯಂತ ಸಾರ್ವಜನಿಕರು ಯಾವುದೇ ಆಮಿಷ, ಪ್ರಭಾವಕ್ಕೊಳಗಾಗದೇ ನಿರ್ಭಿತಿಯಿಂದ ಮತದಾನ ಮಾಡುವ ಮೂಲಕ ತಮ್ಮ ಮತದ ಹಕ್ಕನ್ನು ಚಲಾಯಿಸಬೇಕು. ಚುನಾವಣಾ ಕಾರ್ಯಕ್ಕೆ ಅಡ್ಡಿಪಡಿಸುವ ಸುಳ್ಳು ವದಂತಿ ಹರಡಿದ್ದಲ್ಲಿ ಅಥವಾ ದೊಂಬಿ, ಗಲಭೆಗೆ ಕಾರಣವಾಗಿದ್ದಲ್ಲಿ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್