ಆಳಂದ ಲಾಡ್ಲೆ ಮಶಾಕ್ ದರ್ಗಾದಲ್ಲಿ ಉರುಸ್ ಪೂರ್ಣ


Team Udayavani, Feb 18, 2023, 2:07 PM IST

ಆಳಂದ ಲಾಡ್ಲೆ ಮಶಾಕ್ ದರ್ಗಾದಲ್ಲಿ ಉರುಸ್ ಪೂರ್ಣ

ಕಲಬುರಗಿ: ಆಳಂದ ಪಟ್ಟಣದ ಲಾಡ್ಲೆ ಮಶಾಕ್ ದರ್ಗಾದಲ್ಲಿ 14 ಮಂದಿ ಮುಸ್ಲಿಂ ಮುಖಂಡರು ಸಂದಲ್ (ಉರುಸ್) ನೆರವೇರಿಸಿದರು.

15 ಜನರಿಗೆ ಉರುಸ್ ಗೆ ತೆರಳಲು ಅವಕಾಶ ಇದ್ದರೂ 14 ಜನ ಮಾತ್ರ ತೆರಳಿ ಸಂದಲ್ ನೆರವೇರಿಸಿದರು. ಬೆಳಿಗ್ಗೆ 8 ಕ್ಕೆ ಆರು ಜನ, 9 ಗಂಟೆಗೆ ಆರು ಜನ ಹಾಗೂ 9.50 ಕ್ಕೆ ಇಬ್ಬರು ಜನ ದರ್ಗಾದ ಒಳಗಡೆ ಪ್ರವೇಶಿಸಿದರು.

ಸ್ವಯಂ ಪ್ರೇರಣೆಯಿಂದ 14 ಜನ ಮುಸ್ಲಿಂ ಮುಖಂಡರಿಂದ ಸಾಂಪ್ರದಾಯಿಕವಾಗಿ ಉರುಸ್ ಆಚರಿಸಲಾಯಿತು. ಸಂದಲ್ ನೆರವೇರಿಸಿ ಹೊರ ಬಂದ ನಂತರ ಮಾತನಾಡಿದ ಹಜರತ್ ಲಾಡ್ಲೆ ಮಶಾಖ್ ದರ್ಗಾ ಕಮಿಟಿ ಅಧ್ಯಕ್ಷ ಮೊಯಿಝ್ ಅನ್ಸಾರಿ ಕಾರಬಾರಿ ಹಾಗೂ ಮೊಹಮ್ಮದ ಸಾದತ್ ಅನ್ಸಾರಿ, 660 ವರ್ಷಗಳಿಂದ ಉರುಸ್ ಆಚರಿಸುತ್ತಾ ಬರಲಾಗುತ್ತಿದೆ. ಎಲ್ಲರೂ ದರ್ಗಾ ಬಂದು ಹೋಗುತ್ತಾರೆ.  ಆದರೆ ಕಳೆದ ವರ್ಷದಿಂದ ಪೊಲೀಸರು ಬರುವಂತಾಗಿದೆ. ಇದೆಲ್ಲ ಚುನಾವಣೆ ಸಲುವಾಗಿ ಮಾಡಲಾಗುತ್ತಿದೆ. ಒಟ್ಟಾರೆ ಹಿಂದು- ಮುಸ್ಲಿಂ ಎಂಬುದಾಗಿ ಬಿಂಬಿಸಲಾಗುತ್ತಿದೆ ಎಂದರು.

ಸಂದಲ್ ನೆರವೇರಿಸಿದವರು: ಹಜರತ್ ಲಾಡ್ಲೆ ಮಶಾಖ್ ದರ್ಗಾ ಮ್ಯಾನೇಜಿಂಗ್ ಕಮಿಟಿಯ ಅಧ್ಯಕ್ಷ ಮೊಯಿಝ್ ಅನ್ಸಾರಿ ಕಾರಬಾರಿ, ಪ್ರಮುಖರಾದ ಆಸೀಫ್ ಅನ್ಸಾರಿ ಕಾರಬಾರಿ, ನೂರೂದ್ದೀನ್ ನಿಯಾಝುದ್ದೀನ್ ಅನ್ಸಾರಿ, ರಿಝ್ವಾನ್ ವಾಹಾಬ್ ಅನ್ಸಾರಿ, ಮೊಹಮ್ಮದ ಸಾದತ್ ಅನ್ಸಾರಿ, ಫರ್ವೆಜ್ ಅನ್ಸಾರಿ, ಸಬೀರ ಅನ್ಸಾರಿ, ಐದ್ರೀಸ್ ಅನ್ಸಾರಿ, ಮುಸಾ ಅನ್ಸಾರಿ, ಸಾದೀಖ್ ಅನ್ಸಾರಿ, ಶಖೀಲ್ ಫರಾಶ್, ಗನಿ ಫರಾಶ್, ಮಿನಾಜ್ ಫರಾಶ್, ಐದ್ರೀಶ್ ಅನ್ಸಾರಿ ಸಂದಲ್ ನೆರವೇರಿಸಿದರು.

ಹೊರವಲಯದಲ್ಲಿ ಪೂಜೆ: ದರ್ಗಾದಲ್ಲಿ 15 ಜನರಿಗೆ ಮಾತ್ರ ದರ್ಗಾದಲ್ಲಿನ ಶಿವಲಿಂಗ ಪೂಜೆಗೂ ಅವಕಾಶ ನೀಡಿದ್ದರಿಂದ ಜತೆಗೆ ಆಳಂದ ಪಟ್ಟಣದಲ್ಲಿ 144 ಕಲಂ ಜಾರಿ ಮಾಡಿದ್ದರಿಂದ ಆಳಂದ ಪಟ್ಟಣದ ಹೊರವಲಯ ಪ್ರಗತಿ ಮೈದಾನದಲ್ಲಿ ಹಿಂದೂ ಮುಖಂಡರು ಹಲವು ಪೂಜೆಗಳನ್ನು ನೆರವೇರಿಸಿದರು.

ಇದನ್ನೂ ಓದಿ:ಸಸ್ಯಹಾರಿ ಹೊಟೇಲ್‌ನಲ್ಲಿ ಚಿಕನ್‌ ಕೇಳಿ,ಸಿಬ್ಬಂದಿ ಮೇಲೆ ಹಲ್ಲೆಗೈದ ಪೊಲೀಸರು: ವಿಡಿಯೋ ವೈರಲ್

ಗಣಪತಿ ಪೂಜೆ, ಗಂಗಾ ಪೂಜೆ, ಮಹಾರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ, ಮಹಾಮಂಗಳಾರತಿ ನಡೆದವು.‌ ಕಡಗಂಚಿ ಶ್ರೀಗಳು ಮತ್ತು ಶ್ರೀ ಸಿದ್ದಲಿಂಗ ಸ್ವಾಮೀಜಿ ನೇತೃತ್ವದಲ್ಲಿ ಹಲವು ಪೂಜಾ ಕೈಂಕರ್ಯಗಳು ನೆರವೇರಿದವು.‌ ಪೂಜೆ ಮುಗಿಸಿಕೊಂಡು ಲಾಡ್ಲೇ ಮಶಾಕ್ ದರ್ಗಾಕ್ಕೆ 15 ಜನರ ಹಿಂದೂಗಳ ತಂಡ ತೆರಳಿತು.‌ ಪೂಜೆ ನಡೆಯುವ ಸ್ಥಳದಲ್ಲಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದ್ದು, ಪೂಜೆಗೆ ಶಿವಮಾಲಾಧಾರಿಗಳ ಆಗಮನವಾಗಿದ್ದು, ಬಿಲ್ವಪತ್ರಿಗಳೊಂದಿಗೆ ರಾಘವ ಚೈತನ್ಯ ಶಿವಲಿಂಗಕ್ಕೆ ಪೂಜೆ ನಡೆಸಾಲುಗುತ್ತಿದೆ. ಹೈಕೋರ್ಟ್ ನ ಆದೇಶ ಕಟ್ಟು ನಿಟ್ಟಾಗಿ ಪಾಲನೆ ಮಾಡಲಾಗುತ್ತಿದೆ ಎಂದು ಎಸ್ಪಿ ಇಶಾ ಪಂತ್ ತಿಳಿಸಿದರು.

ಜನರ ಪರದಾಟ: ಆಳಂದ ಪಟ್ಟಣದಲ್ಲಿ 144 ಸೆಕ್ಷೆನ್ ಅನ್ವಯ ನಿಷೇಧಾಜ್ಞೆ ಜಾರಿ ಹಿನ್ನೆಲೆಯಲ್ಲಿ ಶಿವರಾತ್ರಿ ಹಬ್ಬದಂದು ಜನರು ಪರದಾಡಿದರು. ಇಡೀ ಆಳಂದ ಪಟ್ಟಣದಲ್ಲಿ ಎಲ್ಲಿ ನೋಡಿದರಲ್ಲಿ ಪೊಲೀಸರೇ ಕಾಣುತ್ತಿದ್ದಾರೆ. ಬಸ್, ಆಟೋ ಸೇರಿ ಎಲ್ಲಾ ವಾಹನ ಸಂಚಾರ ಬಂದ್ ಮಾಡಲಾಗಿದೆ.

ಸೊಲ್ಲಾಪೂರ, ಕಲಬುರಗಿಗೆ ತೆರಳಲು ಆಳಂದ ಬಸ್ ನಿಲ್ದಾಣಕ್ಕೆ ಬಂದ ಜನರ ಪರದಾಟ ಕಂಡು ಬಂತು.ಆಸ್ಪತ್ರೆ ಸೇರಿ ಬೇರೆ ಬೇರೆ ಕೆಲಸಕ್ಕಾಗಿ ಊರಿಗೆ ಹೋಗಲು ಬಸ್ ನಿಲ್ದಾಣಕ್ಕೆ ಬಂದವರು ಪರದಾಡಿದರು.

ಟಾಪ್ ನ್ಯೂಸ್

14-uv-fusion

UV Fusion: ಮುದ ನೀಡಿದ ಕೌದಿ

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌  ʼಸಲಾರ್‌ʼ

Salaar: ಜಪಾನ್‌ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್‌ – ಪ್ರಶಾಂತ್‌ ನೀಲ್‌ ʼಸಲಾರ್‌ʼ

12-uv-fusion

Spray fans: ಬಿಸಿ ಗಾಳಿಯೂ ತಂಪಾಯ್ತು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಕಳ್ಳರು & ದರೋಡೆಕೋರರ ಗ್ಯಾಂಗ್‌ ಚುಚ್ಚಿದ್ದ ವಿಷಕ್ಕೆ ಪೊಲೀಸ್‌ ಕಾನ್ಸ್‌ ಟೇಬಲ್‌ ಮೃತ್ಯು

ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ

Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

ಬಿಜೆಪಿ ಶಾಸಕ ಯತ್ನಾಳ ಶುಗರ್‌ ಫ್ಯಾಕ್ಟ್ರಿ ಹೆಂಗ್‌ ಕಟ್ಟಿದ್ರು: ಶಿವಾನಂದ ಪಾಟೀಲ

14-uv-fusion

UV Fusion: ಮುದ ನೀಡಿದ ಕೌದಿ

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Koppal Lok Sabha Constituency: ಹಿಟ್ನಾಳ್‌ಗೆ ಹೊಸ ಮುಖ ಡಾ| ಕ್ಯಾವಟರ್‌ ಸವಾಲು

Koppal Lok Sabha Constituency: ಹಿಟ್ನಾಳ್‌ಗೆ ಹೊಸ ಮುಖ ಡಾ| ಕ್ಯಾವಟರ್‌ ಸವಾಲು

Raichur Lok Sabha Constituency: ಬಿಸಿಲೂರಿನಲ್ಲಿ ಕಾವೇರಿದ “ನಾಯಕ’ತ್ವದ ಹೋರಾಟ

Raichur Lok Sabha Constituency: ಬಿಸಿಲೂರಿನಲ್ಲಿ ಕಾವೇರಿದ “ನಾಯಕ’ತ್ವದ ಹೋರಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.