ಬಣ್ಣದ ಹೂ ಬಳಸಿ ಓಕುಳಿ ಸಂಭ್ರಮ
Team Udayavani, Mar 21, 2019, 5:47 AM IST
ಜೇವರ್ಗಿ: ಪತಂಜಲಿ ಯೋಗ ಸಮಿತಿ ಹಾಗೂ ಭಾರತ್ ಸ್ವಾಭಿಮಾನ್ ಟ್ರಸ್ಟ್ ವತಿಯಿಂದ ಗುರುಕುಲ ಶಾಲೆ ಆವರಣದಲ್ಲಿ ಬಣ್ಣಬಣ್ಣದ ಹೂವುಗಳನ್ನು ಎರಚಿ ವಿಶಿಷ್ಠವಾಗಿ ಆಚರಿಸಲಾಯಿತು.
ಪಟ್ಟಣದ ಮಹಾತ್ಮಾ ಗಾಂಧೀಜಿ ರೈತ ಕಲ್ಯಾಣ ಸಂಸ್ಥೆ ಅಡಿಯಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಪತಂಜಲಿ ರಾಜ್ಯ ಪ್ರಭಾರಿ ಭವರಲಾಲ್ ಆರ್ಯ ಮಾತನಾಡಿ, ಭಾರತೀಯ ಸಂಸ್ಕೃತಿ ವಿಶ್ವದಲ್ಲಿಯೇ ಸರ್ವಶ್ರೇಷ್ಠ. ಇಂತಹ ನಾಡಿನಲ್ಲಿ ಜನ್ಮ ತಾಳಿದವರೇ ಅದೃಷ್ಟ ವಂತರು ಎಂದು ಹೇಳಿದರು.
ಈ ಹೋಳಿಹಬ್ಬದಲ್ಲಿ ಜಿಲ್ಲೆಯ ಚಿತ್ತಾಪುರ, ಚಿಂಚೋಳಿ, ಸೇಡಂ, ಶಹಾಬಾದ, ಆಳಂದ ಹಾಗೂ ವಿವಿಧ ಜಿಲ್ಲೆಯ ಪತಂಜಲಿ ಯೋಗ ಸಮಿತಿ ಪದಾಧಿಕಾರಿಗಳು ಪಾಲ್ಗೊಂಡಿದ್ದರು. ಭಾರತ ಸ್ವಾಭಿಮಾನ ಟ್ರಸ್ಟ್ನ ಅಧ್ಯಕ್ಷ ಮಹಾಂತಯ್ಯ ಚ. ಹಿರೇಮಠ, ಪತಂಜಲಿ ಯೋಗ ಸಮಿತಿ ಅಧ್ಯಕ್ಷರಾದ ಅನೀಲ ರಾಂಪೂರೆ, ವಿಜಯಕುಮಾರ ಪಾಟೀಲ ಸೇಡಂ, ಮಲ್ಲಣ್ಣಗೌಡ ಕನ್ಯಾಕೋಳೂರ, ಡಾ| ಪಿ.ಎಂ.ಮಠ, ವೈ.ಎಸ್.ಹಿರೇಮಠ, ಪ್ರಾಚಾರ್ಯರಾದ ಜಗದೀಶ ಎಸ್. ಉಕನಾಳಕರ್, ಸಂಗೀತಾ ಘಂಟಿಮಠ, ಕಾವೇರಿ ಕಟ್ಟಿಸಂಗಾವಿ, ಶರಣಮ್ಮ ಸ್ಥಾವರಮಠ, ನಿರ್ಮಲಾ ಪಲ್ಲೇದ, ರಾಜೇಶ್ವರಿ ಪಾಟೀಲ, ಜಯಶ್ರೀ ದೇಸಾಯಿ, ಪ್ರೇಮಾ ವಿಜಯಕುಮಾರ ಮತ್ತಿತರರು ಪರಸ್ಪರ ಬಣ್ಣದ ಹೂವುಗಳನ್ನು ಎರಚಿ ಸಂಭ್ರಮಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ
Kalaburagi:ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ
Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್
MUST WATCH
ಹೊಸ ಸೇರ್ಪಡೆ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
IPL; ಪಂಜಾಬ್ ಕಿಂಗ್ಸ್-ಮುಂಬೈ ಇಂಡಿಯನ್ಸ್ : ಒಂದೇ ದೋಣಿಯ ಪಯಣಿಗರು
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ