ಯೋಜನೆಗಳ ಸದುಪಯೋಗ ಮಾಡಿಕೊಳ್ಳಿ : ಪಾಟೀಲ
Team Udayavani, Oct 17, 2021, 7:21 PM IST
ಜೇವರ್ಗಿ: ಗ್ರಾಮಸ್ಥರ ಮನವಿ ಪತ್ರ ಹಾಗೂ ಅವರ ಅಹವಾಲುಗಳನ್ನು ಆಲಿಸಿ ಸ್ಥಳದಲ್ಲಿಯೇ ಸಮಸ್ಯೆಗಳಿಗೆ ಸ್ಪಂದಿಸಲು ಪ್ರತಿ ತಿಂಗಳು ಮೂರನೇ ಶನಿವಾರ ತಾಲೂಕು ಮಟ್ಟದ ವಿವಿಧ ಇಲಾಖೆ, ತಾಲೂಕು ಆಡಳಿತ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ತಹಶೀಲ್ದಾರ್ ವಿನಯಕುಮಾರ ಪಾಟೀಲ ಹೇಳಿದರು.
ತಾಲೂಕಿನ ಸೊನ್ನ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ತಾಲೂಕು ಆಡಳಿತ ವತಿಯಿಂದ ಶನಿವಾರ ಆಯೋಜಿಸಿದ್ದ “ಅಧಿಕಾರಿಗಳ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸೊನ್ನ ವಿರಕ್ತಮಠದ ಪೀಠಾ ಧಿಪತಿ ಡಾ| ಶಿವಾನಂದ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ರಾಜ್ಯ ಸರ್ಕಾರ “ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆಗೆ’ ಎನ್ನುವ ವಿನೂತನ ಕಾರ್ಯಕ್ರಮ ಹಮ್ಮಿಕೊಂಡಿರುವುದು ಶ್ಲಾಘನೀಯ.
ಸೊನ್ನ ಗ್ರಾಮಸ್ಥರು ಮನೆ ಬಾಗಿಲಿಗೆ ಬಂದಿರುವ ಅಧಿಕಾರಿಗಳ ಮೂಲಕ ಸರ್ಕಾರದ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು. ಸೊನ್ನ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಬೇಕು. ಸಾರ್ವಜನಿಕ ಶೌಚಾಲಯ, ಒಳಚರಂಡಿ, ಸಿಸಿ ರಸ್ತೆ, ಅಂಗನವಾಡಿ ಕೇಂದ್ರಗಳ ದುರಸ್ತಿ ಹಾಗೂ ಖಬರಸ್ಥಾನಕ್ಕೆ ಸರ್ಕಾರಿ ಗೈರಾಣು ಜಮೀನು ಮಂಜೂರಾತಿ ಸೇರಿದಂತೆ ಅನೇಕ ಬೇಡಿಕೆಗಳ ಮನವಿ ಪತ್ರವನ್ನು ಸೊನ್ನ ಗ್ರಾಮಸ್ಥರು ತಾಲೂಕು ಮಟ್ಟದ ಅಧಿಕಾರಿಗಳಿಗೆ ಸಲ್ಲಿಸಿದರು.
ಸೊನ್ನ ಗ್ರಾಮ ಪಂಚಾಯಿತಿ ಅಧ್ಯಕ್ಷ ಶಿವಪ್ಪ ಗುಬ್ಟಾಡ, ಉಪಾಧ್ಯಕ್ಷೆ ಸವಿತಾ ಸಿದ್ಧಣ್ಣ ಕಲ್ಲೂರ, ಡಾ| ಸಿದ್ಧು ಪಾಟೀಲ, ಅಶೋಕ ನಾಯಕ, ಸಂಗಣ್ಣಗೌಡ ಪಾಟೀಲ, ಸುಷ್ಮಾ ಪಾಟೀಲ, ಅಬಕಾರಿ ಇಲಾಖೆ ಇನ್ಸಪೆಕ್ಟರ್ ವನೀತಾ ಸಿತಾಳೆ, ಜೇವರ್ಗಿ ಪಿಎಸ್ಐ ಸಂಗಮೇಶ ಅಂಗಡಿ, ಶಿಕ್ಷಣ ಇಲಾಖೆಯ ರಾಜಶೇಖರ, ಆಹಾರ ಇಲಾಖೆ ಶಿರಸ್ತೇದಾರ ಡಿ.ಬಿ. ಪಾಟೀಲ, ಚಂದೂಲಾಲ್ ರಾಠೊಡ, ಸೊನ್ನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ವಿರೇಶ ಮಾಕಾ, ಡಾ| ರೇಣುಕಾದೇವಿ, ಸೊನ್ನ ಪಿಡಿಒ ಬಿ.ಆರ್.ಪಾಟೀಲ, ಗ್ರಾಮಸ್ಥ ರಾದ ರಾಮಚಂದ್ರ ಧರೇನ್, ವಿಜಯಕುಮಾರ ಬಿರಾದಾರ, ಸಿದ್ಧು ಆಂದೋಲಾ ಹಾಗೂ ಸೊನ್ನ ಗ್ರಾಮಸ್ಥರು ಪಾಲ್ಗೊಂಡಿದ್ದರು. ಸೊನ್ನ ಗ್ರಾ.ಪಂ. ಕಾರ್ಯದರ್ಶಿ ಉಮ್ಮನಗೌಡ ಹಿರೇಗೌಡ ಸ್ವಾಗತಿಸಿದರು. ಮಲ್ಲಿಕಾರ್ಜುನ ಬಿರಾದಾರ ನಿರೂಪಿಸಿ ದರು. ವೈ.ಜಿ.ಮಾಲಿಪಾಟೀಲ ಪ್ರಾಸ್ತಾವಿಕ ವಾಗಿ ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್
MUST WATCH
ಹೊಸ ಸೇರ್ಪಡೆ
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ