ವ್ಯಾಕ್ಸಿನೇಶನ್‌; ಗುರಿ ತಲುಪಲು ಹರಸಾಹಸ!


Team Udayavani, Oct 28, 2021, 2:06 PM IST

18vaccine

ಮಸ್ಕಿ: ಕೋವಿಡ್‌-19 ಮೊದಲ ಮತ್ತು ಎರಡನೇ ಅಲೆಯಲ್ಲಿ ಉಂಟಾದ ಸಾವು-ನೋವು ಮರುಕಳಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ವ್ಯಾಕ್ಸಿನೇಶನ್‌ ಅಭಿಯಾನ ಆರಂಭವಾಗಿದೆ. ಆದರೆ ಮಸ್ಕಿ ತಾಲೂಕಿನಲ್ಲಿ ಎಲ್ಲರನ್ನೂ ವ್ಯಾಕ್ಸಿನ್‌ ವ್ಯಾಪ್ತಿಗೆ ತರಲು ಹರಸಾಹಸ ನಡೆದಿದೆ!.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸೇರಿ ಸ್ಥಳೀಯ ಸಂಸ್ಥೆಗಳನ್ನು ಒಳಗೊಂಡಂತೆ ತಾಲೂಕು ಆಡಳಿತವೇ ಖುದ್ದು ಮನೆ-ಮನೆಗೆ ತೆರಳಿ ಲಸಿಕೆ ಕುರಿತು ಅಭಿಯಾನ ನಡೆಸಿದೆ. ಆಶಾ-ಅಂಗನವಾಡಿ ಕಾರ್ಯಕರ್ತೆಯರು, ವೈದ್ಯರು, ಸಿಬ್ಬಂದಿ ಸೇರಿ ಸ್ವತಃ ಎಸಿ, ತಹಶೀಲ್ದಾರ್‌ಗಳೇ ಬೀದಿಗಿಳಿದು ಆಂದೋಲನ ನಡೆಸಿದ್ದಾರೆ.

ಮನೆ- ಮನೆಗೂ ತೆರಳಿ ವ್ಯಾಕ್ಸಿನ್‌ ಹಾಕಿಸಿಕೊಳ್ಳಲು ಕರೆ ನೀಡುತ್ತಿದ್ದಾರೆ. ಆದರೂ ಕೋವಿಡ್‌ ಲಸಿಕೆ ಕುರಿತು ಜನರಲ್ಲಿ ಇನ್ನೂ ಜಾಗೃತಿ ಬಾರದಾಗಿದ್ದು, ಲಸಿಕೆ ಹಾಕಿಸಿಕೊಳ್ಳಲು ಹಿಂದೇಟು ಹಾಕುತ್ತಿರುವ ಪ್ರಸಂಗಗಳು ನಡೆಯುತ್ತಿವೆ.

ಬಾಕಿ ಬೆಟ್ಟದಷ್ಟು

ತಾಲೂಕಿನಲ್ಲಿ ಕೋವಿಡ್‌ ಕುರಿತಾಗಿ ಕೋವಿಶೀಲ್ಡ್‌, ಕೋವ್ಯಾಕ್ಸಿನ್‌ ಲಸಿಕೆ ಹಾಕಿದ್ದಕ್ಕಿಂತ ಹೆಚ್ಚಾಗಿ ಇನ್ನು ಹಾಕಿಸಿಕೊಳ್ಳುವವರ ಸಂಖ್ಯೆಯೇ ಬೆಟ್ಟದಷ್ಟಿದೆ. ತಾಲೂಕು ವ್ಯಾಪ್ತಿಯ ತೋರಣದಿನ್ನಿ, ಸಂತೆಕಲ್ಲೂರು, ಬಳಗಾನೂರು, ಮಸ್ಕಿ, ಮೆದಕಿನಾಳ, ಪಾಮನಕಲ್ಲೂರು ಹೋಬಳಿ ಒಳಗೊಂಡಿದ್ದು, ಒಟ್ಟು 1,96,550 ಜನರಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಇದರಲ್ಲಿ ಸದ್ಯ ಇದುವರೆಗೆ ಮೊದಲ ಡೋಸ್‌ ಪಡೆದುಕೊಂಡ ಜನರ ಸಂಖ್ಯೆ 82,422ರ ಗಡಿ ದಾಟಿದೆ. ಎರಡನೆ ಡೋಸ್‌ 31,396 ಜನರು ಪಡೆದಿದ್ದಾರೆ. ಆದರೆ ಒಟ್ಟು ವ್ಯಾಕ್ಸಿನೇಷನ್‌ ಗುರಿ ಪೈಕಿ ಮೊದಲ ಡೋಸ್‌ ಶೇ.67.83, ಎರಡನೇ ಡೋಸ್‌ ಶೇ.25.83 ಜನರನ್ನು ಲಸಿಕೆ ವ್ಯಾಪ್ತಿಗೆ ತರಲಾಗಿದೆ. ಇನ್ನುಳಿದ ಜನರಿಗೆ ಲಸಿಕೆ ನೀಡಲು ತಾಲೂಕು ಆಡಳಿತ ಹೈರಾಣಾಗಿದೆ.

ಇದನ್ನೂ ಓದಿ: ಚಿತ್ರದುರ್ಗ: ಎಸಿಬಿ ಬಲೆಗೆ ಬಿದ್ದ ಪ್ರಭಾರಿ ಆಹಾರ ಸಂರಕ್ಷಣಾಧಿಕಾರಿ

ಸಂವಹನ ಕೊರತೆ

ವ್ಯಾಕ್ಸಿನೇಶನ್‌ ಪ್ರಕ್ರಿಯೆಯಲ್ಲಿ ಕೆಲವು ಇಲಾಖೆ ಆಸಕ್ತಿ ತೋರಿ ಆ್ಯಕ್ಟಿವ್‌ ಆಗಿ ಪಾಲ್ಗೊಳ್ಳುತ್ತಿದ್ದರೆ, ಇನ್ನು ಕೆಲ ಇಲಾಖೆಗಳು ಬೇಕಾಬಿಟ್ಟಿ ತೊಡಗಿಸಿಕೊಳ್ಳುವಿಕೆ ಕಂಡು ಬರುತ್ತಿದೆ. ಇದೇ ಕಾರಣಕ್ಕಾಗಿಯೇ ಲಸಿಕೆ ಅಭಿಯಾನಕ್ಕೆ ಹಿನ್ನಡೆಯಾಗುತ್ತಿದೆ ಎನ್ನುವ ಅಂಶ ಸ್ವತಃ ಅಧಿಕಾರಿಗಳ ವಲಯದಲ್ಲಿಯೇ ಕೇಳಿ ಬರುತ್ತಿದೆ. ಇಲಾಖೆಗಳ ನಡುವಿನ ಸಂವಹನ ಕೊರತೆ ಎದ್ದು ಕಾಣುತ್ತಿದ್ದು, ಸ್ಥಳೀಯ ಸಂಸ್ಥೆಗಳು, ಶಿಕ್ಷಣ ಇಲಾಖೆ ಸರಿಯಾಗಿ ಪಾಲ್ಗೊಳ್ಳುತ್ತಿಲ್ಲ ಎನ್ನುವ ಆರೋಪಗಳಿವೆ. ಕೇವಲ ಆರೋಗ್ಯ ಇಲಾಖೆ ನರ್ಸ್‌ಗಳು, ಆಶಾ- ಅಂಗನವಾಡಿ ಕಾರ್ಯಕರ್ತೆಯರು ಮಾತ್ರ ಇದರಲ್ಲಿ ಹೆಚ್ಚಾಗಿ ಪಾಲ್ಗೊಂಡಿದ್ದಾರೆ. ಸ್ಥಳೀಯ ಸಂಸ್ಥೆ (ಪುರಸಭೆ, ಪಪಂ, ಗ್ರಾಪಂ) ಅಧಿಕಾರಿಗಳು, ಮೇಲುಸ್ತುವಾರಿ ಹೊತ್ತವರ ಗೈರು ಎದ್ದು ತೋರುತ್ತಿದೆ. ಎಸಿ, ತಹಶೀಲ್ದಾರ್‌ ದರ್ಜೆಯ ಅಧಿಕಾರಿಗಳು ಫಿಲ್ಡ್‌ಗೆ ಇಳಿದಾಗ ಮಾತ್ರ ವೇಗ ಪಡೆಯುವ ಲಸಿಕೆ ಅಭಿಯಾನ ಬಳಿಕ ಪುನಃ ವೇಗ ತಗ್ಗಿಸಿಕೊಳ್ಳಲಿದೆ. ಇದೇ ಕಾರಣಕ್ಕೆ ಸಂಪೂರ್ಣ ಗುರಿ ಮುಟ್ಟುವಲ್ಲಿ ವಿಳಂಬವಾಗುತ್ತಿದೆ ಎನ್ನುವ ಅಂಶ ಬೆಳಕಿಗೆ ಬಂದಿದೆ.

ಮಸ್ಕಿ ಪಟ್ಟಣ ಸೇರಿ ಗ್ರಾಮೀಣ ಭಾಗದಲ್ಲಿ ಪ್ರತಿ ಮನೆ-ಮನೆಗೂ ತೆರಳಿ ಲಸಿಕೆ ಪಡೆಯಲು ಮನವಿ ಮಾಡುತ್ತಿದ್ದೇವೆ. ಆದರೆ ಜನರಲ್ಲಿ ಜಾಗೃತಿ ಕೊರತೆ ಕಾರಣ ಸಂಪೂರ್ಣ ಲಸಿಕೆ ಹಾಕಲು ವಿಳಂಬವಾಗುತ್ತಿದೆ. ಸಾರ್ವಜನಿಕರೂ ಸಹ ಸ್ಪಂದಿಸುತ್ತಿದ್ದಾರೆ. ಕ್ರಮೇಣವಾಗಿ ಸಂಪೂರ್ಣ ಗುರಿ ಈಡೇರುವ ಭರವಸೆ ಇದೆ. -ಕವಿತಾ. ಆರ್‌, ತಹಶೀಲ್ದಾರ್‌

-ಮಲ್ಲಿಕಾರ್ಜುನ ಚಿಲ್ಕರಾಗಿ

ಟಾಪ್ ನ್ಯೂಸ್

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ

Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ಆಚರಣೆ

Kalaburagi; ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ಆಚರಣೆ

5-kalburgi

PM Modi: ಕಲಬುರಗಿಗೆ ಇಂದು ಪ್ರಧಾನಿ ನರೇಂದ್ರ ಮೋದಿ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

Sandalwood; ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

MASOCON

MASOCON: ಕೆಎಂಸಿಯಲ್ಲಿ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ 2024

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.