ವಚನ ಸಾಹಿತ್ಯ ವೈಚಾರಿಕ ಕುಸುಮ: ಡಾ| ಇಂದುಮತಿ


Team Udayavani, Jan 22, 2018, 10:27 AM IST

gul-2.jpg

ಕಲಬುರಗಿ: ಕಾಯಕ, ದಾಸೋಹ, ವೃತ್ತಿ ಗೌರವ, ಸ್ತ್ರೀಪರ ಧೋರಣೆ, ಜಾತಿ ವಿಮೋಚನೆಯಂತಹ ಆಶಯಗಳನ್ನು ಹೊತ್ತ ವಚನ ಸಾಹಿತ್ಯ ಸ್ವತಂತ್ರವಾಗಿ ಅಚ್ಚಕನ್ನಡದಲ್ಲಿ ಅರಳಿದ ವೈಚಾರಿಕ ಕುಸುಮವಾಗಿದೆ ಎಂದು ಸಮ್ಮೇಳನದ
ಸರ್ವಾಧ್ಯಕ್ಷೆ ಡಾ| ಇಂದುಮತಿ ಪಿ.ಪಾಟೀಲ ಹೇಳಿದರು.

ರವಿವಾರ ನಗರದ ಶಹಾಬಜಾರದ ಸುಲಫಲ ಮಠದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ವೇದಿಕೆಯಡಿ ಕರ್ನಾಟಕ ವಚನ ಸಾಹಿತ್ಯ ಅಕಾಡೆಮಿ ಹಮ್ಮಿಕೊಂಡ ನಾಲ್ಕನೇ ರಾಜ್ಯ ಮಟ್ಟದ “ವಚನ ಸಾಹಿತ್ಯ ಸಮ್ಮೇಳನ-2018’ದ ಸರ್ವಾಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಾವಿಂದು ವೈಜ್ಞಾನಿಕ ಯುಗದಲ್ಲಿದ್ದರೂ ಮತ್ತೆ ಮೌಡ್ಯದ ಕಡೆಗೆ ವಾಲುತ್ತಿರುವುದನ್ನು ಕಂಡು ಮರುಕ ಉಂಟಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಮಾಜಿ ಕಾರ್ಮಿಕ ಸಚಿವ ಎಸ್‌.ಕೆ. ಕಾಂತಾ, ಮೂರ್ತಿಪೂಜೆಯನ್ನು ಖಂಡಿಸಿ
ಏಕದೇವೋಪಾಸನೆ ಸಾರಿದ ಶರಣರನ್ನೇ ಮೂರ್ತಿಯನ್ನಾಗಿ ಮಾಡಿ ಪೂಜಿಸುತ್ತಿರುವುದು ಶರಣರಿಗೆ ನಾವು ಮಾಡುವ ಅಪಮಾನವಾಗಿದೆ. ಶರಣ ಸಾಹಿತ್ಯವನ್ನು ಬಾಯಿಪಾಠ ಮಾಡುವುದಕ್ಕಿಂತ ಬದುಕಿನ ಪಾಠವಾಗಿ ಅರಿತು ನಡೆಯಬೇಕಾದ ಅನಿವಾರ್ಯತೆ ಇಂದಿದೆ ಎಂದು ನುಡಿದರು.

ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಸಾರಂಗಮಠದ ಜಗದ್ಗುರು ಡಾ| ಸಾರಂಗಧರ ದೇಶಿಕೇಂದ್ರ ಮಹಾಸ್ವಾಮೀಜಿ ಮಾತನಾಡಿ, ವಿಶ್ವ ಸಾಹಿತ್ಯಕ್ಕೆ ವಚನದ ಕೊಡುಗೆ ಅಪಾರವಾಗಿದೆ. ರಾಜ ಮಹಾರಾಜರು ಕಟ್ಟಿದ
ಕೋಟೆ ಕೊತ್ತಲು ಹಾಳಾಗಿ ಹೋಗಿವೆ. ಆದರೆ ಇದಕ್ಕೂ ಮೊದಲಿನ ಬಸವಾದಿ ಶರಣರು ನೀಡಿದ ವಚನ ಸಾಹಿತ್ಯ ಇಂದಿಗೂ ಸಮಾಜದ ನಿರ್ಮಾಣದಲ್ಲಿ ತೊಡಗಿದೆ ಎಂದು ಹೇಳಿದರು. 

ಅಕಾಡೆಮಿ ಅಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ ಪ್ರಾಸ್ತಾವಿಕ ಮಾತನಾಡಿದರು. ಜಮಖಂಡಿಯ ಖ್ಯಾತ ಪ್ರವಚನಕಾರ ಡಾ| ಈಶ್ವರ ಮಂಟೂರ ಮಾತನಾಡಿ, ಇಡೀ ಸಮಾಜ ಅಂಧಕಾರ ಹಾಗೂ ಮೂಢನಂಬಿಕೆಯಲ್ಲಿ ಮುಳುಗಿದ್ದಾಗ ಸಮುದಾಯವನ್ನೇ ಮೂಢನಂಬಿಕೆಯ ಸಂಕೋಲೆಯಿಂದ ಜನರನ್ನು ಹೊರತರಲು ಮಹಾಮಾನವತಾಬಾದಿ ಬಸವಣ್ಣನವರು ಪ್ರಯತ್ನಿಸಿದರು ಎಂದು ಹೇಳಿದರು.
 
ಸ್ವಾಗತ ಸಮಿತಿ ಅಧ್ಯಕ್ಷ ರಾಜಕುಮಾರ ಕಪನೂರ, ಕಾರ್ಯಾಧ್ಯಕ್ಷ ಸಂತೋಷ ಬಿಲಗುಂದಿ, ಗೌರವಾಧ್ಯಕ್ಷರಾದ
ಕಲ್ಯಾಣಕುಮಾರ ಶೀಲವಂತ, ಶಿವಲೀಲಾ ಡಾ| ಸುರೇಶ ಸಜ್ಜನ ಮಾತನಾಡಿದರು. ಉದ್ಯಮಿ ಮಲ್ಲಿಕಾರ್ಜುನ ಖೇಮಜಿ “ವಚನ ಸಿರಿ’ ಎಂಬ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿದರು.
 
ಅಕಾಡೆಮಿಯ ದಿನದರ್ಶಿಕೆ ಮಾಜಿ ಮೇಯರ್‌ ಸಂಜಯಸಿಂಗ್‌ ಬಿಡುಗಡೆ ಮಾಡಿದರು. ನಂತರ ನಡೆದ ಪೊರೆ ಕಳಚುವ ಪರಿಯಲ್ಲಿ ವಚನ ಸಂವಿಧಾನ ಎಂಬ ವಿಷಯದ ಕುರಿತು ಶರಣ ಸಾಹಿತಿ ವಿಶ್ವಾರಾಧ್ಯ ಸತ್ಯಂಪೇಟೆ ಮಾತನಾಡಿದರು. ಎಚ್‌.ಕೆ.ಸಿ.ಸಿ.ಐ. ಅಧ್ಯಕ್ಷ ಸೋಮಶೇಖರ ಟೆಂಗಳಿ, ಅನೀಲ ಟೆಂಗಳಿ, ಹಿರಿಯ ಸಾಹಿತಿ ಚಂದ್ರಶೇಖರ ಆನೆಗುಂದಿ
ಮುಂತಾದವರಿದ್ದರು. 

ಗೋದುತಾಯಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ| ನೀಲಾಂಬಿಕಾ ಪೊಲೀಸ್‌ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಇದಕ್ಕೂ ಮುಂಚೆ ಶರಣರ ಛದ್ಮವೇಷ ಧರಿಸಿದ್ದ ಉಪಳಾಂವನ ಶ್ರೀರಾಮ ಕನ್ನಡ ಕಾನ್ವೆಂಟ್‌ ಶಾಲೆಯ ಮಕ್ಕಳು, ಸಮ್ಮೇಳನಾಧ್ಯಕ್ಷರನ್ನು ಮೆರವಣಿಗೆ ಮೂಲಕ ಸಮಾರಂಭದ ವೇದಿಕೆಗೆ ಕರೆ ತಂದರು.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.