ವೀರಭದ್ರೇಶ್ವರ ಕೋ ಆಪರೇಟಿವ್ಗೆ ಭಾರತೀಯ ರಿಜರ್ವ್ ಬ್ಯಾಂಕ್ನಿಂದ ಪ್ರಶಂಸೆ
Team Udayavani, Sep 21, 2022, 2:04 PM IST
ಚಿಂಚೋಳಿ: ಪಟ್ಟಣದ ಶ್ರೀ ವೀರಭದ್ರೇಶ್ವರ ಕೋ-ಆಪರೇಟಿವ್ ಬ್ಯಾಂಕ್ ಕಳೆದ 25 ವರ್ಷಗಳಿಂದ ಉತ್ತಮ ಸೇವೆ ಸಲ್ಲಿಸುತ್ತಿದ್ದು, ಭಾರತೀಯ ರಿಜರ್ವ್ ಬ್ಯಾಂಕ್ ಪ್ರಶಂಸೆಗೆ ಪಾತ್ರವಾಗಿ “ಎ’ ಗ್ರೇಡ್ ಪಡೆದಿದೆ ಎಂದು ಬ್ಯಾಂಕ್ ಅಧ್ಯಕ್ಷ ಬಸವರಾಜ ಮಲಿ ಹೇಳಿದರು.
ಪಟ್ಟಣದ ಹಾರಕೂಡ ಚೆನ್ನಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಶ್ರೀ ವೀರಭದ್ರೇಶ್ವರ ಕೋ-ಆಪರೇಟಿವ್ ಬ್ಯಾಂಕಿನ 2021-22ನೇ ಸಾಲಿನ ವಾರ್ಷಿಕ ಮಹಾಸಭೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಾಜಿ ಮುಖ್ಯಮಂತ್ರಿ ದಿ|ವೀರೇಂದ್ರ ಪಾಟೀಲ ಈ ಬ್ಯಾಂಕ್ನ ಮೊದಲ ಸದಸ್ಯತ್ವ ಪಡೆದಿದ್ದರು. ಅವರು ನೀಡಿದ ಮಾರ್ಗದರ್ಶನದಲ್ಲಿ ಯಾವುದೇ ಅವ್ಯವಹಾರ ಇಲ್ಲದೇ ನಿಷ್ಠೆಯಿಂದ ಬ್ಯಾಂಕ್ ಆಡಳಿತ ಮಂಡಳಿ, ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದೆ ಎಂದರು.
ಶ್ರೀ ವೀರಭಧ್ರೇಶ್ವರ ಕೋ-ಆಪರೇಟಿವ್ ಬ್ಯಾಂಕ್ ಕೇವಲ 21ಲಕ್ಷ ರೂ.ಗಳಿಂದ ತನ್ನ ಕಾರ್ಯ ಪ್ರಾರಂಭಿಸಿ ಈಗ 7.24ಕೋಟಿ ರೂ.ವ್ಯವಹಾರ ನಡೆಸುತ್ತಿದೆ. 5.85ಕೋಟಿ ರೂ. ಸಾಲ ವ್ಯವಹಾರ ನಡೆಸುತ್ತಿದ್ದು, ಆರ್ಬಿಐ 1.81ಕೋಟಿ ರೂ. ಡಿಪಾಜಿಟ್ ಮಾಡಲಾಗಿದೆ ಎಂದು ವಿವರಿಸಿದರು. ಮುಖಂಡರಾದ ರೇವಣಸಿದ್ಧಪ್ಪ ಮರಪಳ್ಳಿ, ಶಾಂತವೀರ ಹೀರಾಪೂರ, ಮಲ್ಲಿಕಾರ್ಜುನ ಹಡಪದ ಬ್ಯಾಂಕಿನ ಲೆಕ್ಕಪತ್ರಗಳನ್ನು ತಿಳಿಸುವಂತೆ ಅಧ್ಯಕ್ಷರಿಗೆ ಒತ್ತಾಯಿಸಿದರು.
2021-22ನೇ ಸಾಲಿನ ವಾರ್ಷಿಕ ಲೆಕ್ಕಪತ್ರವನ್ನು ವ್ಯವಸ್ಥಾಪಕ ನಾಗಶೆಟ್ಟಿ ಮನ್ನಳ್ಳಿ ಓದಿದರು. ಉಪಾಧ್ಯಕ್ಷ ಸುಭಾಷ ಸೀಳಿನ, ಬಸವಣ್ಣಪಾಟೀಲ, ನಾಗರಾಜ ಕಲಬುರಗಿ, ಜಗನ್ನಾಥರೆಡ್ಡಿ ಪೋಂಗಾ, ಶರಣಪ್ಪ ಪುಣ್ಯಶೆಟ್ಟಿ, ಮಹಮ್ಮದ್ ಯೂಸೂಫ್ ಅಲಿ, ಶರಣಪ್ಪ ಪೂಜಾರಿ, ಸುಭಾಶ್ಚಂದ್ರ ಎಂಪಳ್ಳಿ, ಮಲ್ಲೇಶ್ವರಿ ಜಾಬಶೆಟ್ಟಿ, ಶಿವಪುತ್ರಪ್ಪ ಸೀಳಿನ, ಬಸವರಾಜ ಯಾಲಾಲ್, ಜಗನ್ನಾಥ ಅಗ್ನಿಹೋತ್ರಿ ಇದ್ದರು. ನಾಗಶೆಟ್ಟಿ ನಿರೂಪಿಸಿದರು, ಸುಭಾಷ ಸೀಳಿನ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ