ವೀರಭದ್ರೇಶ್ವರ ಜಾತ್ರೋತ್ಸವ ವೈಭವ


Team Udayavani, Jan 26, 2018, 1:13 PM IST

gul-7.jpg

ಹುಮನಾಬಾದ: ಪಟ್ಟಣದ ಕುಲದೇವ ವೀರಭದ್ರೇಶ್ವರ ಜಾತ್ರೆ ನಿಮಿತ್ತ ಪಟ್ಟಣದಲ್ಲಿ ಹಬ್ಬದ ವಾತಾವರಣ ನಿರ್ಮಾಣಗೊಂಡಿದ್ದು, ಭಕ್ತರ ಗಮನ ಸೆಳೆಯುವಂತಾಗಿದೆ. ಹೈದ್ರಾಬಾದ ಕರ್ನಾಟಕ ಭಾಗದ ಪ್ರಮುಖ ಜಾತ್ರೆ ಎಂದು ಖ್ಯಾತಿ ಪಡೆದ ವೀರಭದ್ರೇಶ್ವರ ಜಾತ್ರೆ ಜ.14ರಿಂದ ಆರಂಭಗೊಂಡಿದ್ದು, ಜ.27ರ ವರೆಗೆ ನಡೆಯಲಿದೆ. ಆ.24ರಂದು ರಾತ್ರಿ ನಡೆದ ಕಾಶಿ ಮೆರವಣಿಗೆ ಭಕ್ತರಲ್ಲಿ ಶ್ರದ್ಧೆ ಭಕ್ತಿ ಮೂಡಿಸಿತು. ಕಾಶಿ ಮೆರವಣಿಗೆ ಬುಧವಾರ ಮಧ್ಯರಾತ್ರಿ
1ಗಂಟೆ ದೇವಸ್ಥಾನದಿಂದ ಹೊರಟು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಗುರುವಾರ ಮಧಾಹ್ನ ದೇವಸ್ಥಾನಕ್ಕೆ
ತಲುಪ್ಪಿತು.

ಗುರುವಾರ ಬೆಳಗಿನ ಜಾವದಿಂದ ಪಟ್ಟಣದ ಮಹಿಳೆಯರು ಅಗ್ನಿ ಕುಂಡಕ್ಕೆ ತೆರಳಿ ನೀರು ಎರೆದು ನೈವೇದ್ಯ ಸಲ್ಲಿಸಿದರು. ಮಧ್ಯಾಹ್ನ ದವರೆ ಸಾವಿರಾರು ಮಹಿಳೆರು ಅಗ್ನಿ ಕುಂಡಕ್ಕೆ ವಿಶೇಷ ಪೂಜೆ ನೆರೆವರಿಸಿದರು. ನಂತರ ದೇವಸ್ಥಾನ ದಿಂದ ರಥದ ಕಳಸವನ್ನು ತೇರು ಮೈದಾನಕ್ಕೆ ತಲುಪಿಸಿ ರಥಕ್ಕೆ ಅಳವಡಿಸಲಾಯಿತು.

ವಾಹನ ನಿಲುಗಡೆ: ಜಾತ್ರೆಗೆ ಆಗಮಿಸುವ ಭಕ್ತಾದಿಗಳ ವಾಹನಗಳಿಗೆ ಪಟ್ಟಣದಲ್ಲಿ ಪ್ರವೇಶ ನಿಷೇಧಿಸಲಾಗಿದ್ದು,
ವಾಹನದಲ್ಲಿ ಪಟ್ಟಣಕ್ಕೆ ಆಗಮಿಸುವ ಭಕ್ತರಿಗಾಗಿ ವಿಶೇಷ ನಿಲುಗಡೆ ವ್ಯವಸ್ಥೆಯನ್ನು ಪೊಲೀಸ್‌ ಇಲಾಖೆ ಮಾಡಿದೆ.
ಬೀದರ ಕಡೆಯಿಂದ ಬರುವ ಭಕ್ತರಿಗಾಗಿ ಮಿನಿ ವಿಧಾನ ಸೌಧ ಪ್ರಾಂಗಣದಲ್ಲಿ ವಾಹನ ನಿಲುಗಡೆ ಸ್ಥಳ ಮಾಡಲಾಗಿದೆ.

ಹಾಗೂ ಕಲಬುರಗಿ ಕಡೆಯಿಂದ ಬರುವ ಭಕ್ತರು ಕಲ್ಲೂರ್‌ ರಸ್ತೆಯಲ್ಲಿನ ವಡ್ಡರ ಮೈದಾನದಲ್ಲಿ, ಹೈದ್ರಾಬಾದ ಕಡೆಯಿಂದ
ಬರುವ ಭಕ್ತರಿಗೆ ರಾಮ ಮತ್ತು ರಾಜ ಕಾಲೇಜು ಪ್ರಾಂಗಣದಲ್ಲಿ ವಾಹನ ನಿಲ್ಲಿಸಲು ವ್ಯವಸ್ಥೆ ಕಲ್ಪಿಸಲಾಗಿದೆ. ಜ.26 ಮತ್ತು 27ರಂದು ಯಾವುದೇ ವಾಹನಗಳು ಪಟ್ಟಣ ಪ್ರವೇಶಿಸದಂತೆ ಪೊಲೀಸ್‌ ಇಲಾಖೆ ಸೂಕ್ತ ಎಚ್ಚರಿಕೆ ವಹಿಸಿದೆ.

ಬಿಗಿ ಪೊಲೀಸ್‌ ಬಂದೋಬಸ್ತ್: ಜಾತ್ರೆಯಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಜಿಲ್ಲಾ ಪೊಲೀಸ್‌ ಅಧಿಕಾರಿಗಳು
ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ. ಅನೇಕ ಮಾರ್ಗ ಸೂಚಿಗಳನ್ನು ತಯಾರಿಸಿ ಅದರಂತೆ ಕಾರ್ಯ
ಪ್ರವೃತ್ತರಾಗಿದ್ದಾರೆ. ದೇವಸ್ಥಾನದ ಹತ್ತಿ, ನಾಟಕ ಕಂಪನಿಗಳ ಹತ್ತಿರ, ಬಸವೇಶ್ವರ ವೃತ್ತ, ಸರದಾರ ಪಟೇಲ್‌ ವೃತ್ತ,
ಅಂಬೇಡ್ಕರ್‌ ವೃತ್ತ ಹಾಗೂ ಅಗ್ನಿ ಕುಂಡದ ಹತ್ತಿರ ಎತ್ತರದ ಟವರ್‌ಗಳನ್ನು ನಿರ್ಮಿಸಿ ವಿಡಿಯೋ ಕ್ಯಾಮರಾಗಳನ್ನು
ಅಳವಡಿಸಲಾಗಿದೆ. ಅಲ್ಲದೇ ಕಳ್ಳರ ಚಲನವಲನಗಳ ನಿಗಾವಹಿಸಲು 32ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.

ಅಲ್ಲದೇ ಡ್ರೋಣ್‌ ಮೂಲಕ ಸಾರ್ವಜನಿಕರ ಮೇಲೆ ಪೊಲೀಸ್‌ ಇಲಾಖೆ ನಿಗಾ ವಹಿಸುತ್ತಿದೆ. ಮಹಿಳೆಯರು
ಬಂಗಾರದ ಆಭರಣಗಳು ಹಾಕಿಕೊಂಡು ಜಾತ್ರೆಗೆ ಬರದಂತೆ ಪೊಲೀಸ್‌ ಇಲಾಖೆ ತಿಳಿಸಿದ್ದು, ಅಪರಾಧ ವಿಭಾಗಗಳ ಗಸ್ತು ಹೆಚ್ಚಿಸಿ ನೆರೆ ರಾಜ್ಯಗಳ ಸಿಬ್ಬಂದಿಗಳನ್ನು ಕರೆಸಲಾಗಿದೆ.

ಪುರಸಭೆ ವ್ಯವಸ್ಥೆ: ಜಾತ್ರೆಗೆ ಹರಿದು ಬರುವ ಲಕ್ಷಾಂತರ ಜನರಿಗೆ ಸ್ಥಳೀಯ ಪುರಸಭೆ ವತಿಯಿಂದ ವಿಶೇಷ
ವ್ಯವಸ್ಥೆ ಕಲ್ಪಿಸಲಾಗಿದೆ. ದೇವಸ್ಥಾನದಿಂದ ತೇರು ಮೈದಾನದ ವರೆಗೆ ಕುಡಿಯುವ ನೀರಿನ ವ್ಯವಸ್ಥೆ, ತೇರು
ಮೈದಾನ ಹಾಗೂ ಬಸವೇಶ್ವರ ವೃತ್ತದಲ್ಲಿ ಮೊಬೈಲ್‌ ಶೌಚಾಲಯ ಅಳವಡಿಸಲಾಗಿದೆ. ಜಾತ್ರೆಯಲ್ಲಿ ಸ್ವತ್ಛತೆ
ಕಾಪಾಡುವ ನಿಟ್ಟಿನಲ್ಲಿ ಪೌರ ಕಾರ್ಮಿಕ ಸಿಂಬ್ಬಂದಿ ನೇಮಿಸಿಕೊಳ್ಳಲಾಗಿದೆ.

ದಾಸೋಹ ವ್ಯವಸ್ಥೆ: ಜಾತ್ರೆಗೆ ಆಗಮಿಸುವ ಭಕ್ತರಿಗಾಗಿ ವಿವಿಧೆಡೆ ದಾಸೋಹ ವ್ಯವಸ್ಥೆ ಕಲ್ಪಿಸಲಾಗಿದೆ. ದೇವಸ್ಥಾನ
ಹಿಂಭಾಗದಲ್ಲಿ, ಜೈನಗಲ್ಲಿ, ಬಾಲಾಜಿ ವೃತ್ತ, ಪ್ರವಾಸಿ ಮಂದಿರ ಹತ್ತಿರ, ಬಸ್‌ ನಿಲ್ದಾಣದ ಎದುರಿಗೆ, ಎನ್‌ಎಚ್‌-9 ಕಚೇರಿ ಹತ್ತಿರ, ಜೂನಿಯರ್‌ ಕಾಲೇಜು ಹತ್ತಿರ, ಅರಣ್ಯ ಇಲಾಖೆ ಪ್ರಾಂಗಣ, ಹಳೆ ಅಡತ್‌ ಬಜಾರ್‌ನಲ್ಲಿ ದಾಸೋಹ ಹಾಗೂ ಚಹಾ, ತಿಂಡಿ ವ್ಯವಸ್ಥೆ ಮಾಡಲಾಗಿದೆ.

„ದುರ್ಯೋಧನ ಹೂಗಾರ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.