ರಸ್ತೆಗಿಳಿದವರ ದಾಖಲೆ ಪರಿಶೀಲನೆ
Team Udayavani, Jul 16, 2020, 1:47 PM IST
ಕಲಬುರಗಿ: ಮೊದಲ ದಿನ ಹೆಸರಿಗೆ ಮಾತ್ರ ಎಂಬಂತೆ ಇದ್ದ ಲಾಕ್ಡೌನ್ ಬುಧವಾರ ಕಟ್ಟುನಿಟ್ಟಾಗಿ ಅನುಷ್ಠಾನಗೊಂಡಿತ್ತು. ಜಿಲ್ಲೆಯಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೋವಿಡ್ ಸೋಂಕಿಗೆ ಕಡಿವಾಣ ಹಾಕಲು ಜಿಲ್ಲಾಡಳಿತ ಮಂಗಳವಾರದಿಂದ ಒಂದು ವಾರ ಲಾಕ್ಡೌನ್ ಮುದ್ರೆ ಹಾಕಿದೆ.
ಸೋಮವಾರ ತಡರಾತ್ರಿ ಆದೇಶ ಹೊರಡಿಸಿದ್ದರಿಂದ ಮಂಗಳವಾರ ಸಂಜೆಯವರೆಗೆ ಲಾಕ್ಡೌನ್ ಸರಿಯಾಗಿ ಅನುಷ್ಠಾನಗೊಂಡಿರಲ್ಲ. ತದ ನಂತರದಲ್ಲಿ ಜನ ಸಂಚಾರ ವಿರಳವಾಗಿತ್ತು. ಬುಧವಾರ ಬೆಳಗ್ಗೆಯಿಂದ ಸಂಪೂರ್ಣವಾಗಿ ಲಾಕ್ ಡೌನ್ ಜಾರಿಗೆ ಬಂತು. ನಗರಾದ್ಯಂತ ಅಂಗಡಿ, ಮುಂಗಟ್ಟುಗಳು ತೆರದಿರುವುದು ಕಂಡುಬಂದಿಲ್ಲ. ಸೂಪರ್ ಮಾರ್ಕೆಟ್, ಕಿರಾಣಿ ಬಜಾರ, ಗಂಜ್ ಪ್ರದೇಶ, ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತ, ಜಗತ್ ವೃತ್ತ, ರಾಮ ಮಂದಿರದಲ್ಲಿ ಸೇರಿ ಹಲವೆಡೆ ಜನ ಮತ್ತು ವಾಹನ ಸಂಚಾರ ಕಡಿಮೆ ಇತ್ತು. ಅದರಲ್ಲೂ ಮಂಗಳವಾರ ರಾತ್ರಿಯಿಂದ ಮಳೆ ಸುರಿಯುತ್ತಿದ್ದ ಕಾರಣ ಅನೇಕರು ಹೊರ ಬರಲು ಹೋಗಲಿಲ್ಲ.
ಕೆಲವರು ಲಾಕ್ಡೌನ್ ಮತ್ತು ಮಳೆಯನ್ನೂ ಮೀರಿ ರಸ್ತೆಗಿಳಿದವರಿದ್ದರು. ವಿನಾಕಾರಣ ಮನೆಯಿಂದ ಹೊರ ಬಂದವರಿಗೆ ಪೊಲೀಸರು ಸರಿಯಾಗಿ ಬಿಸಿ ಮುಟ್ಟಿಸಿದರು. ದಿನಸಿ ಅಂಗಡಿಗಳು, ಹಾಲು, ಹಣ್ಣು, ತರಕಾರಿ ಮಾರಾಟ ಹಾಗೂ ಮೆಡಿಕಲ್ ಶಾಪ್ಗ್ಳು ತೆರೆದಿದ್ದವು. ಪೆಟ್ರೋಲ್ ಪಂಪ್ಗ್ಳು ಬೆಳಗ್ಗೆ 8ರಿಂದ ಮಧ್ಯಾಹ್ನ 2ರವರೆಗೆ ಕಾರ್ಯ ನಿರ್ವಹಿಸಿದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ