ವೇಷಗಾರರಿಗೆ ಬೇಕಿದೆ ಶಾಶ್ವತ ನೆಲೆ

ಕಲಾವಿದರಿಗೆ ಬೇಕಿದೆ ಕಾಯಕಲ್ಪ | ಸೂರು-ನೀರಿಗಾಗಿ ನಿತ್ಯ ಅಲೆದಾಟ ತಪ್ಪಿಲ್ಲ

Team Udayavani, Oct 2, 2020, 6:27 PM IST

ವೇಷಗಾರರಿಗೆ ಬೇಕಿದೆ ಶಾಶ್ವತ ನೆಲೆ

ಅಫಜಲಪುರ: ಹಲವು ದಶಕಗಳಿಂದ ನಮ್ಮಲ್ಲಿ ವೇಷಗಾರರ ಪರಂಪರೆ ಇದೆ. ಅವರು ತಮ್ಮದೇ ಶೈಲಿಯಲ್ಲಿ ಹಾಡುಗಳನ್ನು ಕಟ್ಟಿಕೊಂಡು ಊರುರು ಅಲೆಯುತ್ತಾ ಜೀವನ ನಡೆಸುವ ಕಾಯಕ ಮಾಡುತ್ತಾರೆ. ಅವರಿಗೆ ಈಗನೆಲೆ ಬೇಕಾಗಿದೆ. ಅಲ್ಲದೆ ಅವರ ಕಲೆಗೆಬೆಲೆಯೂ ಸಿಗಬೇಕಾಗಿದೆ.

ಹೌದು, ತಾಲೂಕಿನಾದ್ಯಂತ 100ಕ್ಕೂ ಹೆಚ್ಚು ವೇಷಗಾರರ ಕುಟುಂಬಗಳು ವಾಸವಾಗಿವೆ. ಆದರೆ ಅವರಿಗೆ ಸರ್ಕಾರದಿಂದ ಯಾವುದೇ ಸೌಲಭ್ಯಗಳು ಸಿಗುತ್ತಿಲ್ಲ. ಇಷ್ಟು ವರ್ಷ ಊರುರು ಅಲೆದು ಹಾಡು ಹೇಳಿ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದರು. ಕೋವಿಡ್ ವಕ್ಕರಿಸಿದ ಬಳಿಕ ಎಲ್ಲವು ನಿಂತು ಹೋಗಿದೆ. ಹಾಡು ಇಲ್ಲ, ಹೊಟ್ಟೆಪಾಡು ಇಲ್ಲದಂತಾಗಿ ನಡು ನೀರಲ್ಲಿ ನಿಂತ ಪರಿಸ್ಥಿತಿ ಈಗ ವೇಷಗಾರರದ್ದಾಗಿದೆ. ವೇಷಗಾರರಿಗೆ ಬೇಕಿದೆ ಕಾಯಕಲ್ಪ: ವೇಷಗಾರರು ಹೆಚ್ಚೇನು ಓದಿಕೊಂಡವರಲ್ಲ. ಆದರೂತಮ್ಮದೇ ದಾಟಿಯಲ್ಲಿ ಸಾಹಿತ್ಯ  ರಚಿಸಿ ರಾಗಬದ್ದವಾಗಿ ಹಾಡುತ್ತಾರೆ.ಜನರನ್ನು ರಂಜಿಸುತ್ತ ಹೊಟ್ಟೆ ತುಂಬಿಸಿಕೊಳ್ಳುತ್ತಾರೆ. ವಿವಿಧ ವೇಷ ಭೂಷಣ ಧರಿಸಿಕೊಂಡು ಊರುರು ಅಲೆಯುತ್ತಾರೆ. ಇವರು ನಮ್ಮ ಸಂಸ್ಕೃತಿಯ ಅಂಗವಾಗಿದ್ದಾರೆ. ಎಲ್ಲೋ ಒಂದು ಕಡೆ ಗಟ್ಟಿ ನೆಲೆ ನಿಲ್ಲಬೇಕೆಂಬ ಇವರ ಬಯಕೆಗೆ ಭದ್ರ ಬುನಾದಿ ಬೇಕಾಗಿದೆ.

ಸೂರು-ನೀರಿಗಾಗಿ ಅಲೆದಾಟ: ಸದ್ಯ ತಾಲೂಕಿನ ಕರ್ಜಗಿ, ಅಫಜಲಪುರ, ಸ್ಟೆಷನ್‌ ಗಾಣಗಾಪುರ ಮತ್ತು ಚವಡಾಪುರ ಗ್ರಾಮಗಳಲ್ಲಿ ವೇಷಗಾರರಕುಟುಂಬಗಳಿವೆ. ಈ ಕುಟುಂಗಳಿಗೆ ಸರ್ಕಾರದಿಂದ ಯಾವುದೇ ಸೌಲಭ್ಯಗಳು ಸಿಕ್ಕಿಲ್ಲ. ಎಲ್ಲರಿಗೂ ಆಧಾರ್‌ ಕಾರ್ಡ್‌, ರೇಷನ್‌ ಕಾರ್ಡ್‌ ಇವೆ. ಆದರೆ, ವಾಸಕ್ಕೆ ಯೋಗ್ಯವಾದ ಮನೆಗಳಿಲ್ಲ. ಮಳೆ ಬಂದರೆ ಚಾಪೆ ತಲೆ ಮೇಲೆ ಹಿಡಿದುಕೊಂಡು ಮಕ್ಕಳೊಂದಿಗೆ ಬೀದಿಯಲ್ಲಿ ನಿಲ್ಲಬೇಕಾದ ಅನಿವಾರ್ಯತೆ ವೇಷಗಾರರ ಕುಟುಂಬಗಳಿಗೆ ಇದೆ. ಇಂತಹ ಕುಟುಂಬಗಳಿಗೆ ಈಗ ನೀರು, ಸೂರಿನ ಭರವಸೆ ಬೇಕಾಗಿದೆ. ಇನ್ನಾದರೂ ನೊಂದ 100 ಕುಟುಂಬಗಳಿಗೆಅವರಿದ್ದಲ್ಲಿಯೇ ಸೂರು ಕಲ್ಪಿಸಬೇಕಾಗಿದೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಗ್ರಾಪಂ, ತಾಪಂ, ಜಿಪಂ, ಶಾಸಕರು, ಅಧಿಕಾರಿಗಳು ಇವರ ಬೇಡಿಕೆ ಈಡೇರಿಸಲು ಪ್ರಯತ್ನಿಸಬೇಕಾಗಿದೆ.

ವೇಷಗಾರರು ಯಾವ ಪದವಿ ಶಿಕ್ಷಣ ಪಡೆಯದಿದ್ದರೂ ವ್ಯಾಕರಣ ಬದ್ದವಾಗಿ ಪೌರಾಣಿಕ ಕಥೆಗಳನ್ನು, ರಾಗಬದ್ದವಾಗಿ ಹಾಡುತ್ತಾ ಒಂದು ಬಗೆಯ ಸಾಹಿತ್ಯ ಪರಂಪರೆ ಉಳಿಸಿಕೊಂಡು ಬಂದಿದ್ದಾರೆ. ಇಂತಹ ವಿಶೇಷ ಪಂಗಡವನ್ನು ಸರ್ಕಾರ ಉಳಿಸುವ ಕೆಲಸ ಮಾಡಬೇಕು. ಅವರಿಗೆ ಬೇಕಾದ ಸೂಕ್ತ ಸೌಲಭ್ಯಗಳನ್ನು ಸರ್ಕಾರ ಕಲ್ಪಿಸಬೇಕು. -ಡಾ| ಸಂಗಣ್ಣ ಎಂ. ಸಿಂಗೆ ಆನೂರ, ಅಫಜಲಪುರ ತಾಲೂಕು ಜಾನಪದ ಪರಿಷತ್‌ ಅಧ್ಯಕ್ಷ

ಸರ್ಕಾರದಿಂದ ನಮಗೆ ಯಾವುದೇ ಸೌಲಭ್ಯಗಳು ಸಿಗುತ್ತಿಲ್ಲ. ನಮಗೆ ಮೊದಲು ಜಾತಿ ಪ್ರಮಾಣ ಪತ್ರ ನೀಡುತ್ತಿದ್ದರೂ ಈಗ ಕೊಡುತ್ತಿಲ್ಲ. ಕೊವಿಡ್‌ಗಿಂತ ಮೊದಲು ಎಲ್ಲಿಯಾದರೂ ಹಾಡು ಹೇಳಿ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದೇವು. ಆದರೆ ಈಗ ತುತ್ತು ಅನ್ನಕ್ಕೂ ಪರದಾಡುವ ಪರಿಸ್ಥಿತಿ ಬಂದಿದೆ. ಸರ್ಕಾರ, ಸಂಬಂಧಪಟ್ಟವರು ನಮ್ಮ ಕಷ್ಟಕ್ಕೆ ನೆರವಾಗಬೇಕು. – ದತ್ತು ಕಟ್ಟಿಮನಿ, ವೇಷಗಾರರ ಸಮುದಾಯದ ತಾಲೂಕು ಅಧ್ಯಕ್ಷ

 

­-ಮಲ್ಲಿಕಾರ್ಜುನ ಹಿರೇಮಠ

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.