19ರಂದು ಸಮಾಧಾನದಲ್ಲಿ ವಿಜಯದಶಮಿ
Team Udayavani, Oct 15, 2018, 11:27 AM IST
ಕಲಬುರಗಿ: ನಗರದ ಕೆಸರಟಗಿ ರಸ್ತೆಯ ಅಟಲ್ ಬಿಹಾರಿ ವಾಜಪೇಯಿ ಜಿಡಿಎ ಬಡಾವಣೆ ಪಕ್ಕದ ಸಮಾಧಾನದಲ್ಲಿ ಅ. 19ರಂದು ಶುಕ್ರವಾರ ಮಧ್ಯಾಹ್ನ 12:30ಕ್ಕೆ ಮೌನಯೋಗಿ ಜಡೆಯ ಶಾಂತಲಿಂಗ ಮಹಾಸ್ವಾಮಿಗಳ ಸನ್ನಿಧಾನ, ನೇತೃತ್ವದಲ್ಲಿ ವಿಜಯದಶಮಿಯ ಬನ್ನಿ ಮುಡಿಯುವ ಕಾರ್ಯಕ್ರಮ ನಡೆಯಲಿದೆ.
ಇದಕ್ಕೂ ಮುನ್ನ ಬೆಳಗ್ಗೆ 6ಕ್ಕೆ ಕಳೆದ 45 ದಿನಗಳಿಂದ ಸಮಾಧಾನದ ಧ್ಯಾನ ಮಂದಿರದಲ್ಲಿ ನಡೆದು ಬರುತ್ತಿರುವ ಸಹಸ್ರ ರುದ್ರಪಠಣದ ಸಮಾರೋಪ ನಡೆಯಲಿದೆ. ನಂತರ ಬೆಳಗ್ಗೆ 11ಕ್ಕೆ ಗುರು ಮಾಸಾಚರಣೆ ಸಮಾರೋಪ ಹಾಗೂ ಗುರು ವಂದನಾ ಕಾರ್ಯಕ್ರಮ ನಡೆಯಲಿದೆ. ಮಕ್ಕಳು ಹಾಗೂ ಯುವಕರಲ್ಲಿ ಕಳೆದ 10 ವರ್ಷಗಳಿಂದ ವರ್ಷಂಪ್ರತಿ ವಾರಗಳ ಕಾಲ ನಡೆಸಿಕೊಂಡು ಬರುತ್ತಿರುವ ಪುರಾತನ ಸಂಸ್ಕಾರದ ಶಿಬಿರದ ಸಮಾರೋಪವು ಅಕ್ಟೋಬರ್ 17ರಂದು ಮಧ್ಯಾಹ್ನ 2ಕ್ಕೆ ಸಮಾಧಾನದಲ್ಲಿ ನಡೆಯಲಿದೆ.
ದಕ್ಷಿಣ ಭಾರತದಲ್ಲಿಯೇ ಅಪರೂಪವಾಗಿರುವ ಧ್ಯಾನ ಮಂದಿರಕ್ಕೆ ದಿನಾಲು ಧ್ಯಾನಾಸಕ್ತರು ಆಗಮಿಸಿ ಧ್ಯಾನ ಮಾಡುತ್ತಿದ್ದು, ಮಾನಸಿಕ ನೆಮ್ಮದಿ ಕಂಡುಕೊಳ್ಳುತ್ತಿದ್ದಾರೆ. ಮೌನಯೋಗಿಗಳ ಮಾರ್ಗದರ್ಶನದಲ್ಲಿ ಸಮಾಧಾನದ ಗುರುದೇವ ಸೇವಾ ಸಂಸ್ಥೆ ಬರುವ ಭಕ್ತರಿಗೆ ವ್ಯವಸ್ಥೆ ಕಲ್ಪಿಸಲು ಶ್ರಮಿಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ