ಗ್ರಾಮಗಳಿಗೆ ಅಮರ್ಜಾದಿಂದ ನೀರು
Team Udayavani, Mar 10, 2019, 5:58 AM IST
ಮಾದನಹಿಪ್ಪರಗಿ: ಕುಡಿಯುವ ನೀರಿನ ಬರ ಎದುರಿಸುತ್ತಿರುವ ಗ್ರಾಮಗಳಿಗೆ ಅಮರ್ಜಾ ಡ್ಯಾಂನಿಂದ ನೀರು ಹರಿಸಲಾಗುವುದು ಎಂದು ಆಳಂದ ಶಾಸಕ ಸುಭಾಷ ಆರ್. ಗುತ್ತೇದಾರ ಹೇಳಿದರು.
ಎಚ್ಕೆಆರ್ಡಿಬಿ ಯೋಜನೆ ಅನುದಾಡಿಯಲ್ಲಿ ಮಂಜೂರಾದ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಮಾದನ ಹಿಪ್ಪರಗಿಗೆ ಈಗಾಗಲೇ ಕೇರೂರ ಮತ್ತು ಕಾಮನಳ್ಳಿ ಕೆರೆಗಳಿಂದ ನೀರು ಸರಬರಾಜು ಮಾಡಲಾಗುತ್ತಿದ್ದು, ಈ ವರ್ಷ ಕೆರೆಯಲ್ಲಿ ಮತ್ತು ಕೆರೆ ಪಕ್ಕದಲ್ಲಿ ತೋಡಲಾದ ಬಾವಿಗಳಲ್ಲಿ ನೀರು ಬತ್ತಿ ಹೋಗಿರುವದರಿಂದ ನೀರಿನ ಬವಣೆ ತೀವ್ರವಾಗಿದೆ. ಟ್ಯಾಂಕರ್ ಮೂಲಕ ಗ್ರಾಮಗಳಿಗೆ ನೀರು ಪೂರೈಸಿದರೂ ಸಾಕಾಗುತ್ತಿಲ್ಲ. ಸರಕಾರಕ್ಕೆ ಇಲ್ಲಿನ ಸಮಸ್ಯೆ ಮನವರಿಕೆ ಮಾಡಿ ಶಾಶ್ವತ ಕುಡಿಯುವ ನೀರಿನ ಯೋಜನೆ ತಯಾರಿಸಲಾಗುವುದು. ಈ ಸಮಸ್ಯೆ ಬಗೆಹರಿಸಲು ಅಮರ್ಜಾ ನೀರು ತರುವುದೇ ಪರಿಹಾರ ಎಂದು ಹೇಳಿದರು.
ಶ್ರೀ ಶಿವಲಿಂಗೇಶ್ವರ ಮಠದ ಅಭಿನವ ಶಿವಲಿಂಗ ಸ್ವಾಮೀಜಿ ಆಶೀರ್ವಚನ ನೀಡಿದರು. ಎಚ್ಕೆಆರ್ಡಿಬಿ ಅನುದಾನದಲ್ಲಿ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ 20 ಲಕ್ಷ ರೂ. ವೆಚ್ಚದ ಸಭಾಂಗಣ, ಪದವಿ ಪೂರ್ವ ಕಾಲೇಜಿನಲ್ಲಿ 62 ಲಕ್ಷ ರೂ. ವೆಚ್ಚದಲ್ಲಿ ಹೆಚ್ಚುರಿಯಾಗಿ ನಾಲ್ಕು ಕೋಣೆಗಳ ನಿರ್ಮಾಣ, 50 ಲಕ್ಷ ರೂ. ವೆಚ್ಚದದಲ್ಲಿ ಎರಡು ಪ್ರಯೋಗಶಾಲೆ ಕೋಣೆಗಳಿಗೆ ಗುದ್ದಲಿ ಪೂಜೆ ನೆರವೇರಿಸಿದರು.
ಗ್ರಾಪಂ ಉಪಾಧ್ಯಕ್ಷ ಶಿವಲಿಂಗಪ್ಪ ಜಮಾದಾರ, ತಾಲೂಕು ಆಡಳಿತ ವೈದ್ಯಾಧಿಕಾರಿ ಡಾ| ಇರ್ಫಾನ ಅಲಿ, ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ನಾಗೇಂದ್ರಪ್ಪ ಬೆಡಜಿರಗೆ, ತಾ.ಪಂ. ಮಾಜಿ ಅಧ್ಯಕ್ಷ ಶಿವಪ್ಪ ಕೋಳಶೆಟ್ಟಿ, ಮಾಜಿ ಗ್ರಾ.ಪಂ ಅಧ್ಯಕ್ಷ ವಿಶ್ವನಾಥ ಪರೇಣಿ, ಮಹಾರುದ್ರಪ್ಪ ಅರಳಿಮಾರ, ಈರಣ್ಣ ಬಜಾರೆ, ಶಿವಲಿಂಗಪ್ಪ ಮೈಂದರಗಿ, ರಾಜಕುಮಾರ ಕಂಬಾರ, ಶಂಕರೆಪ್ಪ ಮುಗಳಿ ಜಚಜಖೀ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಶೋಕಿಗಾಗಿ ನಕಲಿ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
MUST WATCH
ಹೊಸ ಸೇರ್ಪಡೆ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್