ಪೊಲೀಸರ ಕ್ರಮಕ್ಕೆ ವಿಶ್ವ ಹಿಂದೂ ಪರಿಷತ್ ಖಂಡನೆ
Team Udayavani, Nov 3, 2017, 10:45 AM IST
ಶಹಾಬಾದ: ಜೇವರ್ಗಿ ತಾಲೂಕಿನ ಆಂದೋಲಾದ ಕರುಣೇಶ್ವರ ಮಠದ ಪೂಜ್ಯರಾದ ಸಿದ್ದಲಿಂಗ ಶಿವಾಚಾರ್ಯರನ್ನು ಬಂಧಿಸಿದ ಪೊಲೀಸರ ಕ್ರಮ ವಿರೋಧಿಸಿ ನಗರದ ವಿಶ್ವ ಹಿಂದೂ ಪರಿಷತ್ ವತಿಯಿಂದ ಪ್ರತಿಭಟನೆ ನಡೆಸಿದ ಉಪ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು. ವಿಎಚ್ಪಿ ಗೌರವ ಅಧ್ಯಕ್ಷ ನಾಗರಾಜ ಮೇಲಗಿರಿ, ಅಧ್ಯಕ್ಷ ಚಂದ್ರಕಾಂತ ಗೊಬ್ಬುರಕರ್, ಪ್ರಧಾನ ಕಾರ್ಯದರ್ಶಿ ರಾಮು ಕುಸಾಳೆ ನೇತೃತ್ವದಲ್ಲಿ ಕಾರ್ಯಕರ್ತರು ಶ್ರೀರಾಮ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ನಡೆಸಿ ಉಪ ತಹಶೀಲ್ದಾರ್ ಕಚೇರಿಗೆ ತಲುಪಿದರು.
ಅಂದೋಲಾ ಕರುಣೇಶ್ವರ ಮಠವು ಪುರಾತನ ಮಠವಾಗಿದೆ. ರಾಜಕೀಯ ಪ್ರೇರಿತವಾಗಿ, ಹಿಂದು ಧರ್ಮದ ಆಂದೋಲಾ ಸ್ರಿàಗಳ ತೇಜೋವಧೆಗಾಗಿ ಅ. 30 ರಂದು ಅವರನ್ನು ಬಂಧಿಸಲಾದ ಕ್ರಮ ಖಂಡನೀಯವಾದದ್ದು. ಕೂಡಲೇ ಅವರನ್ನು ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ರಾಷ್ಟ್ರಪತಿಗಳಗೆ, ರಾಜ್ಯಪಾಲರಿಗೆ ಬರೆದ ಮನವಿ ಪತ್ರವನ್ನು ಉಪ ತಹಶೀಲ್ದಾರ ಮಲ್ಲಿಕಾರ್ಜುನ ಶಿವಪುರೆ ಅವರಿಗೆ ನೀಡಲಾಯಿತು.
ಪ್ರತಿಭಟನೆಯಲ್ಲಿ ಬಿಜೆಪಿ ನಗರ ಅಧ್ಯಕ್ಷ ಸುಭಾಷ ಜಾಪೂರ, ಕಾರ್ಮಿಕ ಮುಖಂಡ ಭೀಮರಾವ ಸಾಳೊಂಕೆ, ವಿರೇಶ ಬಂದಳ್ಳಿ, ಅರುಣಕುಮಾರ ಪಟ್ಟಣಕರ್, ಬಸವರಾಜ ಬಿರಾದಾರ, ಸಂಜಯ ಸೂಡಿ, ವಿಠಲ ಆನಚನಲ್, ಸಂತೋಷ ಪುಲಸೆ, ಅಂಬರೀಷ ಪುಲಸೆ, ಮಂಜುನಾಥ, ಶಿವಕುಮಾರ ತಳವಾರ, ವಿಶ್ವರಾಧ್ಯ ಸ್ವಾಮಿ ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ